ಮದುರೈನಲ್ಲಿ ಟೆಕ್ಕಿ ಕೊಲೆ, ವಲಸೆ ಕಾರ್ಮಿಕನ ಮೇಲೆ ಗುಮಾನಿ
ಮದುರೈ, ಡಿ. 21: ಮೂಲ, ವಲಸಿಗರು ಎಂಬ ಚರ್ಚೆ ಮತ್ತೊಮ್ಮೆ ತಮಿಳುನಾಡಿನಲ್ಲಿ ಮುನ್ನೆಲೆಗೆ ಬಂದಿದೆ. ಮದುರೈನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ರೊಬ್ಬರನ್ನು ಮನೆಯಲ್ಲೆ ಕೊಚ್ಚಿ ಕೊಲೆ ಮಾಡಲಾಗಿದೆ.
ಮದುರೈನ ಉಥಾಂಗಡಿಯಲ್ಲಿ ಶವವಾಗಿ ಪತ್ತೆಯಾಗಿರುವ ಸಾಫ್ಟ್ ವೇರ್ ಇಂಜಿನಿಯರ್ ರನ್ನು ಎ ಕುಮಾರನ್ ದಾಸ್ (43) ಎಂದು ಗುರುತಿಸಲಾಗಿದೆ. ಕೆ ಪೂದೂರಿನ ಲೌರ್ದು ನಗರದ ಮೂಲದವರಾಗಿದ್ದಾರೆ. ಪತ್ನಿ ಕೆ ಜೋಸಫೈನ್ ಹಾಗೀ ಇಬ್ಬರು ಮಕ್ಕಳು ತಿರುಚ್ಚಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.
ಉಥಾಂಗಡಿಯಲ್ಲಿ ಕೆಲ ತಿಂಗಳುಗಳ ಹಿಂದೆ ಬಾಡಿಗೆಗೆ ಮನೆ ಪಡೆದುಕೊಂಡಿದ್ದರು. ಇತ್ತೀಚೆಗೆ ನವೀನ್ ಎಂಬ ವಲಸೆ ಕಾರ್ಮಿಕರೊಬ್ಬನನ್ನು ಮನೆ ಕೆಲಸಕ್ಕಾಗಿ ನೇಮಿಸಿಕೊಂಡಿದ್ದರು.

ಭಾನುವಾರದಂದು ಕುಮಾರನ್ ದಾಸ್ ಮನೆ ಓನರ್ ನಟರಾಜನ್ ಅವರು ಕುಮಾರನ್ ಅವರಿಗೆ ಫೋನ್ ಕರೆ ಮಾಡಿದ್ದಾರೆ. ಆದರೆ, ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಮನೆ ಬಳಿ ಬಂದು ಪರಿಶೀಲಿಸಿದಾಗ, ಮನೆ ಬಾಗಿಲು ತೆರೆದಿತ್ತು, ರಕ್ತದ ಮಡುವಿನಲ್ಲಿ ಕುಮಾರನ್ ಶವ ಪತ್ತೆಯಾಗಿದೆ. ಮನೆಕೆಲಸದಾಳು ನವೀನ್ ನಾಪತ್ತೆಯಾಗಿರುವುದು ಪತ್ತೆಯಾಗಿದೆ.
ತಕ್ಷಣವೆ ಪೊಲೀಸರಿಗೆ ಈ ಬಗ್ಗೆ ತಿಳಿಸಿದ್ದಾರೆ. ಕೆ ಪುದೂರು ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ತಿಲಗವತಿ ಅವರು ಪಂಚನಾಮೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಆರ್ ಶಿವ ಪ್ರಸಾದ್ ಹೇಳಿದ್ದಾರೆ.
''ತಮಿಳುನಾಡಿನ ಜನರು ವಲಸೆ ಕಾರ್ಮಿಕರು, ಪರವೂರಿನ ಮಂದಿಯನ್ನು ಮನೆ ಕೆಲಸಕ್ಕೆ ಇಟ್ಟುಕೊಳ್ಳಬಾರದು. ಉತ್ತರಪ್ರದೇಶ, ಬಿಹಾರ ಮೂಲದ ವಲಸೆ ಕಾರ್ಮಿಕರು ಕ್ರಿಮಿನಲ್ ಮನಸ್ಥಿತಿ ಉಳ್ಳವರು, ಇವರ ಬಗ್ಗೆ ತಮಿಳುನಾಡು ಜನರು ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ'' ಎಂದು ಮನೆ ಓನರ್ ನಟರಾಜನ್ ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications