ಮುಂದಿನ ವಾರ ರಜನಿಕಾಂತ್, ಮೋದಿ ಮಹತ್ವದ ಭೇಟಿ
ಚೆನ್ನೈ, ಮೇ 21 : ರಾಜಕೀಯಕ್ಕೆ ಪಾದಾರ್ಪಣೆ ಮಾಡುವ ಕುರಿತು ಸಣ್ಣ ಸೂಚನೆ ನೀಡಿರುವ ಸ್ಟೈಲ್ ಕಿಂಗ್ ರಜನಿಕಾಂತ್ ಮುಂದಿನ ವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವುದು ಭಾರೀ ಕುತೂಹಲ ಕೆರಳಿಸಿದೆ.
ಮುಂದಿನ ವಾರ ಅವರು ದೆಹಲಿಗೆ ಹಾರಲಿದ್ದು, ಮೋದಿಯವರನ್ನು ಭೇಟಿಯಾಗಲಿರುವುದು ಹೆಚ್ಚೂಕಡಿಮೆ ಖಚಿತವಾಗಿದೆ. ಈ ಸಂಗತಿಯನ್ನು ರಜನಿಕಾಂತ್ ಅವರ ಹತ್ತಿರದ ಮೂಲಗಳು ಕೂಡ ಖಚಿತಪಡಿಸಿವೆ.
ರಜನಿಕಾಂತ್ ಅವರು ಭಾರತೀಯ ಜನತಾ ಪಕ್ಷ ಸೇರುವುದಾದರೆ ಬಾಗಿಲು ಸದಾ ತೆರೆದಿರುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಹೇಳಿದ್ದಾರೆ. ಅವರು ಬಿಜೆಪಿ ಸೇರುತ್ತಾರೋ ಬಿಡುತ್ತಾರೋ ಮೊದಲು ಅವರು ರಾಜಕೀಯಕ್ಕೆ ಧುಮುಕಬೇಕು ಎಂಬ ಮಾತನ್ನೂ ಅವರು ಸೇರಿದ್ದಾರೆ.

ಜಯಲಲಿತಾ ಅವರ ಸಾವಿನ ನಂತರ ಕಲಸುಮೇಲೋಗರವಾಗಿರುವ ತಮಿಳುನಾಡು ರಾಜಕೀಯದಲ್ಲಿ ಬಿಜೆಪಿ ತನ್ನ ಅಸ್ವಿತ್ವವನ್ನು ಕಂಡುಕೊಳ್ಳಲು ಪ್ರಯತ್ನ ನಡೆಸುತ್ತಲೇ ಇದೆ. ಆದರೆ, ತಮಿಳುನಾಡಿನಲ್ಲಿ ಬಿಜೆಪಿಗೆ ಯಾವುದೇ ಮುಖವಿಲ್ಲದಿರುವುದು ಭಾರೀ ಕೊರತೆಯಾಗಿದೆ. ಆ ಕೊರತೆಯನ್ನು ರಜನಿ ತುಂಬಬಹುದು ಎಂಬುದು ಬಿಜೆಪಿ ಆಶಯ.
ರಜನಿಕಾಂತ್ ಅವರು ರಾಜಕೀಯ ಸೇರುವುದು ಜೋಕ್ ಎಂದು ಅಪಹಾಸ್ಯ ಮಾಡಿರುವ ಸುಬ್ರಮಣಿಯನ್ ಸ್ವಾಮಿ ಅವರನ್ನು ಹೊರತುಪಡಿಸಿದರೆ, ತಮಿಳುನಾಡಿನ ಬಹುತೇಕ ರಾಜಕಾರಣಿಗಳು ರಜನಿ ರಾಜಕೀಯಕ್ಕೆ ಬರುವುದನ್ನು ಕಾತುರದಿಂದ ಎದುರು ನೋಡುತ್ತಿದ್ದಾರೆ.
ಅಲ್ಲದೆ, ದೈವೇಚ್ಛೆ ಇದ್ದರೆ ರಾಜಕೀಯಕ್ಕೆ ಧುಮುಕುತ್ತೇನೆ ಎಂದು ರಜನಿಕಾಂತ್ ಹೇಳಿರುವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷ ಕುಲಾವಿ ಕಟ್ಟಲು ಆರಂಭಿಸಿದೆ. ಮುಂದಿನ ರಾಜಕೀಯ ಸನ್ನಿವೇಶಗಳನ್ನು ಗಮನದಲ್ಲಿಟ್ಟುಕೊಂಡು ಯಾವ ಪಕ್ಷದೊಡನೆ ಹೊಂದಾಣಿಕೆ ಮಾಡಿಕೊಂಡರೆ ಉತ್ತಮ ಎಂಬ ಲೆಕ್ಕಾಚಾರದಲ್ಲಿ ಮುಳುಗಿದೆ.
ಆದರೆ, ರಾಷ್ಟ್ರಪತಿ ಚುನಾವಣೆ ನಡೆಯುವುದಕ್ಕೆ ಮೊದಲು ಬಿಜೆಪಿಯಾಗಲಿ, ರಜನಿಕಾಂತ್ ಆಗಲಿ ಯಾವುದೇ ಘೋಷಣೆಗಳನ್ನು ಮಾಡುವ ಸಾಧ್ಯತೆ ಕಡಿಮೆ. ಇದು ಕೇವಲ ಸೌಹಾರ್ದಯುವ ಭೇಟಿಯಾಗುವ ಸಾಧ್ಯತೆಯಿದೆ. ಒಟ್ಟಿನಲ್ಲಿ ಈ ಬೆಳವಣಿಗೆ ಮುಂದಿನ ಮಹತ್ವದ ರಾಜಕೀಯ ನಡೆಗಳಿಗೆ ಶ್ರೀಕಾರ ಹಾಕಲಿದೆ.
-
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Baglkot By Poll:9 ವರ್ಷ ಅಧಿಕಾರದಲ್ಲಿದ್ದ ಬಿಜೆಪಿ ಸಾಧನೆ ಶೂನ್ಯ: ಗ್ಯಾರಂಟಿ ಯೋಜನೆಗಳ ಲೆಕ್ಕ ಕೊಟ್ಟ ಸಿದ್ದರಾಮಯ್ಯ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು












Click it and Unblock the Notifications