50 ಲಕ್ಷ ಉದ್ಯೋಗ ಸೃಷ್ಟಿ, ಮಹಿಳೆಯರಿಗೆ ಶೇ. 50 ಮೀಸಲಾತಿ; ಕಮಲ್ ಹಾಸನ್ ಭರವಸೆ
ಚೆನ್ನೈ, ಮಾರ್ಚ್ 03: ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಪ್ರಚಾರ ಕಾರ್ಯ ಬಿರುಸು ಪಡೆದುಕೊಂಡಿದೆ. ಎಐಎಡಿಎಂಕೆ -ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ -ಕಾಂಗ್ರೆಸ್ ಮೈತ್ರಿಕೂಟಗಳು ಸೆಣಸಾಟದಲ್ಲಿದ್ದು, ನಟ ಕಮಲ್ ಹಾಸನ್ ಅವರ ಮಕ್ಕಳ ನೀದಿಮಯ್ಯಂ ಪಕ್ಷವೂ ಹಲವು ಘೋಷಣೆಯೊಂದಿಗೆ ಕಣಕ್ಕಿಳಿದಿದೆ.
ಬುಧವಾರ ಮಕ್ಕಳನೀದಿ ಮಯ್ಯಂ ಪಕ್ಷದ ಮುಖಂಡ ಕಮಲ್ ಹಾಸನ್ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಏನೆಲ್ಲಾ ಕಾರ್ಯಗಳನ್ನು ನಡೆಸುವ ಯೋಜನೆ ಹೊಂದಿದೆ ಎಂಬುದರ ಕುರಿತು ವಿವರಣೆ ನೀಡಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು ಹಾಗೂ ಯುವಜನತೆಯ ಕಲ್ಯಾಣಕ್ಕೆ ಬದ್ಧವಾಗಿ ಯೋಜನೆಗಳನ್ನು ತರುವ ಭರವಸೆ ನೀಡಿದ್ದಾರೆ.

ತಮಿಳು ನಾಡಿನಲ್ಲಿ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಒಂದು ಅವಕಾಶ ನೀಡಿದ್ದೇ ಆದರೆ, ರಾಜ್ಯದ ಎಲ್ಲಾ ವಲಯಗಳಲ್ಲಿಯೂ ಮಹಿಳೆಯರಿಗೆ 50% ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ. ಸ್ಯಾನಿಟರಿ ನ್ಯಾಪ್ಕಿನ್ ಗಳ ವಿತರಣೆ, ಮಹಿಳೆಯರ ಸುರಕ್ಷತೆಗೆ ಆದ್ಯತೆ, ಮಹಿಳೆಯರಿಗೆ ಆರೋಗ್ಯ ತಪಾಸಣೆಯಂಥ ಹಲವು ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಯುವ ಜನಾಂಗಕ್ಕೆ 50 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಿದ್ದು, ನಿರುದ್ಯೋಗ ಭತ್ಯೆ ನೀಡುವ ಭರವಸೆ ಕೊಟ್ಟಿದ್ದಾರೆ.
ಇದೇ ಸಂದರ್ಭ ಎಪಿಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ವಿ. ಪೊನ್ರಾಜ್ ಅವರನ್ನು ಮಕ್ಕಳನೀದಿ ಮಯ್ಯಂ ಪಕ್ಷದ ಉಪಾಧ್ಯಕ್ಷರಾಗಿ ನೇಮಿಸಿಕೊಳ್ಳಲಾಯಿತು.
ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 7ರಂದು ಮಕ್ಕಳನೀದಿ ಮಯ್ಯಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications