ಕಮಲ ಹಾಸನ್ ಮಕ್ಕಳನೀದಿಮಯ್ಯಂ ಪಕ್ಷದ "ಕಾಯಂ ಅಧ್ಯಕ್ಷ"
ಚೆನ್ನೈ, ಫೆಬ್ರುವರಿ 11: ಕಮಲ್ ಹಾಸನ್ ಅವರನ್ನು ಗುರುವಾರ ಮಕ್ಕಳ ನೀದಿಮಯ್ಯಂ (ಎಂಎನ್ಎಂ) ಪಕ್ಷದ "ಕಾಯಂ ಅಧ್ಯಕ್ಷ" ಎಂದು ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಸಂಪೂರ್ಣ ಜವಾಬ್ದಾರಿ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರದ್ದಾಗಿರುತ್ತದೆ ಎಂದು ಪಕ್ಷ ಘೋಷಣೆ ಮಾಡಿದೆ.
ನಟ ಹಾಗೂ ರಾಜಕಾರಣಿ ಕಮಲ ಹಾಸನ್ ತಮ್ಮ ಪ್ರತಿಭೆ, ವೃತ್ತಿ, ಸಂಪತ್ತು ಹಾಗೂ ಜನಪ್ರಿಯತೆಯನ್ನು ತಮಿಳುನಾಡು ಜನರ ಕಲ್ಯಾಣಕ್ಕಾಗಿ ವಿನಿಯೋಗಿಸಿದ್ದಾರೆ ಎಂದು ಪಕ್ಷದ ಸದಸ್ಯರು ಸಾಮಾನ್ಯ ಸಭೆಯಲ್ಲಿ ತಿಳಿಸಿದ್ದು, ಈ ಎಲ್ಲಾ ಅಂಶಗಳಿಂದ ಅವರನ್ನು ಕಾಯಂ ಅಧ್ಯಕ್ಷರನ್ನಾಗಿ ಒಮ್ಮತದಿಂದ ನಿರ್ಧರಿಸಲಾಗಿದೆ ಎಂದಿದ್ದಾರೆ.
ಗುರುವಾರದಿಂದ ಕಮಲ ಹಾಸನ್ ಅವರು ಪಕ್ಷದ ಕಾಯಂ ಅಧ್ಯಕ್ಷರಾಗಿರುವರು ಎಂಬ ನಿರ್ಣಯವನ್ನು ಸಭೆಯಲ್ಲಿ ಅಂಗೀಕರಿಸಲಾಯಿತು. ಪಕ್ಷಗಳ ಮೈತ್ರಿ, ಚುನಾವಣಾ ಕಾರ್ಯತಂತ್ರ ಹಾಗೂ ಸದಸ್ಯರ ಆಯ್ಕೆ ಹೀಗೆ ಪಕ್ಷ ಸಂಬಂಧಿ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಅಧಿಕಾರ ಹೊಂದಿರಲಿದ್ದಾರೆ.

ಇದರೊಂದಿಗೆ ತಮಿಳುನಾಡಿನ ಜನರ ಮೇಲೆ ಬಿಜೆಪಿ ಸರ್ಕಾರದ ಹಿಂದಿ ಹಾಗೂ ಸಂಸ್ಕೃತ ಭಾಷಾ ಹೇರಿಕೆ ವಿರೋಧಿ ನಿರ್ಣಯ ಸೇರಿದಂತೆ ಹಲವು ನಿರ್ಣಯಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಯಿತು.
ಇನ್ನೆರಡು ತಿಂಗಳುಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಪ್ರಾಮಾಣಿಕವಾಗಿ ಚುನಾವಣೆ ನಡೆಯಲು ಅವಕಾಶ ಮಾಡಿಕೊಡಬೇಕೆಂದು ಚುನಾವಣಾ ಆಯೋಗಕ್ಕೆ ಪಕ್ಷ ಮನವಿ ಮಾಡಿಕೊಟ್ಟಿದೆ.
2018ರಲ್ಲಿ ರಚನೆಯಾದ ಎಂಎನ್ಎಂ ಪಕ್ಷ 2019ರ ಲೋಕಸಭಾ ಚುನಾವಣೆಯಲ್ಲಿ 3.7% ಮತ ಗಳಿಸಿತ್ತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications