ಮತಗಟ್ಟೆಯಲ್ಲಿ ಕಮಲ ಹಾಸನ್ರನ್ನು ಮುತ್ತಿಕೊಂಡ ಜನರು
ಚೆನ್ನೈ, ಏಪ್ರಿಲ್ 6: ನಟ ಹಾಗೂ ಮಕ್ಕಳ್ ನೀಧಿ ಮಯ್ಯಮ್ (ಎಂಎನ್ಎಂ) ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರು ತಮ್ಮ ಮಕ್ಕಳಾದ ಶ್ರುತಿ ಮತ್ತು ಅಕ್ಷರಾ ಜತೆ ಮತ ಚಲಾಯಿಸಲು ಮತಗಟ್ಟೆಗೆ ಬಂದ ಸಂದರ್ಭದಲ್ಲಿ ಜನರು ಮುತ್ತಿಕೊಂಡ ಪರಿಣಾಮ ತೀವ್ರ ಗದ್ದಲ ಸೃಷ್ಟಿಯಾಯಿತು. ಇದರಿಂದ ಮತ ಚಲಾವಣೆಗೆ ಕೆಲ ಸಮಯ ತೊಡಕು ಉಂಟಾಯಿತು.
ಚೆನ್ನೈನ ಟೇಯ್ನಂಪೇಟೆಯ ಚೆನ್ನೈ ಹೈಸ್ಕೂಲ್ನಲ್ಲಿನ ಮತಗಟ್ಟೆಗೆ ಮಂಗಳವಾರ ಬೆಳಿಗ್ಗೆಯೇ ಕಮಲ ಹಾಸನ್ ಆಗಮಿಸಿದ್ದರು. ಅವರೊಂದಿಗೆ ಶ್ರುತಿ ಹಾಸನ್ ಮತ್ತು ಅಕ್ಷರಾ ಹಾಸನ್ ಕೂಡ ಮತ ಚಲಾಯಿಸಲು ಬಂದಿದ್ದರು. ಆಗ ಮತದಾರರು ಅವರನ್ನು ಮುತ್ತಿಕೊಂಡರು. ಮತಗಟ್ಟೆಗೆ ತಡವಾಗಿ ತೆರಳಿದರೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಇರುವುದರಿಂದ ಗೊಂದಲ, ಗದ್ದಲ ಉಂಟಾಗುತ್ತದೆ ಎಂದು ಕಮಲ ಹಾಸನ್ ಮುಂಜಾನೆಯೇ ಮತಗಟ್ಟೆಗೆ ಹೋಗಿದ್ದರು. ಆದರೆ ಅವರು ಬರುವುದನ್ನು ತಿಳಿದಿದ್ದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿಕೊಂಡಿದ್ದರು.
ತಾರಾ ಕುಟುಂಬ ಆಗಮಿಸಿದ್ದರಿಂದ ಜನರು ಅವರನ್ನು ನೋಡಲು ಮುಗಿಬಿದ್ದರು. ಇದರಿಂದ ಸರದಿ ಸಾಲಿನಲ್ಲಿ ನಿಂತಿದ್ದವರಿಗೆ ತೊಂದರೆಯುಂಟಾಯಿತು. ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ಜನರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು.

ಮತ ಚಲಾಯಿಸಿದ ಬಳಿಕ ಕಮಲ ಹಾಸನ್ ಅವರು ನೇರವಾಗಿ ಕೊಯಮತ್ತೂರಿನ ಕಡೆ ಪ್ರಯಾಣಿಸಿದರು. ಅವರು ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಹೀಗಾಗಿ ಸ್ವತಃ ಕಣದಲ್ಲಿದ್ದರೂ ತಮ್ಮ ಹಾಗೂ ತಮ್ಮ ಕುಟುಂಬದ ಮತವನ್ನು ತಮಗೆ ಹಾಕಿಕೊಳ್ಳಲು ಅವರಿಗೆ ಸಾಧ್ಯವಾಗಿಲ್ಲ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications