'ಬಿಜೆಪಿ, ಸಂಘ ಪರಿವಾರದ ಒತ್ತಡ; ಎನ್ ಐಎನಿಂದ ಮುಸ್ಲಿಮರೇ ಟಾರ್ಗೆಟ್'
ತಮಿಳುನಾಡಿನಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ ಐ) ಕಚೇರಿ ಮೇಲೆ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ದಾಳಿ ನಡೆಸಿದ ನಂತರ ಶುಕ್ರವಾರ ಹೇಳಿಕೆ ನೀಡಿದ್ದು, ಮುಸ್ಲಿಮರನ್ನು ಗುರಿ ಮಾಡಿಕೊಂಡು, ಸಾಮಾಜಿಕ ಸಂಘಟನೆ ಪಿಎಫ್ ಐ ಅನ್ನು ಭಯೋತ್ಪಾದನೆ ಜತೆ ನಂಟು ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ.
ಪಿಎಫ್ ಐ ತಮಿಳುನಾಡು ಘಟಕದ ಅಧ್ಯಕ್ಷ ಎಂ.ಮೊಹ್ಮದ್ ಇಸ್ಮಾಯಿಲ್ ಅವರು ಆರೋಪ ಮಾಡಿದ್ದು, ರಾಷ್ಟ್ರೀಯ ತನಿಖಾ ದಳವು ಆಡಳಿತಾರೂಢ ಬಿಜೆಪಿ ಹಾಗೂ ಸಂಘ ಪರಿವಾರದ ಒತ್ತಡಕ್ಕೆ ಸಿಲುಕಿ, ಮುಸ್ಲಿಮರನ್ನು ಗುರಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ತನಿಖಾ ದಳವು ತಮಿಳುನಾಡು, ಪುದುಚೆರಿಯಲ್ಲಿ ಇಪ್ಪತ್ತು ಕಡೆ ಶೋಧ ಕಾರ್ಯಾಚರಣೆ ನಡೆಸಿತ್ತು. ಅದರಲ್ಲಿ ಪಿಎಫ್ ಐನ ನಾಲ್ಕು ಕಚೇರಿ ಕೂಡ ಸೆರಿತ್ತು. ಫೆಬ್ರವರಿ ಕೊನೆಯಲ್ಲಿ ಕುಂಭಕೋಣಂನಲ್ಲಿ ಪಿಎಂಕೆ ಕಾರ್ಯಕರ್ತನ ಕೊಲೆ ಅಗಿತ್ತು. ಆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದೆ.

ಹದಿನಾರು ಮೊಬೈಲ್ ಫೋನ್, ಇಪ್ಪತ್ತೊಂದು ಸಿಮ್ ಕಾರ್ಡ್, ಮೂರು ಲ್ಯಾಪ್ ಟಾಪ್, ಒಂಬತ್ತು ಹಾರ್ಡ್ ಡಿಸ್ಕ್, ಏಳು ಮೆಮೊರಿ ಕಾರ್ಡ್ ಹಾಗೂ ಪಿಎಫ್ ಐ ಎರಡು ಬ್ಯಾನರ್ ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ ಐಎ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಇಸ್ಮಾಯಿಲ್ ಮಾತನಾಡಿ, ಪಿಎಫ್ ಐನಿಂದ ಸಾಮಾಜಿಕ ಸೇವಾ ಕಾರ್ಯಗಳನ್ನು ಮಾಡಲಾಗುತ್ತಿದೆ. ಶೈಕ್ಷಣಿಕ ಕ್ಷೇತ್ರದಲ್ಲಿ ಇದೆ. ಆದರೂ ರಾಜ್ಯದಲ್ಲಿ ಎನ್ ಐಎನಿಂದ ಕಚೇರಿ ಮೇಲೆ ದಾಳಿ ನಡೆಸಲಾಗಿದೆ. ಒಂದೋ ಪಿಎಂಕೆ ಕಾರ್ಯಕರ್ತ ರಾಮಲಿಂಗಂ ಕೊಲೆ ವಿಚಾರಕ್ಕೋ ಅಥವಾ ಶ್ರೀಲಂಕಾ ಚರ್ಚ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ನಂಟು ಹಾಕಲು ಹೀಗೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ಎನ್ ಐಎನಿಂದ ಹೀಗೆ ಮುಸ್ಲಿಮರನ್ನು "ಗುರಿ" ಮಾಡಿಕೊಂಡು ದಾಳಿ ನಡೆಯುವುದು ಮುಂದುವರಿದರೆ ಪಿಎಫ್ ಐನಿಂದ ಕಾನೂನು ಮೊರೆ ಹೋಗಲಾಗುವುದು ಹಾಗೂ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಇಸ್ಮಾಯಿಲ್ ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications