'ವಿಶ್ರಾಂತಿಗೆ ನಮ್ಮ ಮನೆಗೆ ಬನ್ನಿ', ಕರುಣಾನಿಧಿಗೆ ಮೋದಿ ಆಹ್ವಾನ
ಚೆನ್ನೈ, ನವೆಂಬರ್ 6: ಇಂದು ಪ್ರಧಾನಿ ನರೇಂದ್ರ ಮೋದಿ ಚೆನ್ನೈನಲ್ಲಿರುವ ತಮಿಳುನಾಡಿನ ಮೇರು ರಾಜಕಾರಣಿ, ಡಿಎಂಕೆ ವರಿಷ್ಠ ಎಂ. ಕರುಣಾನಿಧಿ ನಿವಾಸಕ್ಕೆ ಭೇಟಿ ನೀಡಿದರು. ಭೇಟಿ ವೇಳೆ ಪ್ರಧಾನಿ ಮೋದಿ ತಮ್ಮ ದೆಹಲಿ ನಿವಾಸಕ್ಕೆ ಆಗಮಿಸಿ ಒಂದಷ್ಟು ವಿಶ್ರಾಂತಿ ಪಡೆಯುವಂತೆ ಕರುಣಾನಿಧಿಯವರಿಗೆ ಆಹ್ವಾನ ನೀಡಿದ್ದಾರೆ.
ದಿನತಂತಿ ಪತ್ರಿಕೆಯ 75ನೇ ವರ್ಷಾಚರಣೆಯಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಕರುಣಾನಿಧಿ ನಿವಾಸಕ್ಕೆ ತೆರಳಿದರು.
ಕರುಣಾನಿಧಿ ನಿವಾಸಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ಮನೆಯ ದ್ವಾರದ ಬಳಿ ಡಿಎಂಕೆ ಕಾರ್ಯಾಧ್ಯಕ್ಷ ಎಂಕೆ ಸ್ಟಾಲಿನ್ ಸ್ವಾಗತಿಸಿದರು. ನಂತರ ಮನೆ ಒಳಗೆ ಹೋಗಿ ಕರುಣಾನಿಧಿಯವರ ಕೈಕುಲುಕಿ ಮೋದಿ ಆರೋಗ್ಯ ವಿಚಾರಿಸಿದರು. ಭೇಟಿ ವೇಳೆ ಮಗಳು ಹಾಗೂ ಮಾಜಿ ಕೇಂದ್ರ ಸಚಿವೆ ಕನ್ನಿಮೋಳಿ, ರಾಜ್ಯಪಾಲರು ಹಾಜರಿದ್ದರು.
|
20 ನಿಮಿಷಗಳ ಭೇಟಿ
ಕರುಣಾನಿಧಿಯವರ ಜತೆ ಪ್ರಧಾನಿ ಮೋದಿ ಸುಮಾರು 20 ನಿಮಿಷಗಳ ಮಾತುಕತೆ ನಡೆಸಿದರು. ಇದೊಂದು ಸೌಜನ್ಯದ ಭೇಟಿ ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದಾರೆ. ಮಾತುಕತೆಯ ವಿವರಗಳು ತಿಳಿದು ಬಂದಲ್ಲ.
ನಂತರ ಪ್ರಧಾನಿ ಹಾಗೂ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ ಸ್ಟಾಲಿನ್ ಮನೆಯಿಂದ ಜತೆಯಾಗಿ ಹೊರಗೆ ಬಂದು ನೆರೆದವರತ್ತ ಕೈಬೀಸಿದರು. ಬಳಿಕ ಕರುಣಾನಿಧಿ ನಿವಾಸದಿಂದ ಪ್ರಧಾನಿ ನಿರ್ಗಮಿಸಿದ್ದಾರೆ.

ದೆಹಲಿಗೆ ಆಹ್ವಾನಿಸಿದ ಮೋದಿ
ಭೇಟಿ ವೇಳೆ ಪ್ರಧಾನಿ ಮೋದಿ ಕರುಣಾನಿಧಿಯವರಿಗೆ ದೆಹಲಿಗೆ ಬಂದು ತಮ್ಮ ನಿವಾಸದಲ್ಲಿ ಒಂದಷ್ಟು ಸಮಯ ವಿಶ್ರಾಂತಿ ತೆಗೆದುಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಡಿಎಂಕೆ ಕಾರ್ಯಕರ್ತರು ಪ್ರಧಾನಿಯವರ ಮೇಲೆ ಆಗಾಗ ಕೆಂಡಕಾರುತ್ತಿದ್ದರೂ ಮೋದಿ ಸೌಜನ್ಯದಿಂದ 93 ವರ್ಷದ ಕರುಣಾನಿಧಿಯವರನ್ನು ತಮ್ಮ ಮನೆಗೆ ಆಹ್ವಾನಿಸಿದ್ದಾರೆ.

ಕರುಣಾನಿಧಿ ಕುಟುಂಬದಿಂದ ಆಹ್ವಾನ
ಕರುಣಾನಿಧಿಯವರನ್ನು ಭೇಟಿಯಾಗುವಂತೆ ಸ್ವತಃ ಅವರ ಕುಟುಂಬಸ್ಥರೇ ಪ್ರಧಾನಿಯವರನ್ನು ಆಹ್ವಾನಿಸಿದ್ದರು ಎಂದು ಮೂಲಗಳು ತಿಳಿಸಿವೆ.
ಭೇಟಿ ಸಮಯ ನಿಗದಿಯಾಗಿದ್ದ ಸಂದರ್ಭ ಸ್ಟಾಲಿನ್ ವಿದೇಶದಲ್ಲಿದ್ದರು ಎಂದು ಗೊತ್ತಾಗಿದೆ. ಪ್ರಧಾನಿ ಬರುತ್ತಿರುವುದು ಗೊತ್ತಾಗಿ ಸ್ಟಾಲಿನ್ ಚೆನ್ನೈಗೆ ವಾಪಾಸಾಗಿದ್ದರು.
ಪ್ರಧಾನಿ ಮೋದಿ ತಮಿಳುನಾಡಿನ ಎಐಎಡಿಎಂಕೆ ಜತೆ ಉತ್ತಮ ಬಾಂಧವ್ಯ ಹೊಂದಿರುವುದು ಗೊತ್ತಿರದ ವಿಷಯವೇನಲ್ಲ. ಹೀಗಿದ್ದೂ ಉಭಯ ನಾಯಕರು ಭೇಟಿಯಾಗಿದ್ದಾರೆ.

2ಜಿ ಪ್ರಕರಣದ ತೀರ್ಪು ಮತ್ತು ಭೇಟಿ
ಇನ್ನೇನು 2ಜಿ ಹಗರಣದ ತೀರ್ಪು ಹೊರ ಬೀಳಲಿದೆ. ಇದರಲ್ಲಿ ಕರುಣಾನಿಧಿ ಪುತ್ರಿ ಕನ್ನಿಮೋಳಿಯೂ ಆರೋಪಿಯಾಗಿದ್ದಾರೆ. ಈ ಹಿನ್ನಲೆಯಲ್ಲಿಯೂ ಭೇಟಿಯನ್ನು ಕುತೂಹಲದಿಂದ ನೋಡಲಾಗುತ್ತಿದೆ.

ದಿನತಂತಿ ಕಾರ್ಯಕ್ರಮದಲ್ಲಿ ಮೋದಿ
ಚೆನ್ನೈನಲ್ಲಿ ದಿನತಂತಿ ಪತ್ರಿಕೆಯ 75ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹಾಗೂ ಇನ್ನೊಂದು ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಚೆನ್ನೈಗೆ ಆಗಮಿಸಿದ್ದರು. ದಿನತಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಕರುಣಾನಿಧಿ ನಿವಾಸಕ್ಕೆ ತೆರಳಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications