ಮಹಾಬಲಿಪುರಂ ಬೀಚ್ನಲ್ಲಿ ಕಸ ಹೆಕ್ಕಿದ ಮೋದಿ: ವೈರಲ್ ವಿಡಿಯೋ
Recommended Video
ಚೆನ್ನೈ, ಅಕ್ಟೋಬರ್ 12: ತಮಿಳುನಾಡಿನ ಮಾಮಲ್ಲಪುರಂನಲ್ಲಿ (ಮಹಾಬಲಿಪುರಂ) ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ ಬೀಚ್ನಲ್ಲಿ ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯಗಳನ್ನು ಹೆಕ್ಕಿದರು.
ಸುಮಾರು ಅರ್ಧ ಗಂಟೆ ಕಾಲ ಬೀಚ್ನಲ್ಲಿ ಓಡಾಡಿ ಪ್ಲಾಸ್ಟಿಕ್ ಕಸಗಳನ್ನು ಆಯ್ದು ಚೀಲಕ್ಕೆ ತುಂಬಿದ ಪ್ರಧಾನಿ ಮೋದಿ ಅದರ ವಿಡಿಯೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.

'ಮಾಮಲ್ಲಪುರಂನ ಬೀಚ್ನಲ್ಲಿ ಬೆಳಿಗ್ಗೆ ಅಡ್ಡಾಡುತ್ತಾ ಕಸವನ್ನು ಹೆಕ್ಕಿದೆ. 30 ನಿಮಿಷಗಳವರೆಗೆ ಈ ಕೆಲಸ ಮಾಡಿದೆ. ಬಳಿಕ ನನ್ನ 'ಸಂಗ್ರಹ'ವನ್ನು ಹೋಟೆಲ್ ಸಿಬ್ಬಂದಿ ಜಯರಾಜ್ಗೆ ನೀಡಿದೆ. ನಮ್ಮ ಸಾರ್ವಜನಿಕ ಸ್ಥಳಗಳು ಸ್ವಚ್ಚ ಮತ್ತು ನಿರ್ಮಲವಾಗಿರುವಂತೆ ನಾವು ನೋಡಿಕೊಳ್ಳೋಣ. ನಾವು ಸದೃಢ ಮತ್ತು ಆರೋಗ್ಯವಂತರಾಗಿರುವಂತೆ ನೋಡಿಕೊಳ್ಳೋಣ' ಎಂದು ಮೋದಿ ವಿಡಿಯೋದ ಜತೆಗೆ ಮನವಿ ಮಾಡಿದ್ದಾರೆ.

ಇದಕ್ಕೂ ಮುನ್ನ ಮೋದಿ ಅವರು ಬೆಳಿಗ್ಗೆ ಬೀಚ್ನಲ್ಲಿ ವಿಹರಿಸುವ ಚಿತ್ರವನ್ನು ಹಂಚಿಕೊಂಡಿದ್ದರು. ಅಕ್ಟೋಬರ್ 2ರಿಂದ ದೇಶದೆಲ್ಲೆಡೆ ಓಡಾಡುತ್ತಾ ತ್ಯಾಜ್ಯ ಹೆಕ್ಕುವ ಚಟುವಟಿಕೆಗಳನ್ನು ಉತ್ತೇಜಿಸುವ ಸಲುವಾಗಿ ಜನರು ನಿರಂತರವಾಗಿ ಎರಡು ಕಿ.ಮೀ. ಓಟಗಳಲ್ಲಿ ಪಾಲ್ಗೊಳ್ಳುವಂತೆ ಮೋದಿ ಅವರು ಕರೆ ನೀಡಿದ್ದರು. ಬೆಳಗಿನ ಜಾಗಿಂಗ್ ಜತೆಗೆ ಕಸವನ್ನು ಹೆಕ್ಕುವ ಮೂಲಕ ಸ್ವಚ್ಚತೆಯ ಕಾರ್ಯದಲ್ಲಿ ಪಾಲ್ಗೊಳ್ಳುವುದು (ಪ್ಲಾಗಿಂಗ್) ಆರೋಗ್ಯ ಮತ್ತು ಸ್ವಚ್ಚತೆ ಎರಡಕ್ಕೂ ಸಹಕಾರಿ ಎಂದು ಮೋದಿ ಹೇಳಿದ್ದರು.
ವಿಡಿಯೋ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications