ಎಂಜಿಆರ್, ಜಯಲಲಿತಾ ಸ್ಮಾರಕದಲ್ಲಿ ಮೋದಿ, ಅಮಿತ್ ಶಾ ಚಿತ್ರ
ಮದುರೈ, ಮಾರ್ಚ್ 23: ಮಾಜಿ ತಮಿಳುನಾಡು ಸಿ.ಎಂ, ದಿ. ಜಯಲಲಿತಾ ಹಾಗೂ ಎಂ.ಜಿ. ರಾಮಚಂದ್ರನ್ ಅವರ ನೆನಪಿಗಾಗಿ ನಿರ್ಮಿಸಿದ ಸ್ಮಾರಕಗಳ ಒಳಗೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಒಳಗೊಂಡಂತೆ ಬಿಜೆಪಿಯ ಹಲವು ಮುಖಂಡರ ಚಿತ್ರಗಳನ್ನು ಹಾಕಲಾಗಿದೆ.
ಜಯಲಲಿತಾ ಅವರ ಧೈರ್ಯ ಹಾಗೂ ತ್ಯಾಗಗಳನ್ನು ಜಗತ್ತಿಗೇ ಸಾರುವ ಸಲುವಾಗಿ ಈ ಸ್ಮಾರಕ ನಿರ್ಮಿಸಲಾಗಿದೆ ಎಂದು ರಾಜ್ಯ ಕಂದಾಯ ಸಚಿವ ಆರ್.ಬಿ. ಉದಯ್ ಕುಮಾರ್ ತಿಳಿಸಿದ್ದು, ಬಿಜೆಪಿ ನಾಯಕರ ಚಿತ್ರಗಳನ್ನು ಸ್ಮಾರಕದ ಒಳಗೆ ಬಳಸಿದ್ದಕ್ಕೆ ಸಮರ್ಥನೆ ನೀಡಿದ್ದಾರೆ.
"ಪ್ರಧಾನಿ ಮೋದಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ದೇಶಕ್ಕೆ ಸಾಕಷ್ಟು ಯೋಜನೆಗಳನ್ನು ನೀಡಿದೆ. ಜೆ.ಪಿ. ನಡ್ಡಾ ಆರೋಗ್ಯ ಸಚಿವರಾಗಿದ್ದಾಗ ಮದುರೈನಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣವಾಯಿತು. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ ಮದುರೈನವರಾಗಿರುವುದು ನಮಗೆ ಹೆಮ್ಮೆಯ ಸಂಗತಿ. ಹೀಗಾಗಿಯೇ ಎಂ.ಜಿ.ರಾಮಚಂದ್ರನ್ ಮತ್ತು ಜಯಲಲಿತಾ ಅವರ ಸ್ಮಾರಕದ ಒಳಗೆ ಬಿಜೆಪಿ ನಾಯಕರ ಫೋಟೊಗಳನ್ನು ಇಡಲಾಗಿದೆ" ಎಂದು ಹೇಳಿದರು.

ನಮ್ಮ ಚುನಾವಣಾ ಪ್ರಚಾರ ವೈಖರಿಯನ್ನು ಜನರು ಸ್ವಾಗತಿಸಿದ್ದಾರೆ. ಇಲ್ಲಿ ನಮಗೆ ಯಶಸ್ಸು ಸಿಗುವ ಭರವಸೆಯಿದೆ. ನಾಲ್ಕು ವರ್ಷಗಳಿಂದ ನಾನು ಸ್ಮಾರಕ ನಿರ್ಮಾಣಕ್ಕೆ ಪ್ರಯತ್ನಿಸಿದ್ದೆ ಎಂದು ಹೇಳಿದ್ದಾರೆ.
ಜಯಲಲಿತಾ ಅವರು 2016ರ ಡಿಸೆಂಬರ್ 5ರಂದು ನಿಧನರಾದರು. ಎಂಜಿಆರ್ 1987ರ ಡಿಸೆಂಬರ್ 24ರಂದು ನಿಧನರಾಗಿದ್ದರು. ಇವರಿಬ್ಬರ ಸ್ಮರಣಾರ್ಥ ಕುಮಾರ್ ಅವರ ನೇತೃತ್ವದಲ್ಲಿ ತಿರುಮಂಗಲಂ ಬಳಿಯ ಟಿ. ಕುನಥೂರಿನಲ್ಲಿ 12 ಎಕರೆ ಜಾಗದಲ್ಲಿ ನಿರ್ಮಿಸಲಾಗಿದೆ. ಇದೇ ಜನವರಿಯಿಂದ ಸ್ಮಾರಕವನ್ನು ತೆರೆಯಲಾಗಿದೆ.
ಏಪ್ರಿಲ್ 6ರಂದು ತಮಿಳುನಾಡಿನ 234 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಎಐಎಡಿಎಂಕೆ ಮೈತ್ರಿಯೊಂದಿಗೆ ಬಿಜೆಪಿ ಸ್ಪರ್ಧಿಸುತ್ತಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications