ಆ. 28ರಂದು ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಸ್ಟಾಲಿನ್ ಘೋಷಣೆ ಬಹುತೇಕ ಖಚಿತ
ಚೆನ್ನೈ, ಆಗಸ್ಟ್ 26: ಸದ್ಯಕ್ಕೆ ದ್ರಾವಿಡ ಮುನ್ನೆಟ್ರ ಕಳಗಂ (ಡಿಎಂಕೆ) ಕಾರ್ಯಾಧ್ಯಕ್ಷರಾಗಿರುವ ಎಂ.ಕೆ.ಸ್ಟಾಲಿನ್ ಭಾನುವಾರದಂದು ಚೆನ್ನೈನಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲಿ (ಅಣ್ಣಾ ಅರಿವಾಲಯಂ) ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. ದೀರ್ಘಾವಧಿ ಕಾಲಕ್ಕೆ ಡಿಎಂಕೆಗೆ ಅಧ್ಯಕ್ಷರಾಗಿದ್ದ ಎಂ.ಕರುಣಾನಿಧಿ ನಿಧನದಿಂದ ಆ ಸ್ಥಾನ ತೆರವಾಗಿದೆ.
ಹಿರಿಯ ನಾಯಕ ದುರೈಮುರುಗನ್ ಖಜಾಂಚಿ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ಆಗಸ್ಟ್ 28ರಂದು ಚೆನ್ನೈನಲ್ಲಿ ನಡೆಯಲಿರುವ ಪಕ್ಷದ ಸಾಮಾನ್ಯ ಸಭೆಯಲ್ಲಿ ಇವರಿಬ್ಬರ ಆಯ್ಕೆ ಆಗುವ ಸಾಧ್ಯತೆಗಳಿವೆ. ನಾಮಪತ್ರ ಸಲ್ಲಿಕೆಗೂ ಮುನ್ನ ಸ್ಟಾಲಿನ್, ದುರೈ ಮುರುಗನ್ ಹಾಗೂ ಟಿ.ಆರ್.ಬಾಲು, ಎ.ರಾಜಾ ಸೇರಿ ಗೋಪಾಲಪುರಂನ ನಿವಾಸದಲ್ಲಿ ಕರುಣಾನಿಧಿ ಅವರ ಪತ್ನಿ ದಯಾಳು ಅಮ್ಮಾಳ್ ರನ್ನು ಭೇಟಿ ಮಾಡಿದರು.

ಆ ನಂತರ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಅನ್ಬಳಗನ್ ರನ್ನು ಭೇಟಿ ಮಾಡಿದರು. ಅಲ್ಲಿಂದ ಮರೀನಾ ಬೀಚ್ ನಲ್ಲಿರುವ ಡಿಎಂಕೆ ಸ್ಥಾಪಕ ಸಿ.ಎನ್.ಅಣ್ಣಾದುರೈ ಹಾಗೂ ಕರುಣಾನಿಧಿ ಸ್ಮಾರಕಕ್ಕೆ ನೇರವಾಗಿ ತೆರಳಿದರು. ಅಲ್ಲಿ ಹೂವಿನ ಗುಚ್ಛಗಳನ್ನು ಇರಿಸಿ, ಗೌರವ ಸಲ್ಲಿಸಿದರು. ಡಿಎಂಕೆ ಪಕ್ಷದ ಎಲ್ಲ ಅರವತ್ತೈದು ಜಿಲ್ಲಾ ಕಾರ್ಯದರ್ಶಿಗಳು ಸ್ಟಾಲಿನ್ ಹಾಗೂ ದುರೈಮುರುಗನ್ ಹೆಸರನ್ನು ಅಧ್ಯಕ್ಷ ಹಾಗೂ ಖಜಾಂಚಿ ಹುದ್ದೆಗೆ ಪ್ರಸ್ತಾಪಿಸಿದ್ದಾರೆ.
ಸ್ಟಾಲಿನ್ ಹಾಗೂ ದುರೈ ಮುರುಗನ್ ಅವಿರೋಧವಾಗಿ ಆಯ್ಕೆ ಆಗುವುದು ಬಹುತೇಕ ಖಚಿತವಾಗಿದೆ ಎಂದು ಎ.ರಾಜಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications