50 ಲಕ್ಷ ಉದ್ಯೋಗ ಸೃಷ್ಟಿ, ಮಹಿಳೆಯರಿಗೆ ಶೇ. 50 ಮೀಸಲಾತಿ; ಕಮಲ್ ಹಾಸನ್ ಭರವಸೆ
ಚೆನ್ನೈ, ಮಾರ್ಚ್ 03: ತಮಿಳುನಾಡಿನಲ್ಲಿ ಏಪ್ರಿಲ್ 6ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ರಾಜ್ಯದಲ್ಲಿ ಪ್ರಚಾರ ಕಾರ್ಯ ಬಿರುಸು ಪಡೆದುಕೊಂಡಿದೆ. ಎಐಎಡಿಎಂಕೆ -ಬಿಜೆಪಿ ಮೈತ್ರಿಕೂಟ ಹಾಗೂ ಡಿಎಂಕೆ -ಕಾಂಗ್ರೆಸ್ ಮೈತ್ರಿಕೂಟಗಳು ಸೆಣಸಾಟದಲ್ಲಿದ್ದು, ನಟ ಕಮಲ್ ಹಾಸನ್ ಅವರ ಮಕ್ಕಳ ನೀದಿಮಯ್ಯಂ ಪಕ್ಷವೂ ಹಲವು ಘೋಷಣೆಯೊಂದಿಗೆ ಕಣಕ್ಕಿಳಿದಿದೆ.
ಬುಧವಾರ ಮಕ್ಕಳನೀದಿ ಮಯ್ಯಂ ಪಕ್ಷದ ಮುಖಂಡ ಕಮಲ್ ಹಾಸನ್ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತವಾಗಿದ್ದು, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಏನೆಲ್ಲಾ ಕಾರ್ಯಗಳನ್ನು ನಡೆಸುವ ಯೋಜನೆ ಹೊಂದಿದೆ ಎಂಬುದರ ಕುರಿತು ವಿವರಣೆ ನೀಡಿದ್ದಾರೆ.
ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮಹಿಳೆಯರು ಹಾಗೂ ಯುವಜನತೆಯ ಕಲ್ಯಾಣಕ್ಕೆ ಬದ್ಧವಾಗಿ ಯೋಜನೆಗಳನ್ನು ತರುವ ಭರವಸೆ ನೀಡಿದ್ದಾರೆ.

ತಮಿಳು ನಾಡಿನಲ್ಲಿ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಒಂದು ಅವಕಾಶ ನೀಡಿದ್ದೇ ಆದರೆ, ರಾಜ್ಯದ ಎಲ್ಲಾ ವಲಯಗಳಲ್ಲಿಯೂ ಮಹಿಳೆಯರಿಗೆ 50% ಮೀಸಲಾತಿ ನೀಡುವುದಾಗಿ ತಿಳಿಸಿದ್ದಾರೆ. ಸ್ಯಾನಿಟರಿ ನ್ಯಾಪ್ಕಿನ್ ಗಳ ವಿತರಣೆ, ಮಹಿಳೆಯರ ಸುರಕ್ಷತೆಗೆ ಆದ್ಯತೆ, ಮಹಿಳೆಯರಿಗೆ ಆರೋಗ್ಯ ತಪಾಸಣೆಯಂಥ ಹಲವು ಕಾರ್ಯಗಳನ್ನು ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಯುವ ಜನಾಂಗಕ್ಕೆ 50 ಲಕ್ಷ ಉದ್ಯೋಗ ಸೃಷ್ಟಿ ಮಾಡುವುದಾಗಿ ತಿಳಿಸಿದ್ದು, ನಿರುದ್ಯೋಗ ಭತ್ಯೆ ನೀಡುವ ಭರವಸೆ ಕೊಟ್ಟಿದ್ದಾರೆ.
ಇದೇ ಸಂದರ್ಭ ಎಪಿಜೆ ಅಬ್ದುಲ್ ಕಲಾಂ ಅವರಿಗೆ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದ ವಿ. ಪೊನ್ರಾಜ್ ಅವರನ್ನು ಮಕ್ಕಳನೀದಿ ಮಯ್ಯಂ ಪಕ್ಷದ ಉಪಾಧ್ಯಕ್ಷರಾಗಿ ನೇಮಿಸಿಕೊಳ್ಳಲಾಯಿತು.
ಏಪ್ರಿಲ್ 6ರಂದು ತಮಿಳುನಾಡಿನ ಎಲ್ಲ 234 ವಿಧಾನಸಭೆ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಾರ್ಚ್ 7ರಂದು ಮಕ್ಕಳನೀದಿ ಮಯ್ಯಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications