ಕರುಣಾನಿಧಿ ಸಾವಿನ ಬೆನ್ನಲ್ಲೇ ಕುಟುಂಬದಲ್ಲಿ ಶುರುವಾಯಿತು ತಿಕ್ಕಾಟ
ಚೆನ್ನೈ ಆಗಸ್ಟ್ 13: ಡಿಎಂಕೆ ಮುಖ್ಯಸ್ಥರಾಗಿದ್ದ ಮಾಜಿ ಮುಖ್ಯಮಂತ್ರಿ ಎಂ. ಕರುಣಾನಿಧಿ ನಿಧನದ ಬೆನ್ನಲ್ಲೇ ಕುಟುಂಬದಲ್ಲಿನ ಒಡಕು ಭುಗಿಲೇಳುವ ಸೂಚನೆ ದೊರೆತಿದೆ.
ಕರುಣಾನಿಧಿ ಮೃತಪಟ್ಟು ಒಂದು ವಾರ ಕೂಡ ಕಳೆಯುವ ಮುನ್ನವೇ ಉತ್ತರಾಧಿಕಾರಿ ಪಟ್ಟಕ್ಕಾಗಿ ಅವರ ಮಕ್ಕಳಾದ ಎಂ.ಕೆ. ಸ್ಟಾಲಿನ್ ಮತ್ತು ಎಂ.ಕೆ. ಅಳಗಿರಿ ರಾಜಕೀಯ ಸಮರ ಬೀದಿಗೆ ಬಂದಿದೆ.
'ನಿಜವಾದ ಡಿಎಂಕೆ ಅನುಯಾಯಿಗಳು ನನ್ನನ್ನು ಬೆಂಬಲಿಸುತ್ತಾರೆ. ಪಕ್ಷದ ಎಲ್ಲ ನಾಯಕರು ನನ್ನ ಜತೆಗಿದ್ದಾರೆ ಎಂದು ಎಂ.ಕೆ. ಅಳಗಿರಿ ಹೇಳಿಕೆ ನೀಡಿದ್ದಾರೆ.

ಮರೀನಾ ಬೀಚ್ನಲ್ಲಿನ ಕರುಣಾನಿಧಿ ಅವರ ಸಮಾಧಿಗೆ ಸೋಮವಾರ ಕುಟುಂಬದವರ ಜತೆ ಗೌರವ ಸಲ್ಲಿಸಿದ ಅಳಗಿರಿ, ಕುಟುಂಬ ರಾಜಕಾರಣದ ಜಿದ್ದಾಜಿದ್ದಿಯ ಸುಳಿವು ನೀಡಿದ್ದಾರೆ.
ಕಾಲವೇ ಎಲ್ಲದಕ್ಕೂ ಉತ್ತರ ನೀಡಲಿದೆ. ಪಕ್ಷದಲ್ಲಿ ಏನು ನಡೆಯುತ್ತಿದೆಯೋ ಅದು ನನಗೆ ತೀವ್ರ ನೋವುಂಟುಮಾಡಿದೆ. ನಾನು ಡಿಎಂಕೆಯ ಭಾಗವಲ್ಲ ಎಂದು ಅಳಗಿರಿ ಹೇಳಿದ್ದಾರೆ.
ಅತ್ತ ಡಿಎಂಕೆಯ ಮುಖ್ಯಸ್ಥ ಸ್ಥಾನಕ್ಕೆ ಸ್ಟಾಲಿನ್ ಅವರನ್ನು ನೇಮಿಸುವ ಚರ್ಚೆ ತೀವ್ರಗೊಂಡಿರುವಂತೆಯೇ ಅಳಗಿರಿ ಅವರನ್ನು ಪಕ್ಷಕ್ಕೆ ಮರು ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ.

ಡಿಎಂಕೆಯ ಸಾಮಾನ್ಯ ಸಭೆ ಮುಂದಿನ ತಿಂಗಳು ನಡೆಯುವ ಸಾಧ್ಯತೆಯಿದ್ದು, ಹಾಲಿ ಕಾರ್ಯಾಧ್ಯಕ್ಷರಾಗಿರುವ ಸ್ಟಾಲಿನ್ ಅವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವ ಉದ್ದೇಶ ಹೊಂದಲಾಗಿದೆ. ಆದರೆ, ಅದಕ್ಕೆ ಮುನ್ನವೇ ಡಿಎಂಕೆಯಲ್ಲಿ ಒಡಕು ಮೂಡುವ ಲಕ್ಷಣಗಳು ಕಾಣಿಸಿವೆ.
ಅಳಗಿರಿ ಮತ್ತು ಸ್ಟಾಲಿನ್ ನಡುವಣ ಕದನ ಹಲವು ವರ್ಷಗಳ ಹಿಂದೆಯೇ ಆರಂಭವಾಗಿತ್ತು. ಪಕ್ಷದ ಹಿರಿಯ ನಾಯಕರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಿದ ಆರೋಪದಲ್ಲಿ ಅಳಗಿರಿ ಅವರನ್ನು ಕರುಣಾನಿಧಿ 2014ರಲ್ಲಿ ಪಕ್ಷದಿಂದ ಉಚ್ಚಾಟಿಸಿದ್ದರು.
ಈ ಸಂದರ್ಭದಲ್ಲಿ ಪಕ್ಷ ಹಾಗೂ ಸ್ಟಾಲಿನ್ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ಕರುಣಾನಿಧಿ, ಅಳಗಿರಿ ಅವರಿಗೆ ಸೂಚಿಸಿದ್ದರು. ಅಂದಿನಿಂದ ಯಾವುದೇ ಹೇಳಿಕೆ ನೀಡದೆ ಮೌನವಹಿಸಿದ್ದ ಅಳಗಿರಿ, ಈಗ ಮತ್ತೆ ಬಹಿರಂಗವಾಗಿ ಸಹೋದರನೊಂದಿಗಿನ ಕದನದ ಸೂಚನೆ ನೀಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications