ತಮಿಳುನಾಡಿನಲ್ಲಿ ಕನ್ನಡ ಹರಿದಾಸ ಸಾಹಿತ್ಯದ ಡಿಂಡಿಮ
ತಮಿಳುನಾಡಿನಲ್ಲಿ ಕನ್ನಡ ಹರಿದಾಸ ಸಾಹಿತ್ಯದ ಡಿಂಡಿಮ ಬಾರಿಸಲಾಗುತ್ತದೆ. ಚೆನ್ನೈನಲ್ಲಿ ವ್ಯಾಸೋತ್ಸವ ಆಚರಿಸಲಾಗುತ್ತಿದ್ದು, ಮುಳಬಾಗಿಲು ಶ್ರೀಪಾದರಾಜರ ಮಠ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೇದಿಕ್ ಸೈನ್ಸ್ ಟ್ರಸ್ಟ್ ನಿಂದ ಆಯೋಜನೆ
ಚೆನ್ನೈ, ಮಾರ್ಚ್ 18: ಮುಳಬಾಗಿಲು ಶ್ರೀಪಾದರಾಜರ ಮಠ ಹಾಗೂ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೇದಿಕ್ ಸೈನ್ಸ್ ಟ್ರಸ್ಟ್ ನಿಂದ ಆಯೋಜನೆಯಲ್ಲಿ ತಮಿಳುನಾಡಿನಲ್ಲಿ ಕನ್ನಡ ಹರಿದಾಸ ಸಾಹಿತ್ಯದ ಡಿಂಡಿಮ ಬಾರಿಸಲಾಗುತ್ತದೆ. ಚೆನ್ನೈನಲ್ಲಿ ವ್ಯಾಸೋತ್ಸವ ಆಚರಿಸಲಾಗುತ್ತಿದ್ದು, ಮಾರ್ಚ್ 21, 22ರಂದು ದಾಸ ಸಾಹಿತ್ಯದ ಅನುಭವ ಪಡೆದುಕೊಳ್ಳಬಹುದು.
ತಮಿಳುನಾಡಿನ ಶ್ರೀರಂಗಂನ ವ್ಯಾಸರಾಜ ಮಠದ ಚಂದ್ರಿಕಾ ಸಭಾಮಂಟಪದಲ್ಲಿ ಮಧ್ವರ ಬದರಿ ಪ್ರವೇಶ ಸಪ್ತಶತಮಾನೋತ್ಸವ ಹಾಗೂ ದ್ವೈತ ವಾಙ್ಮಯದ ಮೇರು ಕೃತಿ ಶ್ರೀ ಚಂದ್ರಿಕಾ ಗ್ರಂಥವನ್ನು ಲೋಕಾರ್ಪಣೆ ಮಾಡಲಾಗುತ್ತದೆ.
ವ್ಯಾಸರಾಜ ಗುರುಸಾರ್ವಭೌಮರು ಶ್ರೀರಂಗಂನಲ್ಲಿ ರಚಿಸಿ ಸಮರ್ಪಿಸಿದ ಸ್ಮರಣಾರ್ಥ ಮತ್ತು ಶ್ರೀಪಾದರಾಜ ಮಠದಿಂದ ಪ್ರಕಾಶನಗೊಂಡಿರುವ ಪರಿಪೂರ್ಣ ಚಂದ್ರಿಕಾ ಗ್ರಂಥದ ಕೊನೆಯ ಸಂಪುಟದ ಲೋಕಾರ್ಪಣೆಯ ಅಂಗವಾಗಿ ಮಾ. 21, 22 ಮತ್ತು 23ರಂದು ರಾಷ್ಟ್ರೀಯ ವ್ಯಾಸೋತ್ಸವ' ಆಯೋಜಿಸಿದೆ.

ಸಂಜೆ 5.00 ಗಂಟೆಗೆ ಶ್ರೀವ್ಯಾಸರಾಜ ಗ್ರಂಥ ಮತ್ತು ಚಿತ್ರಪಟವನ್ನು ಆನೆಯ ಮೇಲಿಟ್ಟು ರಂಗನಾಥಸ್ವಾಮಿ ದೇವಾಲಯದ ಮಹಾದ್ವಾರದಿಂದ ನಾಲ್ಕು ಚಿತ್ತರೈ ಬೀದಿಗಳ ಮೂಲಕ ವ್ಯಾಸರಾಜ ಮಠದವರೆಗೆ ಅದ್ದೂರಿ ಮೆರವಣಿಗೆ, ನಂತರ ಕೊವಿಲಡಿ ಮಧ್ವಪ್ರಸಾದ್ ಮತ್ತು ಶ್ರೀಮತಿ ಸರಸ್ವತಿ ಶ್ರೀಪತಿ ರವರಿಂದ ದಾಸ ಸಾಹಿತ್ಯ ಸಿರಿ - ಸಂಗೀತ ಝರಿ ಏರ್ಪಡಿಸಲಾಗಿದೆ.
ವಿದ್ವಾಂಸರಾದ ಪ್ರೊ. ವಿ.ಆರ್. ಪಂಚಮುಖಿ, ಡಾ. ವ್ಯಾಸನಕೆರೆ ಪ್ರಭಂಜನಾಚಾರ್ಯ, ಡಾ. ಅರಳುಮಲ್ಲಿಗೆ ಪಾರ್ಥಸಾರಥಿ, ಡಾ.ಎ.ವಿ ನಾಗಸಂಪಿಗೆ ಅಧ್ಯಕ್ಷತೆಯಲ್ಲಿ ವ್ಯಾಸ ದಾಸ ಸಾಹಿತ್ಯ ಮತ್ತು ಸಂಸ್ಕೃತಿ ಬಗ್ಗೆ ವಿವಿಧ ಗೋಷ್ಠಿ ನಡೆಯಲಿದೆ, ಮೂರು ದಿನವೂ ಸಂಜೆ ಸಂಗೀತ ವಿದ್ವಾಂಸರಿಂದ ದಾಸ ಸಾಹಿತ್ಯ ಸಂಗೀತ ಝರಿ ( ವ್ಯಾಸರಾಜರು ಮತ್ತು ಶ್ರೀಪಾದರಾಜರ ರಚನೆ ಆಧಾರಿತ ಕೃತಿ) ಆಯೋಜನೆಗೊಂಡಿದೆ.
ಬೆಂಗಳೂರಿನ ಪೂರ್ಣಪ್ರಜ್ಞ ವಿದ್ಯಾಪೀಠದ ಡಾ. ಎಚ್.ಸತ್ಯನಾರಾಯಣಾಚಾರ್, ಉತ್ತರಾದಿಮಠದ ಜಯತೀರ್ಥ ವಿದ್ಯಾಪೀಠದ ಪ್ರಾಚಾರ್ಯ ಡಾ. ಸತ್ಯಧ್ಯಾನಾಚಾರ್ಯ ಕಟ್ಟಿ, ಮಂತ್ರಾಲಯ ಗುರುಸಾರ್ವಭೌಮ ಸಂಸ್ಕೃತಿ ವಿದ್ಯಾಪೀಠದ ಪ್ರಾಚಾರ್ಯ ವಿದ್ವಾನ್ ವಾದಿರಾಜಾಚಾರ್ಯ, ಮೈಸೂರಿನ ವಿದ್ವಾಂಸ ಡಾ.ಎನ್.ಕೆ.ರಾಮಶೇಷನ್, ಡಾ.ಅನಂತಪದ್ಮನಾಭರಾವ್, ಚತುರ್ವೇದಿ ವೇದವ್ಯಾಸಾಚಾರ್ಯ ಮತ್ತಿತರರು ಭಾಗವಹಿಸಲಿದ್ದಾರೆ. ರಾಜಲಕ್ಷ್ಮೀ ಪಾರ್ಥಸಾರಥಿ ಅಧ್ಯಕ್ಷತೆಯಲ್ಲಿ ಮಹಿಳಾ ಗೋಷ್ಠಿಯೂ ನಡೆಯಲಿದೆ.
ಭಾಗವಹಿಸಬಯಸುವ ಆಸಕ್ತರು ಹೆಚ್ಚಿನ ವಿವರಗಳಿಗೆ 9945781401 ಸಂಪರ್ಕಿಸಬಹುದು ಎಂದು ಆಯೋಜಕರಾದ ವಿದ್ವಾನ್ ಲಕ್ಷ್ಮೀನಾರಾಯಣಾಚಾರ್ಯರವರು ತಿಳಿಸಿದರು.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications