ಕೊಯಮತ್ತೂರಿನಲ್ಲಿ ಪೆರಿಯಾರ್ ಪ್ರತಿಮೆ ಅಪವಿತ್ರಗೊಳಿಸಿದ ದುಷ್ಕರ್ಮಿಗಳು
ಕೊಯಮತ್ತೂರು ಜನವರಿ 9: ತಮಿಳುನಾಡಿನ ಕೊಯಮತ್ತೂರಿನಲ್ಲಿ ಪೆರಿಯಾರ್ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸಮಾಜ ಸುಧಾರಕ ಪೆರಿಯಾರ್ ಇವಿ ರಾಮಸಾಮಿ ಅವರ ಪ್ರತಿಮೆ ಭಾನುವಾರ ಬೆಳಗ್ಗೆ ಅಪವಿತ್ರಗೊಂಡಿರುವುದು ಕಂಡುಬಂದಿದೆ. ವೆಲ್ಲಲೂರಿನ ಪೆರಿಯಾರ್ ಅಧ್ಯಯನ ಕೇಂದ್ರದ ಮುಂಭಾಗದಲ್ಲಿರುವ ಪ್ರತಿಮೆಗೆ ಚಪ್ಪಲಿಯಿಂದ ಹಾರ ಹಾಕಿರುವುದು ಕಂಡುಬಂದಿದೆ. ತಲೆಗೆ ಕೇಸರಿ ಬಣ್ಣದ ಪುಡಿ ಎರಚಲಾಗಿದೆ.
ಈ ದುಷ್ಕೃತ್ಯವನ್ನು ಖಂಡಿಸಿ ಸ್ಥಳೀಯರು ದ್ರಾವಿಡ ಕಳಗಂ (ಡಿಕೆ) ಸದಸ್ಯರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ಪೋದನೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಸಿಬ್ಬಂದಿಯ ತಂಡ ಸ್ಥಳಕ್ಕೆ ಆಗಮಿಸಿ ವಿಚಾರಣೆ ನಡೆಸಿದೆ. ಪೊಲೀಸರು ಮತ್ತು ದ್ರಾವಿಡ ಕಳಗಂ ಕಾರ್ಯಕರ್ತರು ಪ್ರತಿಮೆಯನ್ನು ಪರಿಶೀಲಿಸಿ ಕೇಸರಿ ಬಣ್ಣದ ಪುಡಿಯನ್ನು ತೆರವುಗೊಳಿಸಿದ್ದಲ್ಲದೆ ಚಪ್ಪಲಿಗಳನ್ನು ತೆಗೆದಿದ್ದಾರೆ. ಬಳಿಕ ದ್ರಾವಿಡ ಕಳಗಂ ಕಾರ್ಯಕರ್ತರು ಪ್ರತಿಮೆ ಎದುರು ಪ್ರತಿಭಟನೆ ನಡೆಸಿದರು. ಅಪಮಾನ ಮಾಡಿದವರನ್ನು ಪೊಲೀಸರು ಬಂಧಿಸಬೇಕು ಎಂದು ಒತ್ತಾಯಿಸಿದರು.
ಪೊಲೀಸರ ಭರವಸೆ ಮೇರೆಗೆ ಪ್ರತಿಭಟನೆ ಹಿಂಪಡೆದರು. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಪೊಲೀಸರು ಆ ಪ್ರದೇಶದಲ್ಲಿನ ಕೆಲವು ಕಣ್ಗಾವಲು ಕ್ಯಾಮೆರಾಗಳಿಂದ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.

Recommended Video
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications