ಕೆಸಿಆರ್ ಪ್ರಧಾನಿ ಪಟ್ಟದ ಕನಸಿಗೆ ಅದೊಂದು ಮಾತಿಂದ ಕೊಳ್ಳಿ ಇಟ್ಟ ಸ್ಟಾಲಿನ್!
ಚೆನ್ನೈ, ಮೇ 14: ಡಿಎಂಕೆ ಮುಖಂಡ ಎಂಕೆ ಸ್ಟಾಲಿನ್ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರ 'ಸೌಜನ್ಯದ ಭೇಟಿ' ಸೋಮವಾರ ಮುಗಿದಿದೆ!
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ತೃತೀಯ ರಂಗಕ್ಕೆ ತನ್ನ ಬೆಂಬಲವಿಲ್ಲ ಎಂದು ಸಭೆಯಲ್ಲಿ ಸ್ಟಾಲಿನ್ ಸ್ಪಷ್ಟವಾಗಿ ಹೇಳಿದ್ದು, ಕೆ ಚಂದ್ರಶೇಖರ್ ರಾವ್ ಅವರ ಪ್ರಧಾನಿಯಾಗುವ ಕನಸಿಗೂ ಕೊಳ್ಳಿ ಇಡುವಂಥ ಮಾತನ್ನು ಸ್ಟಾಲಿನ್ ಹೇಳಿದ್ದಾರೆ.
"ಕಾಂಗ್ರೆಸ್ ಜೊತೆ ನಾವು ಈಗಾಗಲೇ ಮೈತ್ರಿ ಮಾಡಿಕೊಂಡಿದ್ದೇವೆ. ಮೈತ್ರಿಯಿಂದ ಹೊರಬರುವುದು ಸಾಧ್ಯವಿಲ್ಲದ ಮಾತು" ಎಂದ ಸ್ಟಾಲಿನ್, ಹಾಗೆಯೇ ಮುಂದುವರಿದು, "ನಾನು ಪ್ರಧಾನಿ ಪಟ್ಟಕ್ಕೆ ಈಗಾಗಲೇ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೆಸರನ್ನು ಸೂಚಿಸಿದ್ದೇನೆ. ನನ್ನ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ" ಎಂದರು.

ಪ್ರಧಾನಿ ಹುದ್ದೆಯ ಕನಸನ್ನೂ ಜೇಬಿನಲ್ಲೇ ಇಟ್ಟುಕೊಂಡು ಸ್ಟಾಲಿನ್ ಬಳಿ ತೆರಳಿದ್ದ ಕೆಸಿಆರ್ ಅವರಿಗೆ ಸ್ಟಾಲಿನ್ ಅವರ ಈ ಮಾತು ತೀವ್ರ ಮುಖಭಂಗವನ್ನುಂಟು ಮಾಡಿದೆ. 'ನಿಮ್ಮನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ನಾವು ಸಿದ್ಧರಿಲ್ಲ' ಎಂಬ ಸಂದೇಶವನ್ನೂ ಈ ಮಾತಿನಲ್ಲಿ ಪರೋಕ್ಷವಾಗಿ ಸ್ಟಾಲಿನ್ ನೀಡಿದ್ದಾರೆ. ಈ ಮೂಲಕ ಅವರ ಪ್ರಧಾನಿ ಹುದ್ದೆಯ ಕನಸಿಗೆ ಕೊಳ್ಳಿ ಇಟ್ಟಿದ್ದಾರೆ ಸ್ಟಾಲಿನ್!
ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಆಚೆ ಇಟ್ಟು ತೃತೀಯ ರಂಗ ರಚಿಸುವ ಬಗ್ಗೆ ಕೆ ಚಂದ್ರಶೇಖರ್ ರಾವ್ ಓಡಾಡುತ್ತಿದ್ದರು. ಈಗಾಗಲೇ ಅವರು ಕೇರಳ ಮುಖ್ಯಮಂತ್ರಿ, ಸಿಪಿಐಎಂ ಮುಖಂಡ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಜೊತೆಗೆ ಕರ್ನಾತಕ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ಅವರೊಂದಿಗೂ ಮಾತುಕತೆ ನಡೆಸಿದ್ದರು. ಅದೇ ಕಾರಣಕ್ಕಾಗಿಯೇ ಕಳೆದ ವಾರವೇ ಸ್ಟಾಲಿನ್ ಅವರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದ ಅವರಿಗೆ, 'ಚುನಾವಣೆ ಕೆಲಸಲದಲ್ಲಿ ನಾನು ಬ್ಯುಸಿ' ಎನ್ನುವ ಮೂಲಕ ಸ್ಟಾಲಿನ್ ಮುಖಭಂಗವನ್ನುಂಟು ಮಾಡಿದ್ದರು. ಆದರೂ ಪಟ್ಟು ಬಿಡದ ಕೆಸಿಆರ್ ಮತ್ತೊಮ್ಮೆ ಸ್ಟಾಲಿನ್ ಭೇಟಿಗೆ ತೆರಳಿ, ಮತ್ತದೇ ಪ್ರತಿಕ್ರಿಯೆ ಪಡೆದಿದ್ದಾರೆ!
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications