ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೇಕೆದಾಟು ಯೋಜನೆ : ಮೋದಿಗೆ ತಮಿಳುನಾಡು ಪತ್ರ

|
Google Oneindia Kannada News

ಚೆನ್ನೈ, ಜೂನ್ 24 : ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ತಮಿಳುನಾಡು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ. ಯೋಜನೆಗೆ ಸಂಬಂಧಿಸಿದಂತೆ ಡಿಪಿಆರ್ ತಯಾರು ಮಾಡಲು ಕರ್ನಾಟಕಕ್ಕೆ ಈಗಾಗಲೇ ಅನುಮತಿ ಸಿಕ್ಕಿದೆ.

ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಯೋಜನೆ ಕುರಿತು ವಿವರಣೆ ನೀಡಲು ಭೇಟಿಗೆ ಸಮಯಾವಕಾಶ ನೀಡುವಂತೆಯೂ ಮನವಿ ಮಾಡಿದ್ದಾರೆ.

ಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರಮೇಕೆದಾಟುವಿನಲ್ಲಿ ಜಲಾಶಯ ನಿರ್ಮಾಣಕ್ಕೆ ಒಪ್ಪಿಗೆ ನೀಡಿಲ್ಲ : ಕೇಂದ್ರ ಸರ್ಕಾರ

Mekedatu project : Tamil Nadu CM letter to Modi

ಮೇಕೆದಾಟು ಯೋಜನೆಗೆ ಸಂಪೂರ್ಣ ಒಪ್ಪಿಗೆ ನೀಡಬೇಕು ಎಂದು ಪರಿಸರ ಇಲಾಖೆಗೆ ಕರ್ನಾಟಕ ಸರ್ಕಾರ ಪತ್ರ ಬರೆದಿದೆ. ಈ ಪತ್ರ ಬರೆದ ಬೆನ್ನಲ್ಲಿಯೇ ತಮಿಳುನಾಡು ಸರ್ಕಾರ ಪ್ರಧಾನಿಗಳಿಗೆ ಪತ್ರ ಬರೆದು ಯೋಜನೆಗೆ ಅನುಮತಿ ನೀಡಬಾರದು ಎಂದು ಮನವಿ ಮಾಡಿದೆ.

ಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿಚಿತ್ರಗಳು : ಮೇಕೆದಾಟುಗೆ ಸಚಿವ ಡಿ.ಕೆ.ಶಿವಕುಮಾರ್ ಭೇಟಿ

ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣವಾದರೆ ನಮ್ಮ ಪಾಲಿನ ನೀರಿಗೆ ಧಕ್ಕೆ ಉಂಟಾಗಲಿದೆ. ಈಗಾಗಲೇ ಯೋಜನೆಗೆ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ಯಾವುದೇ ಕಾರಣಕ್ಕೂ ಯೋಜನೆ ಜಾರಿಗೆ ಸಂಪೂರ್ಣ ಒಪ್ಪಿಗೆ ನೀಡಬೇಡಿ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?ಮೇಕೆದಾಟು ಯೋಜನೆ : ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹೇಳಿದ್ದೇನು?

ಕರ್ನಾಟಕ ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಪತ್ರ ಬರೆದ ತಕ್ಷಣ ತಮಿಳುನಾಡು ಪ್ರಧಾನಿಗಳಿಗೆ ಈ ಪತ್ರವನ್ನು ಬರೆದಿದೆ. ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ವಿವರ ಯೋಜನಾ ವರದಿ (ಡಿಪಿಆರ್) ತಯಾರಿಸಲು ಕೇಂದ್ರ ಸರ್ಕಾರ ನೀಡಿರುವ ತಾತ್ವಿಕ ಅನುಮೋದನೆ ಬೇಷರತ್ತಿನದಲ್ಲ. ಷರತ್ತು ಬದ್ಧ ಅನುಮೋದನೆ ಕೇವಲ ಡಿಪಿಆರ್ ತಯಾರಿಕೆಗೆ ಮಾತ್ರ ಸೀಮಿತ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

English summary
Edappadi K. Palaniswami Chief Minister of Tamil Nadu written a letter to Prime Minister Narendra Modi not to give approval for Mekedatu drinking water project of Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X