ಸಿಎಂ ಕೊವಿಡ್-19 ಪರಿಹಾರ ನಿಧಿಗೆ ದೇಣಿಗೆ ನೀಡಿದ ಬಾಲಕನಿಗೆ ಸೈಕಲ್ ಉಡುಗೊರೆ
ಚೆನ್ನೈ, ಮೇ 12: ತಮಿಳುನಾಡಿನಲ್ಲಿ ಮುಖ್ಯಮಂತ್ರಿಗಳ ಕೊವಿಡ್-19 ಪರಿಹಾರ ನಿಧಿಗೆ ನೆರವು ನೀಡಿದ 7 ವರ್ಷದ ಪುಟ್ಟ ಬಾಲಕ ಹರೀಶ್ ವರ್ಮನ್ ಅವರಿಗೆ ಸ್ವತಃ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ವಿಶೇಷ ಉಡುಗೊರೆ ಆಗಿ ಬ್ರಾಂಡೆಡ್ ಸೈಕಲ್ ಅನ್ನು ನೀಡಿದ್ದಾರೆ.
ಮಧುರೈ ಮೂಲದ ಎಲೆಕ್ಟ್ರಿಷಿಯನ್ ಅವರ ಪುತ್ರ ಹರೀಶ್ ವರ್ಮನ್ ಎರಡು ವರ್ಷಗಳಿಂದ ಸಂಗ್ರಹಿಸಿ ಇಟ್ಟಿದ್ದ 1,000 ರೂಪಾಯಿ ಹಣವನ್ನು ಸಿಎಂ ಕೊವಿಡ್-19 ಪರಿಹಾರ ನಿಧಿಗೆ ನೀಡಿದ್ದನು. ಬಾಲಕನ ಕಾರ್ಯದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿರುವ ಸಿಎಂ ಎಂ ಕೆ ಸ್ಟಾಲಿನ್ ಬಾಲಕನಿಗೆ ಸೈಕಲ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.
ಕೊರೊನಾವೈರಸ್ ಸೋಂಕಿನಿಂದ ಜನರು ನಿತ್ಯ ಅನುಭವಿಸುತ್ತಿದ್ದ ನರಕಯಾತನೆಯನ್ನು ನೋಡಿದ 7 ವರ್ಷದ ಬಾಲಕ ಹರೀಶ್ ತನ್ನ ಹಣವನ್ನು ಮುಖ್ಯಮಂತ್ರಿ ಕೊವಿಡ್-19 ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದ್ದನು. 1,000 ರೂಪಾಯಿ ಹಣದ ಜೊತೆಗೆ ಸಿಎಂ ಎಂ ಕೆ ಸ್ಟಾಲಿನ್ ಅವರಿಗೆ ಹರೀಶ್ ವರ್ಮನ್ ಪತ್ರವೊಂದನ್ನು ಬರೆದಿದ್ದರು. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿನಿಂದ ಸಮಸ್ಯೆ ಎದುರಿಸುತ್ತಿರುವ ಸಾರ್ವಜನಿಕರಿಗೆ ನೆರವು ನೀಡುವಂತೆ ಪತ್ರದಲ್ಲಿ ಬಾಲಕನು ಮನವಿ ಮಾಡಿಕೊಂಡಿದ್ದ.

ಬಾಲಕನ ಮನೆ ಬಾಗಿಲಿಗೆ ಸೈಕಲ್:
ಕಳೆದ ಮೇ 9ರ ಭಾನುವಾರ ಮಧುರೈ ಉತ್ತರ ಕ್ಷೇತ್ರದ ಶಾಸಕ ತಳಪಥಿ ಅವರು ತಮ್ಮ ಬೆಂಬಲಿಗರೊಂದಿಗೆ ಹರೀಶ್ ವರ್ಮನ್ ಅವರ ಮನೆಗೆ ಭೇಟಿ ನೀಡಿದರು. ಈ ವೇಳೆ ಬಾಲಕನಿಗಾಗಿ ಮುಖ್ಯಮಂತ್ರಿ ಸ್ಟಾಲಿನ್ ಅವರು ನೀಡಿದ ಕೆಂಪು-ನೀಲಿ ಬಣ್ಣದ ಸೈಕಲ್ ಅನ್ನು ಉಡುಗೊರೆಯಾಗಿ ನೀಡಿದರು. ಇದೇ ಸಂದರ್ಭದಲ್ಲಿ ದೂರವಾಣಿ ಮೂಲಕ ಬಾಲಕನ ಜೊತೆಗೆ ಮಾತನಾಡಿದ ಸಿಎಂ ಎಂ ಕೆ ಸ್ಟಾಲಿನ್, ಬಾಲಕನಿಗೆ ಧನ್ಯವಾದ ತಿಳಿಸಿದರು.
ஹரீஸ்வர்மன் என்ற சிறுவன் தனக்கு மிதிவண்டி வாங்குவதற்காக வைத்திருந்த உண்டியல் தொகையை #COVID19 தடுப்பிற்காக முதலமைச்சர் நிவாரண நிதிக்கு அனுப்பிய செய்தி கேட்டு நெகிழ்ந்தேன்.
— M.K.Stalin (@mkstalin) May 9, 2021
இத்தகைய உணர்வே தமிழகத்தின் வலிமை!
சிறுவனுக்கு மிதிவண்டி வாங்கிக் கொடுத்து தொலைபேசியில் அழைத்து வாழ்த்தினேன் pic.twitter.com/vNtWpj5SCe
ಸೈಕಲ್ ಪಡೆದ ಹರೀಶ್ ವರ್ಮನ್ ಸಂತಸ:
"ಅವರು ನನಗೆ ಸೈಕಲ್ ಇಷ್ಟವಾಯಿತೇ ಎಂದು ಕೇಳಿದರು. ನೀನು ಯಾವ ತರಗತಿ ವ್ಯಾಸಂಗ ಮಾಡುತ್ತಿದ್ದೀಯಾ ಎಂದು ಪ್ರಶ್ನೆ ಮಾಡದರು. ಇದರ ಜೊತೆಗೆ ಹೊರಗೆ ಓಡಾಡದಂತೆ ಹಾಗೂ ಕೊರೊನಾವೈರಸ್ ಬಗ್ಗೆ ಜಾಗೃತವಾಗಿರುವಂತೆ ಸಲಹೆ ನೀಡಿದರು" ಎಂದು ಸಿಎಂ ಜೊತೆ ಮಾತನಾಡಿದ ಹರೀಶ್ ವರ್ಮನ್ ತಿಳಿಸಿದ್ದಾರೆ.
ತಮಿಳುನಾಡು ಸಿಎಂ ಸ್ಟಾಲಿನ್ ಟ್ವೀಟ್:
"ಹರೀಶ್ ವರ್ಮನ್ ಎಂಬ ಬಾಲಕ ತಾನು ಸೈಕಲ್ ಖರೀದಿಸುವುದಕ್ಕಾಗಿ ಎರಡು ವರ್ಷದಿಂದ ಸಂಗ್ರಹಿಸಿ ಇಟ್ಟಿದ್ದ ಹಣವನ್ನು ಮುಖ್ಯಮಂತ್ರಿಗಳ ಕೊವಿಡ್-19 ಪರಿಹಾರ ನಿಧಿಗೆ ನೀಡಿದ್ದಾರೆ ಎಂಬ ಸುದ್ದಿಯನ್ನು ನಾನು ಮಾಧ್ಯಮಗಳ ಮೂಲಕ ತಿಳಿದುಕೊಂಡೆನು. ಆ ಬಾಲಕನಿಗಾಗಿ ನಾನು ಒಂದು ಸೈಕಲ್ ಅನ್ನು ಕೊಂಡುಕೊಂಡು ಆತನಿಗೆ ಉಡುಗೊರೆಯಾಗಿ ನೀಡಿದ್ದೇನೆ" ಎಂದು ಸಿಎಂ ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications