ಎಂಜಿಆರ್, ಜಯಲಲಿತಾ ಸ್ಮಾರಕದಲ್ಲಿ ಮೋದಿ, ಅಮಿತ್ ಶಾ ಚಿತ್ರ
ಮದುರೈ, ಮಾರ್ಚ್ 23: ಮಾಜಿ ತಮಿಳುನಾಡು ಸಿ.ಎಂ, ದಿ. ಜಯಲಲಿತಾ ಹಾಗೂ ಎಂ.ಜಿ. ರಾಮಚಂದ್ರನ್ ಅವರ ನೆನಪಿಗಾಗಿ ನಿರ್ಮಿಸಿದ ಸ್ಮಾರಕಗಳ ಒಳಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಒಳಗೊಂಡಂತೆ ಬಿಜೆಪಿಯ ಹಲವು ಮುಖಂಡರ ಚಿತ್ರಗಳನ್ನು ಹಾಕಲಾಗಿದೆ.
ಜಯಲಲಿತಾ ಅವರ ಧೈರ್ಯ ಹಾಗೂ ತ್ಯಾಗಗಳನ್ನು ಜಗತ್ತಿಗೇ ಸಾರುವ ಸಲುವಾಗಿ ಈ ಸ್ಮಾರಕ ನಿರ್ಮಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಆರ್.ಬಿ. ಉದಯ್ ಕುಮಾರ್ ತಿಳಿಸಿದ್ದು, ಬಿಜೆಪಿ ನಾಯಕರ ಚಿತ್ರಗಳನ್ನು ಸ್ಮಾರಕದ ಒಳಗೆ ಬಳಸಿದ್ದಕ್ಕೆ ಸಮರ್ಥನೆ ನೀಡಿದ್ದಾರೆ.
"ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶಕ್ಕೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಜೆ.ಪಿ. ನಡ್ಡಾ ಆರೋಗ್ಯ ಸಚಿವರಾಗಿದ್ದಾಗ ಮದುರೈನಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣವಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಮದುರೈನವರಾಗಿರುವುದು ನಮಗೆ ಹೆಮ್ಮೆಯ ಸಂಗತಿ. ಹೀಗಾಗಿಯೇ ಎಂ.ಜಿ.ರಾಮಚಂದ್ರನ್ ಮತ್ತು ಜಯಲಲಿತಾ ಅವರ ಸ್ಮಾರಕದ ಒಳಗೆ ಬಿಜೆಪಿ ನಾಯಕರ ಫೋಟೊಗಳನ್ನು ಇಡಲಾಗಿದೆ" ಎಂದು ಹೇಳಿದರು.

ನಮ್ಮ ಚುನಾವಣಾ ಪ್ರಚಾರ ವೈಖರಿಯನ್ನು ಜನರು ಸ್ವಾಗತಿಸಿದ್ದಾರೆ. ಇಲ್ಲಿ ನಮಗೆ ಯಶಸ್ಸು ಸಿಗುವ ಭರವಸೆಯಿದೆ. ನಾಲ್ಕು ವರ್ಷಗಳಿಂದ ನಾನು ಸ್ಮಾರಕ ನಿರ್ಮಾಣಕ್ಕೆ ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ.
ಜಯಲಲಿತಾ ಅವರು 2016ರ ಡಿಸೆಂಬರ್ 5ರಂದು ನಿಧನರಾದರು. ಎಂಜಿಆರ್ 1987ರ ಡಿಸೆಂಬರ್ 24ರಂದು ನಿಧನರಾಗಿದ್ದರು. ಇವರಿಬ್ಬರ ಸ್ಮರಣಾರ್ಥ ಕುಮಾರ್ ಅವರ ನೇತೃತ್ವದಲ್ಲಿ ತಿರುಮಂಗಲಂ ಬಳಿಯ ಟಿ. ಕುನಥೂರಿನಲ್ಲಿ 12 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ಇದೇ ಜನವರಿಯಿಂದ ಸ್ಮಾರಕವನ್ನು ತೆರೆಯಲಾಗಿದೆ.
ಏಪ್ರಿಲ್ 6ರಂದು ತಮಿಳುನಾಡಿನ 234 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಎಐಎಡಿಎಂಕೆ ಮೈತ್ರಿಯೊಂದಿಗೆ ಬಿಜೆಪಿ ಸ್ಪರ್ಧಿಸುತ್ತಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications