ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ: ಕೈಲಾಸದಿಂದ ಬಂತು ಸಂದೇಶ
ಚೆನ್ನೈ ಜೂನ್ 7: ತನ್ನ ಹೇಳಿಕೆ ಮೂಲಕ ಸದಾ ಸುದ್ದಿಯಲ್ಲಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿಗಳು ಸದ್ಯ ಮತ್ತೊಂದು ಸಂದೇಶ ಕಳುಹಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಈ ಬಾರಿ ನಿತ್ಯಾನಂದ ಹೇಳಿಕೆ ನೀಡಿದ್ದು ತನ್ನ ಬಗ್ಗೆ ಅಲ್ಲ ಅಥವ ತನ್ನ ಭಕ್ತರ ಬಗ್ಗೆ ಕೂಡ ಅಲ್ಲ. ಬದಲಿಗೆ ಅವರು ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಬಗ್ಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ. ಅದು ರಾಜಕೀಯಕ್ಕೆ ಸಂಬಂಧಿಸಿದ ಕೈಲಾಸದಿಂದ ಬಂದ ಸಂದೇಶ. ಆಶ್ಚರ್ಯ ಅನಿಸಿದರೂ ಇದು ನಿಜ.
ಮುಸ್ಲಿಂ ಸಮುದಾಯದ ವಿರುದ್ಧ ನೀಡಲಾಗುತ್ತಿರುವ ಹೇಳಿಕೆಗಳನ್ನು ಕೈಲಾಸದಲ್ಲಿರುವ ನಿತ್ಯಾನಂದ ವಿರೋಧಿಸಿದ್ದಾರೆ. ಸಮುದಾಯದ ವಿರುದ್ಧ ನೀಡಲಾಗುತ್ತಿರುವ ಹೇಳಿಕೆಗಳನ್ನು ಕೊನೆಗೊಳಿಸಲು ಹಾಗೂ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಭಾರತ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. 'ಇದು ಬದನೆಕಾಯಿ ತಿಂದು ಶಾಸ್ತ್ರ ಹೇಳಿದಂತೆ'. ಅತ್ಯಾಚಾರದ ಪ್ರಕರಣದಲ್ಲಿ ಸಿಲುಕಿರುವ ಹಾಗೂ ಖಾಕಿ ಕೈಯಿಂದ ತಪ್ಪಿಸಿಕೊಂಡು ಕೈಲಾಸದಲ್ಲಿ ನೆಲೆಯೂರಿರುವ ನಿತ್ಯಾನಂದ ಈ ಮಾತನ್ನು ಹೇಳಿದ್ದಾರೆ.
remarks that has generated rage among Muslim Ummah. Kailasa calls upon India to work together in ending the Islamophobia and cease any provocative acts in the interest of peace and stability.(3/3)
— Ministry of Foreign Affairs - Kailasa (@MoFA_Kailasa) June 7, 2022
ಇತ್ತೀಚೆಗೆ ಬಿಜೆಪಿ ವಕ್ತಾರೆ ಆಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ನಿತ್ಯಾನಂದನಿಂದ ಈ ಸಂದೇಶ ಬಂದಿದೆ. ಜೊತೆಗೆ ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ ಆಡಳಿತ ಪಕ್ಷದ ನಿರ್ಧಾರವನ್ನು ನಿತ್ಯಾನಂದ ಕೈಲಾಸದಿಂದ ಸ್ವಾಗತಿಸಿದ್ದಾರೆ. 'ಭಾರತೀಯ ರಾಜಕಾರಣಿಗಳ ಮಾನಹಾನಿಕರ ಹೇಳಿಕೆಗಳನ್ನು ಕೈಲಾಸ ಬಲವಾಗಿ ಖಂಡಿಸುತ್ತದೆ. ಪ್ರವಾದಿ ಮುಹಮ್ಮದ್ ವಿರುದ್ಧ ಭಾರತೀಯ ರಾಜಕಾರಣಿಗಳ ಅವಹೇಳನಕಾರಿ ಹೇಳಿಕೆಗಳನ್ನು ಕೈಲಾಸ ನಿರ್ದಾಕ್ಷಿಣ್ಯವಾಗಿ ಖಂಡಿಸುತ್ತದೆ' ಎಂದು ಹೇಳಿದ್ದಾರೆ.

ಈ ಪೋಸ್ಟ್ನಿಂದಾಗಿ ತಮ್ಮದೇ ಕೈಲಾಸ ದೇಶ ಸೃಷ್ಟಿಸಿ, ಅಲ್ಲಿ ತಮ್ಮದೇ ರಿಸರ್ವ್ ಬ್ಯಾಂಕ್, ಕರೆನ್ಸಿ ಹೊಂದಿರೋ ಬಿಡದಿ ಧ್ಯಾನಪೀಠದ ವಿವಾದಿತ ಸ್ವಾಮೀಜಿ ಮತ್ತೆ ಸುದ್ದಿಯಾಗಿದ್ದಾರೆ. ಮೊನ್ನೆಯಷ್ಟೇ 'ನಾನು ಮತ್ತೆ ಬರುತ್ತೇನೆ' ಎಂದು ನಿತ್ಯಾನಂದ ಘೋಷಣೆ ಮಾಡಿದ್ದರು. ಇದರಿಂದ ನಿತ್ಯಾನಂದ ಭಕ್ತರು ಸಂತಸಗೊಂಡಿದ್ದರು.

ನಿತ್ಯಾನಂದ ಬೆಂಗಳೂರು ಸಮೀಪದ ಬಿಡದಿಯಲ್ಲಿ ಆಶ್ರಮ ಸ್ಥಾಪಿಸಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಆಶ್ರಮದಲ್ಲಿ ಮಹಿಳಾ ಶಿಷ್ಯೆಯರನ್ನು ಬಲವಂತವಾಗಿ ಬಂಧಿಸಿ ಅತ್ಯಾಚಾರ ಎಸಗಿರುವುದು ಸೇರಿದಂತೆ ಹಲವಾರು ಆರೋಪಗಳು, ದೂರುಗಳು ಅವರ ಮೇಲಿದ್ದವು. ಪೊಲೀಸರಿಗೆ ಬೇಕಾಗಿದ್ದ ನಿತ್ಯಾನಂದ ಕೈಲಾಸ ವೆಬ್ ಸೈಟ್ನಲ್ಲಿ ಕಾಣಿಸಿಕೊಂಡು ಪ್ರತ್ಯೇಕ ದ್ವೀಪ ದೇಶ ಖರೀದಿಸಿ ನೆಲೆಸಿರುವುದಾಗಿ ಪ್ರಕಟಿಸಿದ್ದಾನೆ.
(ಒನ್ಇಂಡಿಯಾ ಸುದ್ದಿ)
Recommended Video
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ












Click it and Unblock the Notifications