ತಮಿಳುನಾಡಿನಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ
ಚೆನ್ನೈ, ಮೇ 28: ತಮಿಳುನಾಡಿನ ಮೈಲಾಡುತುರೈನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಐಎಸ್ಐಎಸ್ ಶಂಕಿತ ಉಗ್ರನೊಬ್ಬನನ್ನು ಗುರುವಾರ ರಾತ್ರಿ ಬಂಧಿಸಿದೆ. ಬಂಧಿತನನ್ನು 25 ವರ್ಷದ ಮೊಹಮ್ಮದ್ ಆಶಿಕ್ ಎಂದು ಗುರುತಿಸಲಾಗಿದೆ.
2018ರಲ್ಲಿ ಕೊಯಮತ್ತೂರಿನಲ್ಲಿ ಕೆಲವು ಮುಖಂಡರನ್ನು ಕೊಲ್ಲಲು ಸಂಚುಹಾಕಿದ್ದ ಆರೋಪದ ಮೇಲೆ ಈತನನ್ನು ಈ ಮುನ್ನವೂ ಬಂಧಿಸಲಾಗಿತ್ತು. ಮೈಲಾಡುತುರೈ ಬಳಿಯ ನೀರ್ಡೂರಿನಲ್ಲಿ ಗುರುವಾರ ರಾತ್ರಿ ತನಿಖಾ ಸಂಸ್ಥೆ ಮತ್ತೆ ಆಶಿಕ್ನನ್ನು ಬಂಧಿಸಿದೆ.
2018ರಲ್ಲಿ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಮತ್ತು ಸಿರಿಯಾ (ಐಸಿಸ್) ಜೊತೆಗೆ ಸಹಕರಿಸಿ ಕೊಯಮತ್ತೂರಿನಲ್ಲಿ ಕೆಲವು ನಾಯಕರನ್ನು ಕೊಲ್ಲಲು ಸಂಚು ರೂಪಿಸಿದ್ದು, ಬಂಧಿಸಲಾಗಿತ್ತು. ನಂತರ ಜಾಮೀನಿನ ಮೇಲೆ ಈತ ಹೊರಬಂದಿದ್ದ.

ಇದಾದ ಮೇಲೆ ವಿಚಾರಣೆಗೆ ಹಾಜರಾಗದ ಆಶಿಕ್ ವಿರುದ್ಧ ವಿಶೇಷ ನ್ಯಾಯಾಲಯ ಜಾಮೀನುರಹಿತ ಬಂಧನ ವಾರೆಂಟ್ ಜಾರಿ ಮಾಡಿತ್ತು. ಇದೀಗ ತನಿಖಾ ಸಂಸ್ಥೆ ಆಶಿಕ್ನನ್ನು ಮತ್ತೆ ಬಂಧಿಸಿದೆ.
ತಮಿಳುನಾಡಿನ ವಿವಿಧ ಭಾಗದ ಏಳು ಜನರ ತಂಡ ಕೊಯಮತ್ತೂರಿನಲ್ಲಿ ಭಯೋತ್ಪಾದಕ ಸಂಘಟನೆ ಐಸಿಸ್ಗೆ ಸಹಕರಿಸುವುದಾಗಿ ನಿರ್ಧರಿಸಿ, ಕೊಯಮತ್ತೂರು ಮೂಲದ ನಾಯಕರನ್ನು ಕೊಲ್ಲಲು ಸಂಚು ರೂಪಿಸಿತ್ತು ಎಂದು ಮೂಲಗಳು ತಿಳಿಸಿತ್ತು.
ಕೋಮು ಸೌಹಾರ್ದತೆ ಮತ್ತು ದೇಶದ ಭದ್ರತೆಗೆ ಧಕ್ಕೆ ತಂದ ಆರೋಪದಲ್ಲಿ ಈ ತಂಡವನ್ನು ಬಂಧಿಸಿ 2018ರ ಸೆಪ್ಟೆಂಬರ್ನಲ್ಲಿ ದೆಹಲಿಯ ಎನ್ಐಎ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಿತ್ತು.
ಕೊಯಮತ್ತೂರು ಮರಕ್ಕಡೈ ಮೂಲದ ಮೊಹಮದ್ ಆಶಿಕ್ನನ್ನು ಪ್ರಕರಣದ ಪ್ರಮುಖ ಆರೋಪಿ ಎಂದು ಗುರುತಿಸಲಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications