ಭಕ್ತಿಭಾವದ ಪರಾಕಾಷ್ಠೆ: 10 ರೂಪಾಯಿಗೆ ನಾಲ್ಕು 'ಮೋದಿ ಇಡ್ಲಿ'
ಚೆನ್ನೈ, ಸೆ 1: ಅಮ್ಮ ಕ್ಯಾಂಟೀನ್, ಇಂದಿರಾ ಕ್ಯಾಂಟೀನ್ ಎಂದು ಹೊಟೇಲ್ ಗಳಿಗೆ ಹೆಸರು ಇಡುವುದನ್ನು ಕೇಳಿದ್ದೇವೆ. ತಮಿಳುನಾಡಿನ ಬಿಜೆಪಿ ಮುಖಂಡರೊಬ್ಬರು ಇಡ್ಲಿಗೆ 'ಮೋದಿ ಇಡ್ಲಿ' ಎಂದು ಹೆಸರಿಟ್ಟು, ಕಡಿಮೆ ಬೆಲೆಯಲ್ಲಿ ಗ್ರಾಹಕರ ಹೊಟ್ಟೆ ತುಂಬಿಸುವ ಕೆಲಸಕ್ಕೆ ಮುಂದಾಗಿದ್ದಾರೆ.
ಪ್ರಧಾನಿ ಮೋದಿಯವರ ಹೆಸರಿನಲ್ಲಿ ಮೋದಿ ಇಡ್ಲಿಯನ್ನು ತಮಿಳುನಾಡಿನ ಸೇಲಂ ನಗರದಲ್ಲಿ ಬಿಜೆಪಿಯ ಹಿರಿಯ ಮುಖಂಡರೊಬ್ಬರು ಆರಂಭಿಸಲು ನಿರ್ಧರಿಸಿದ್ದಾರೆ. ಹತ್ತು ರೂಪಾಯಿಗೆ ನಾಲ್ಕು ಇಡ್ಲಿಯನ್ನು ಇವರು ನೀಡಲಿದ್ದಾರೆ.
'ಮೋದಿ ಇಡ್ಲಿ ಪೋಸ್ಟರ್' ಅನ್ನು ನಗರದಲೆಲ್ಲಾ ಅಂಟಿಸಲಾಗಿದೆ. ಈ ಪೋಸ್ಟರಿನ ಎಡಭಾಗದಲ್ಲಿ ಮೋದಿಯ ಚಿತ್ರ, ಹತ್ತು ರೂಪಾಯಿಗೆ ನಾಲ್ಕು ಇಡ್ಲಿ ಎಂದು ಎನ್ನುವ ಒಕ್ಕಣೆ ಮಧ್ಯ ಭಾಗದಲ್ಲಿ ಮತ್ತು ಬಲಭಾಗದಲ್ಲಿ ಮಹೇಶ್ ಅವರ ಭಾವಚಿತ್ರವಿದೆ. ಮಹೇಶ್, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿದ್ದಾರೆ.

"ಹತ್ತು ರೂಪಾಯಿಗೆ ನಾಲ್ಕು ಇಡ್ಲಿ ಮತ್ತು ಸಾಂಬಾರ್ ಜೊತೆಗೆ ಕೊಡಲಿದ್ದೇವೆ. ಇದಕ್ಕಾಗಿ ಅತ್ಯಾಧುನಿಕ ಕಿಚನ್ ಸಿದ್ದವಾಗುತ್ತಿದೆ. ಗುಣಮಟ್ಟದ ಮತ್ತು ಶುಚಿತ್ವಕ್ಕೆ ಪ್ರಾಮುಖ್ಯತೆ ನೀಡಲಾಗುತ್ತದೆ"ಎಂದು ಮಹೇಶ್ ಹೇಳಿಕೊಂಡಿದ್ದಾರೆ.
ಸೇಲಂ ಜಿಲ್ಲೆ, ತಮಿಳುನಾಡಿನ ಮುಖ್ಯಮಂತ್ರಿ ಕೆ.ಪಳನಿಸ್ವಾಮಿಯವರ ತವರು ಜಿಲ್ಲೆಯಾಗಿದೆ. "ನಗರದಲ್ಲಿ ಒಟ್ಟು 22 ಮಳಿಗೆಯನ್ನು ಸದ್ಯಕ್ಕೆ ತೆರೆಯುತ್ತಿದ್ದೇವೆ. ಇದಕ್ಕೆ ಸಿಗುವ ಪ್ರತಿಕ್ರಿಯೆಯನ್ನು ನೋಡಿ, ಹೆಚ್ಚಿನ ಮಳಿಗೆ ತೆರೆಯುವ ಬಗ್ಗೆ ನಿರ್ಧರಿಸಲಿದ್ದೇವೆ"ಎಂದು ತಮಿಳುನಾಡು ಬಿಜಿಪಿ ಪ್ರಧಾನ ಕಾರ್ಯದರ್ಶಿ ಆರ್.ಬಾಲಸುಬ್ರಮಣಿಯನ್ ಹೇಳಿದ್ದಾರೆ.
ದಿನವೊಂದಕ್ಕೆ ನಲವತ್ತು ಸಾವಿರ ಇಡ್ಲಿ ತಯಾರಿಸುವ ಮೆಷಿನ್ ಈಗಾಗಲೇ ನಗರಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ಮೋದಿ ಇಡ್ಲಿ, ಗ್ರಾಹಕರಿಗೆ ಸಿಗುವ ಸಾಧ್ಯತೆಯಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications