ಕಮಲ ಹಾಸನ್ ಮಕ್ಕಳನೀದಿಮಯ್ಯಂ ಪಕ್ಷದ "ಕಾಯಂ ಅಧ್ಯಕ್ಷ"
ಚೆನ್ನೈ, ಫೆಬ್ರುವರಿ 11: ಕಮಲ್ ಹಾಸನ್ ಅವರನ್ನು ಗುರುವಾರ ಮಕ್ಕಳ ನೀದಿಮಯ್ಯಂ (ಎಂಎನ್ಎಂ) ಪಕ್ಷದ "ಕಾಯಂ ಅಧ್ಯಕ್ಷ" ಎಂದು ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಸಂಪೂರ್ಣ ಜವಾಬ್ದಾರಿ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರದ್ದಾಗಿರುತ್ತದೆ ಎಂದು ಪಕ್ಷ ಘೋಷಣೆ ಮಾಡಿದೆ.
ನಟ ಹಾಗೂ ರಾಜಕಾರಣಿ ಕಮಲ ಹಾಸನ್ ತಮ್ಮ ಪ್ರತಿಭೆ, ವೃತ್ತಿ, ಸಂಪತ್ತು ಹಾಗೂ ಜನಪ್ರಿಯತೆಯನ್ನು ತಮಿಳುನಾಡು ಜನರ ಕಲ್ಯಾಣಕ್ಕಾಗಿ ವಿನಿಯೋಗಿಸಿದ್ದಾರೆ ಎಂದು ಪಕ್ಷದ ಸದಸ್ಯರು ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದು, ಈ ಎಲ್ಲಾ ಅಂಶಗಳಿಂದ ಅವರನ್ನು ಕಾಯಂ ಅಧ್ಯಕ್ಷರನ್ನಾಗಿ ಒಮ್ಮತದಿಂದ ನಿರ್ಧರಿಸಲಾಗಿದೆ ಎಂದಿದ್ದಾರೆ.
ಗುರುವಾರದಿಂದ ಕಮಲ ಹಾಸನ್ ಅವರು ಪಕ್ಷದ ಕಾಯಂ ಅಧ್ಯಕ್ಷರಾಗಿರುವರು ಎಂಬ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಪಕ್ಷಗಳ ಮೈತ್ರಿ, ಚುನಾವಣಾ ಕಾರ್ಯತಂತ್ರ ಹಾಗೂ ಸದಸ್ಯರ ಆಯ್ಕೆ ಹೀಗೆ ಪಕ್ಷ ಸಂಬಂಧಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಧಿಕಾರ ಹೊಂದಿರಲಿದ್ದಾರೆ.

ಇದರೊಂದಿಗೆ ತಮಿಳುನಾಡಿನ ಜನರ ಮೇಲೆ ಬಿಜೆಪಿ ಸರ್ಕಾರದ ಹಿಂದಿ ಹಾಗೂ ಸಂಸ್ಕೃತ ಭಾಷಾ ಹೇರಿಕೆ ವಿರೋಧಿ ನಿರ್ಣಯ ಸೇರಿದಂತೆ ಹಲವು ನಿರ್ಣಯಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.
ಇನ್ನೆರಡು ತಿಂಗಳುಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಾಮಾಣಿಕವಾಗಿ ಚುನಾವಣೆ ನಡೆಯಲು ಅವಕಾಶ ಮಾಡಿಕೊಡಬೇಕೆಂದು ಚುನಾವಣಾ ಆಯೋಗಕ್ಕೆ ಪಕ್ಷ ಮನವಿ ಮಾಡಿಕೊಟ್ಟಿದೆ.
2018ರಲ್ಲಿ ರಚನೆಯಾದ ಎಂಎನ್ಎಂ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ 3.7% ಮತ ಗಳಿಸಿತ್ತು.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications