ಮತ್ತೆ ವಾಯುಭಾರ ಕುಸಿತ, ನಿವಾರ್ ಪರಿಣಾಮ ಮತ್ತೆ ಮಳೆ
ಚೆನ್ನೈ, ನ. 29: ಬಂಗಾಳಕೊಲ್ಲಿ ಹಾಗೂ ಹಿಂದೂ ಮಹಾಸಾಗರದಲ್ಲಿ ಮತ್ತೊಮ್ಮೆ ಹೊಸದಾಗಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದ ತಮಿಳುನಾಡು ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ನಿವಾರ್ ಚಂಡಮಾರತವು ಭೂಸ್ಪರ್ಶವಾದ ಚಂಡಮಾರುತ ದುರ್ಬಲಗೊಳ್ಳದ ಕಾರಣ ಮತ್ತೊಂದು ವಾಯುಭಾರಕುಸಿತ ಉಂಟಾಗಿದೆ ಇದರಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ 3 ರ ತನಕ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ.
ತಮಿಳುನಾಡಿನ ಕರಾವಳಿ ಭಾಗದಲ್ಲಿ ಗಾಳಿ ಮಳೆ ಹಾಗೂ ಇತರೆಡೆ ಸಾಧಾರಣ ಮಳೆ ಸಂಭವಿಸಲಿದೆ. ತಮಿಳುನಾಡು, ಪುದುಚೇರಿ, ಕಾರಕ್ಕೈಲ್ ಕರಾವಳಿಯಲ್ಲಿ ಡಿಸೆಂಬರ್ 2 ಹಾಗೂ 3 ರಂದು ಹೆಚ್ಚಿನ ಮಳೆ ಸುರಿಯಲಿದೆ ಎಂದು ವರದಿ ಬಂದಿದೆ.

ಪುದುಚ್ಚೇರಿಯಿಂದ 30 ಕಿ.ಮೀ ದೂರ ಉತ್ತರ ಕರಾವಳಿಯಲ್ಲಿ ನಿವಾರ್ ಕ್ಷೀಣಿಸಿತ್ತು, ನವೆಂಬರ್ 26ರಿಂದ ಮಳೆ ಪ್ರಮಾಣ ತಗ್ಗಿತ್ತು. ಆದರೆ, ನಗರ ಪ್ರದೇಶಗಳಲ್ಲಿ ಹಲವೆಡೆ ನೀರು ನಿಂತಿದ್ದು, ನದಿಗಳು ತುಂಬಿ ತುಳುಕುತ್ತಿವೆ. ಚೆನ್ನೈ, ವೆಲ್ಲೂರು, ರಾಣಿಪೇಟ್, ತಿರುವಣ್ಣಾಮಲೈ, ಕಡಲೂರು ಹಾಗೂ ವಿಲ್ಲುಪುರಂನಲ್ಲಿ ಮತ್ತೆ ಮಳೆಯಾಗಲಿದೆ.
ಐದು ಜಿಲ್ಲೆಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದ್ದು, ನದಿ ಪಾತ್ರದ ಜನರು ಸುರಕ್ಷಿತ ಸ್ಥಳಗಳಲ್ಲಿ ಪರಿಹಾರ ಕೇಂದ್ರಗಳಲ್ಲಿ ಸದ್ಯಕ್ಕೆ ನೆಲೆಸುವಂತೆ ಸೂಚಿಸಲಾಗಿದೆ. ನಿವಾರ್ ಚಂಡಮಾರುತದಿಂದ ಲಕ್ಷಾಂತರ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಆದರೂ, ಐದು ಮಂದಿ ಬಲಿಯಾಗಿ, 2000ಕ್ಕೂ ಅಧಿಕ ಮರಗಳು ನೆಲಕ್ಕುರುಳಿತ್ತು. ನಿವಾರ್ ದಾಳಿಯಿಂದ ಸುಧಾರಿಸಿಕೊಳ್ಳುವ ಹೊತ್ತಿಗೆ ಮತ್ತೊಮ್ಮೆ ಗಾಳಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications