ತಮಿಳುನಾಡು: ಮೆಡಿಕಲ್ ಕೋರ್ಸ್ ಆಕಾಂಕ್ಷಿಗಳ ಆತ್ಮಹತ್ಯೆ
ಮದುರೈ, ಸೆ. 13: ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಒದಗಿಸುವ NEET, JEE ಮುಂದೂಡುವಂತೆ ಕೋರಿ 11 ರಾಜ್ಯಗಳು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದ ಬಳಿಕ ಇಂದು ದೇಶದೆಲ್ಲೆಡೆ 15 ಲಕ್ಷಕ್ಕೂ ಅಧಿಕ ಮಂದಿ ಪ್ರವೇಶ ಪರೀಕ್ಷೆ ತೆಗೆದುಕೊಂಡಿದ್ದಾರೆ. ಆದರೆ ನೀಟ್ ವಿರುದ್ಧ ನಿಂತಿದ್ದ ತಮಿಳುನಾಡಿನಲ್ಲಿ ಆಕಾಂಕ್ಷಿಗಳ ಸರಣಿ ಆತ್ಮಹತ್ಯೆ ಕಾಡತೊಡಗಿದೆ.
ತಮಿಳುನಾಡಿನ ಮದುರೈ, ಧರ್ಮಪುರಿ ಹಾಗೂ ನಾಮಕ್ಕಲ್ ಜಿಲ್ಲೆಯಲ್ಲಿ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬ ಯುವತಿ ಹಾಗೂ ಇಬ್ಬರು ಯುವಕರು ಮೃತಪಟ್ಟಿದ್ದು, 19 ರಿಂದ 21 ವಯಸ್ಸಿನ ಆಸುಪಾಸಿನವರು ಎಂದು ತಿಳಿದು ಬಂದಿದೆ.
ಧರ್ಮಪುರಿಯ ಇಲಕ್ಕಿಯಂಪಟ್ಟಿ ಎಂಬ ಊರಿನ 20 ವರ್ಷದ ಯುವಕ ಎಂ ಆದಿತ್ಯ, ನಾಮಕ್ಕಲ್ ಜಿಲ್ಲೆ ತಿರುಚೆಂಗೊಡೆಯ 21ವರ್ಷದ ಮೋತಿಲಾಲ್ ಹಾಗೂ ಮದುರೈನ ಯುವತಿ ಜ್ಯೋತಿಶ್ರೀ ಎಲ್ಲರೂ ಪರೀಕ್ಷೆ ಭಯ ಹಾಗೂ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

2017ರಲ್ಲಿ ಅರಿಯಲೂರಿನ ಮೆಡಿಕಲ್ ಕೋರ್ಸ್ ಆಕಾಂಕ್ಷಿ ಅನಿತಾ ಆತ್ಮಹತ್ಯೆ ಪ್ರಕರಣದ ನಂತರ ತಮಿಳುನಾಡಿನಲ್ಲಿ ನೀಟ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೊವಿಡ್ 19 ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದಂತೆ ಕೋರ್ಟ್ ಮೆಟ್ಟಿಲೇರಿದರೂ ಫಲ ಸಿಗಲಿಲ್ಲ. ಡಿಎಂಕೆ ಅಲ್ಲದೆ ಎಐಎಡಿಎಂಕೆ ಕೂಡಾ ಕೇಂದ್ರ ಸರ್ಕಾರದ ವಿರುದ್ಧ ದನಿಯೆತ್ತಿತ್ತು.
ವೈದ್ಯಕೀಯ ಪ್ರವೇಶNational Eligibility-cum-Entrance Test(NEET)ವನ್ನು ಸೆಪ್ಟೆಂಬರ್ 13ರಂದು ಆರಂಭವಾಗಿದ್ದು, 15 ಲಕ್ಷಕ್ಕೂ ಅಧಿಕ ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ. ಸುಮಾರು 11ಕ್ಕೂ ಅಧಿಕ ರಾಜ್ಯಗಳು ಪರೀಕ್ಷೆ ಮುಂದೂಡುವಂತೆ ಮನವಿ ಮಾಡಿದ್ದವು.
ವಿಶ್ವವಿದ್ಯಾಲಯ ಅನುದಾನ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್), ಕಾಮನ್ ಮ್ಯಾನೇಜ್ಮೆಂಟ್ ಅಡ್ಮಿಷನ್ ಟೆಸ್ಟ್ (ಸಿಎಂಎಟಿ) ಪರೀಕ್ಷೆಗಳ ಜತೆಗೆ ಈ ಪರೀಕ್ಷೆಗಳನ್ನು ಕೂಡ ನಡೆಸುವ ಹೊಣೆಗಾರಿಕೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್ಟಿಎ) ವಹಿಸಿಕೊಂಡಿದೆ. ಇದಕ್ಕೂ ಮುನ್ನ JEE ಮತ್ತು NEET ನಿರ್ವಹಣೆಯನ್ನು ಸಿಬಿಎಸ್ಇ ನಡೆಸುತ್ತಿತ್ತು.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications