ರಜನಿ ಭೇಟಿಗೆ ಮನೆ ಬಾಗಿಲಿಗೆ ಬಂದ ಮಲೇಷ್ಯಾ ಪ್ರಧಾನಿ
ಚೆನ್ನೈ, ಮಾರ್ಚ್ 31: ಸೂಪರ್ ಸ್ಟಾರ್ ರಜನಿಕಾಂತ್ ಭೇಟಿಯಾಗಲೆಂದೇ ಮಲೇಷ್ಯಾ ಪ್ರಧಾನಿ ಇವತ್ತು ಅವರ ಚೆನ್ನೈನ ನೆ ಬಾಗಿಲಿಗೆ ಬಂದಿದ್ದರು.
ಸಾಮಾನ್ಯವಾಗಿ ಸಿನಿಮಾ ನಟರನ್ನೆಲ್ಲಾ ಪ್ರವಾಸದ ವೇಳೆ ಪ್ರಧಾನಿಗಳು ಭೇಟಿಯಾಗುವುದು ಸಾಮಾನ್ಯ. ಆದರೆ ಅಪರೂಪದ ಸನ್ನಿವೇಶದಲ್ಲಿ ರಜನಿಕಾಂತ ಭೇಟಿಯಾಗಲೆಂದೇ ಮಲೇಷ್ಯಾ ಪ್ರಧಾನಿ ನಜೀಬ್ ರಝಾಕ್ ಚೆನ್ನೈ ತನಕ ಬಂದಿದ್ದರು.

ಈ ವೇಳೆ ರಜನಿಕಾಂತ್ ಮಲೇಷ್ಯಾ ಪ್ರಧಾನಿ ಜತೆ ಸೆಲ್ಫಿ ತೆಗೆದು ಪೋಸ್ಟ್ ಮಾಡಿದ್ದಾರೆ. ನಂತರ ಮಾಧ್ಯಮಗಳ ಜತೆ ಮಾತನಾಡಿದ ರಜನಿಕಾಂತ್, "ಕೆಲವು ಸಮಯದ ಹಿಂದೆ ಮಲೇಷ್ಯಾದಲ್ಲಿ ನಾನು ಸಿನಿಮಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದೆ. ಆದರೆ ಆಗ ಪ್ರಧಾನಿಗಳನ್ನು ಭೇಟಿಯಾಗಲು ಸಾಧ್ಯವಾಗಿರಲಿಲ್ಲ. ಅದಕ್ಕೆ ಈಗ ಭೇಟಿಯಾಗಿರುವುದಾಗಿ," ಹೇಳಿದ್ದಾರೆ.

ಇದೇ ವೇಳೆ ನಾನು ಮಲೇಷ್ಯಾ ಪ್ರವಾಸೋದ್ಯಮದ ರಾಯಭಾರಿಯಾಗುತ್ತಿಲ್ಲ ಎಂದು ರಜನಿಕಾಂತ್ ಸ್ಪಷ್ಟಪಡಿಸಿದ್ದು, ಇವೆಲ್ಲಾ ಗಾಳಿ ಸುದ್ದಿಗಳು ಎಂದು ಹೇಳಿದ್ದಾರೆ.
More From
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications