ಮುಖವಾಡ ತೊಟ್ಟ ಕಳ್ಳರಿಂದ ಲಲಿತಾ ಜ್ಯುವೆಲರ್ಸ್ನಿಂದ 50 ಕೋಟಿ ಮೌಲ್ಯದ ಆಭರಣ ಕಳವು
ತಿರುಚನಾಪಳ್ಳಿ, ಅಕ್ಟೋಬರ್ 2: ಹಾಲಿವುಡ್ನ 'ದಿ ಡಾರ್ಕ್ ನೈಟ್' ಸಿನಿಮಾದಲ್ಲಿ ಬ್ಯಾಟ್ಮನ್, ಜೋಕರ್ ಮುಖವಾಡ ಧರಿಸಿದ ವ್ಯಕ್ತಿಗಳು ಬ್ಯಾಂಕ್ ದರೋಡೆ ಮಾಡುವ ಕಥೆಯನ್ನು ನೆನಪಿಸುವ ಘಟನೆ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆದಿದೆ.
ತಿರುಚಿಯ ಚತಿರಾಮ್ ಬಸ್ ನಿಲ್ದಾಣದ ಸಮೀಪದ ಲಲಿತಾ ಜ್ಯುವೆಲರ್ಸ್ಗೆ ಬುಧವಾರ ನಸುಕಿನಲ್ಲಿ ಕನ್ನ ಹಾಕಿದ ಮುಖವಾಡ ತೊಟ್ಟ ಇಬ್ಬರು ವ್ಯಕ್ತಿಗಳು ಸುಮಾರು 50 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ್ದಾರೆ. ಆಭರಣದಂಗಡಿಯ ಗೋಡೆಯನ್ನು ಕೊರೆದು ಒಳನುಗ್ಗಿ ಕಳ್ಳತನ ಮಾಡಲಾಗಿದೆ. ಅಂಗಡಿ ಸಿಬ್ಬಂದಿ ಬೆಳಿಗ್ಗೆ 9 ಗಂಟೆಗೆ ಎಂದಿನಂತೆ ಮಳಿಗೆಯ ಬಾಗಿಲು ತೆರೆದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಬೆಳಗಿನ ಜಾವ 2-3 ಗಂಟೆ ಸಮಯದಲ್ಲಿ ಈ ಘಟನೆ ನಡೆದಿದೆ. ಪ್ರಾಣಿಗಳನ್ನು ಹೋಲುವ ಫ್ಯಾನ್ಸಿ ಮುಖವಾಡ ತೊಟ್ಟ ಇಬ್ಬರು ದುಷ್ಕರ್ಮಿಗಳು ಆಭರಣಗಳನ್ನು ಕದಿಯುತ್ತಿರುವುದು ಸಿಸಿಟಿವಿ ಕ್ಯಾಮೆರಾ ದೃಶ್ಯಗಳಲ್ಲಿ ಸೆರೆಯಾಗಿದೆ.

ಕೆಳಮಹಡಿಯಲ್ಲಿ ಇರಿಸಿದ್ದ ಎಲ್ಲ ಆಭರಣಗಳೂ ಕಳುವಾಗಿವೆ. ಅಂದಾಜಿನ ಪ್ರಕಾರ ಸುಮಾರು 35 ಕೆಜಿಯಷ್ಟು ಚಿನ್ನ ಹಾಗೂ ವಜ್ರದ ಆಭರಣಗಳನ್ನು ಕಳವು ಮಾಡಲಾಗಿದೆ. ಪೊಲೀಸ್ ಶ್ವಾನಗಳು ತಮ್ಮನ್ನು ಪತ್ತೆಹಚ್ಚದಂತೆ ಅವರು ಖಾರದ ಪುಡಿಗಳನ್ನು ಅಲ್ಲಿ ಚೆಲ್ಲಾಡಿದ್ದಾರೆ.
ವಿಧಿವಿಜ್ಞಾನ ಪ್ರಯೋಗದ ಪರಿಣತರು ಇಡೀ ಮಳಿಗೆಯನ್ನು ಜಾಲಾಡಿದ್ದಾರೆ. ಸ್ಕ್ರೂಡ್ರೈವರ್ ಮತ್ತು ಕೆಲವು ಸಾಧನಗಳು ಮಾತ್ರ ಅಲ್ಲಿ ಪತ್ತೆಯಾಗಿವೆ.

ಈ ವರ್ಷದ ಜನವರಿಯಿಂದ ತಿರುಚಿಯಲ್ಲಿ ನಡೆದಿರುವ ಬೃಹತ್ ಕಳ್ಳತನದ ಎರಡನೆಯ ಪ್ರಕರಣ ಇದಾಗಿದೆ. ಜನವರಿಯಲ್ಲಿ ಮುಸುಕುಧರಿಸಿದ್ದ ವ್ಯಕ್ತಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಶಾಖೆಯೊಂದಕ್ಕೆ ಕನ್ನ ಹಾಕಿ ಮೂರು ಲಾಕರ್ಗಳನ್ನು ಒಡೆದು 19 ಲಕ್ಷ ನಗದು, 470 ಸವರನ್ ಚಿನ್ನ ಮತ್ತು ದಾಖಲೆಗಳನ್ನು ಕದ್ದಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications