ತಮಿಳುನಾಡು ವಿಧಾನಸಭೆ ಚುನಾವಣೆ 2021; ಕಮಲ ಹಾಸನ್ ಪಕ್ಷದಿಂದ "ಉದ್ಯಮಕೆ ಕಾರ್ಯಸೂಚಿ" ಬಿಡುಗಡೆ
ಚೆನ್ನೈ, ಜನವರಿ 13: ನಟ ಹಾಗೂ ಮಕ್ಕಳ ನೀದಿಮಯ್ಯಂ ಮುಖಂಡ ಕಮಲ ಹಾಸನ್, ಮುಂಬರುವ ತಮಿಳು ನಾಡು ವಿಧಾನಸಭೆ 2021ರ ಚುನಾವಣೆ ಸಲುವಾಗಿ ಏಳು ಅಂಶಗಳ "ಉದ್ಯಮಕ್ಕೆ ಎಂಎನ್ ಎಂ ಕಾರ್ಯಸೂಚಿ" ಬಿಡುಗಡೆ ಮಾಡಿದ್ದಾರೆ. ಉದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡುವ ಕ್ರಮಗಳ ಕುರಿತು ಈ ಕಾರ್ಯಸೂಚಿಯಲ್ಲಿ ಪ್ರಸ್ತಾಪಿಸಲಾಗಿದೆ.
ಇದರಲ್ಲಿ ಹೊಸ ಉದ್ಯೋಗ ಮಾದರಿ ಹಾಗೂ ಸಂಭವನೀಯ ಸಚಿವಾಲಯ, ಪಕ್ಷ ಮುಂದಿಟ್ಟಿರುವ ಪ್ರಮುಖ ಪ್ರಸ್ತಾವಗಳಾಗಿವೆ. ಪಕ್ಷದ ಸಲುವಾಗಿ, ಕೈಗಾರಿಕಾ ಕ್ರಾಂತಿ 4.0ಗೆ ಉತ್ತೇಜನ ನೀಡಲು ವಿಜ್ಞಾನ ಹಾಗೂ ತಂತ್ರಜ್ಞಾನ, ಸ್ಟಾರ್ಟ್ ಅಪ್, ಆವಿಷ್ಕಾರಗಳಿಗೆ ಸಂಭವನೀಯ ಸಚಿವಾಲಯ ಸ್ಥಾಪಿಸಲಾಗುವುದು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.
ಪ್ರಸ್ತಾವಿತ ಹೊಸ ಉದ್ಯೋಗ ಮಾದರಿ ವಿನೂತನ ಪರಿಕಲ್ಪನೆಯಾಗಿದ್ದು, ಯಾವುದೇ ವ್ಯವಹಾರ ಮಾದರಿಯ ಪ್ರಸ್ತಾವನೆಯಿಂದ ಅನುಮೋದನೆಯವರೆಗೆ ಕಟ್ಟುನಿಟ್ಟಾದ ನಿಯಮಗಳನ್ನು ಅನುಸರಿಸಲಾಗುತ್ತದೆ ಎಂದು ಪಕ್ಷ ತಿಳಿಸಿದೆ.

ಪ್ರತಿ ಜಿಲ್ಲೆಯಲ್ಲಿಯೂ ಕೌಶಲ್ಯಾಭಿವೃದ್ಧಿಗೆ "ಸೂಪರ್ ಪಾರ್ಕ್"ಗಳನ್ನು ನಿರ್ಮಿಸಲಿದ್ದು, ಅಸಂಘಟಿತ ಕಾರ್ಮಿಕರನ್ನು ಬಲಪಡಿಸಲು ಇದು ನೆರವಾಗುತ್ತದೆ ಎಂದು ಪಕ್ಷ ಹೇಳಿಕೊಂಡಿದೆ. ಇದು ಕಾರ್ಮಿಕರಿಗೆ ವಿಮೆ, ನಿವೃತ್ತಿ ವೇತನ, ಉದ್ಯೋಗ ಭದ್ರತೆ ವಿಷಯಗಳನ್ನು ಒಳಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.
ಇದೇ ಏಪ್ರಿಲ್- ಮೇ ತಿಂಗಳಿನಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿದ್ದು, ಕಮಲ್ ಹಾಸನ್ ಚುನಾವಣಾ ಪ್ರಚಾರ ಕಾರ್ಯವನ್ನು ಈಗಾಗಲೇ ಆರಂಭಿಸಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price












Click it and Unblock the Notifications