ಬಡತನದ ವಿರುದ್ಧ ಹೋರಾಟಕ್ಕೆ ಕೈಮಗ್ಗ ಅಸ್ತ್ರವಾಗಲಿ: ಮೋದಿ
ಚೆನ್ನೈ, ಆಗಸ್ಟ್ 07: ದೇಶದಲ್ಲಿ ಬಡತನದ ವಿರುದ್ಧ ಹೋರಾಡುವುದಕ್ಕೆ ಕೈಮಗ್ಗ ಅಸ್ತ್ರವಾಗಲಿ ಎಂದು ರಾಷ್ಟ್ರೀಯ ಕೈಮಗ್ಗ ದಿನಾಚರಣೆಗೆ ಶುಕ್ರವಾರ ಚಾಲನೆ ನೀಡಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮದ್ರಾಸ್ ವಿಶ್ವವಿದ್ಯಾಲಯದ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಮೋದಿ ಮಾತನಾಡಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಕೈಮಗ್ಗ ಒಂದು ಅಸ್ತ್ರವಾಗಿತ್ತು. ಈಗ ಇದೇ ಅಸ್ತ್ರ ಬಳಸಿಕೊಂಡು ಬಡತನ ನಿರ್ಮೂಲನೆ ಮಾಡೋಣ. ನಾನು ಇತ್ತೀಚೆಗೆ 'ಮನ್ ಕೀ ಬಾತ್' ಕಾರ್ಯಕ್ರಮದಲ್ಲೂ ಖಾದಿ ಬಟ್ಟೆ ಬಳಕೆ ಖರೀದಿ ಬಗ್ಗೆ ಪ್ರಸ್ತಾಪಿಸಿದ್ದೆ.
ದೇಶದ ಜನತೆ ನನ್ನ ಮನವಿಯನ್ನು ಸ್ವೀಕರಿಸಿದ್ದಾರೆ. ಕೈಮಗ್ಗದ ವಹಿವಾಟು ಶೇಕಡ 33ರಷ್ಟು ಹೆಚ್ಚಾಗಿದ್ದು, ಪರಿಸರ ಸಂರಕ್ಷಣೆಯಲ್ಲೂ ಕೈಮಗ್ಗದ ಮಹತ್ವದ ಪಾತ್ರವಹಿಸಲಿದೆ ಎಂದರು.[ಮೋದಿ ಕೈಮಗ್ಗ ದಿನಾಚರಣೆ ಬಗ್ಗೆ ಮಂಡ್ಯದ ರಮ್ಯಾ ಟ್ವೀಟ್]
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಭಿನಂದನೆ ಸಲ್ಲಿಸಿದ ಮೋದಿ ಅವರು ಖಾದಿ ಪ್ರಚಾರದ ಬಗ್ಗೆ ತಮಿಳುನಾಡು ಸರ್ಕಾರ ಕೈಗೊಂಡಿರುವ ಕ್ರಮವನ್ನು ಶ್ಲಾಘಿಸಿದರು.
1905ರ ಸ್ವದೇಶಿ ಚಳುವಳಿ ನೆನಪಿಗಾಗಿ ಆಗಸ್ಟ್ 7ನ್ನು ಕೈಮಗ್ಗ ದಿನಾಚರಣೆಯನ್ನಾಗಿ ಕೇಂದ್ರ ಸರ್ಕಾರ ಘೋಷಿಸಿದ್ದು, ಪ್ರತಿ ವರ್ಷ ಈ ದಿನದಂದು ಸಂತ ಕಬೀರ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಜೊತೆಗೆ ಹೊಸ ಕೈಮಗ್ಗ ಬ್ರ್ಯಾಂಡ್ ಹಾಗೂ ಕೈಮಗ್ಗ ಪ್ರಶಸ್ತಿಗಳನ್ನು ನೀಡಲಾಗುತ್ತದೆ.

ಕೈಮಗ್ಗ ದಿನಾಚರಣೆಗೆ ಪ್ರಧಾನಿ ಮೋದಿಯಿಂದ ಚಾಲನೆ
ಮದ್ರಾಸ್ ವಿಶ್ವವಿದ್ಯಾಲಯದ ಶತಮಾನೋತ್ಸವ ಭವನದಲ್ಲಿ ಆಯೋಜಿಸಲಾದ ಸಮಾರಂಭದಲ್ಲಿ ಮೋದಿ ಮಾತನಾಡಿದರು.

ಆಗಸ್ಟ್ 7ನ್ನು ಕೈಮಗ್ಗ ದಿನಾಚರಣೆ
ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರಿಗೆ ಅಭಿನಂದನೆ ಸಲ್ಲಿಸಿದ ಮೋದಿ ಅವರು ಖಾದಿ ಪ್ರಚಾರದ ಬಗ್ಗೆ ತಮಿಳುನಾಡು ಸರ್ಕಾರ ಕೈಗೊಂಡಿರುವ ಕ್ರಮವನ್ನು ಶ್ಲಾಘಿಸಿದರು. ಜಯಲಲಿತಾ ಅವರ ಪೋಯಸ್ ಗಾರ್ಡನ್ ನಿವಾಸಕ್ಕೆ ತೆರಳಿದ ಮೋದಿ ಅವರು ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಕೈಮಗ್ಗ ದಿನಾಚರಣೆಗೆ ಚೆನ್ನೈಗೆ ಬಂದ ಮೋದಿ
ಕೈಮಗ್ಗ ದಿನಾಚರಣೆಗೆ ಚೆನ್ನೈಗೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ ತಮಿಳುನಾಡು ಮುಖ್ಯಮಂತ್ರಿ ಜೆ ಜಯಲಲಿತಾ.

ಕೈಮಗ್ಗ ಬ್ರ್ಯಾಂಡ್ ಹಾಗೂ ಕೈಮಗ್ಗ ಪ್ರಶಸ್ತಿ
ಪ್ರತಿ ವರ್ಷ ಈ ದಿನದಂದು ಸಂತ ಕಬೀರ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಜೊತೆಗೆ ಹೊಸ ಕೈಮಗ್ಗ ಬ್ರ್ಯಾಂಡ್ ಹಾಗೂ ಕೈಮಗ್ಗ ಪ್ರಶಸ್ತಿಗಳನ್ನು ನೀಡಲಾಗುತ್ತದೆ.
|
ಹೊಸ ಕೈಮಗ್ಗ ಬ್ರ್ಯಾಂಡ್
ಹೊಸ ಕೈಮಗ್ಗ ಬ್ರ್ಯಾಂಡ್ ಅನಾವರಣಗೊಳಿಸಿದ ಪ್ರಧಾನಿ ಮೋದಿ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications