ಪ್ರವಾದಿ ಮುಹಮ್ಮದ್ ವಿರುದ್ಧ ಹೇಳಿಕೆ: ಕೈಲಾಸದಿಂದ ಬಂತು ಸಂದೇಶ
ಚೆನ್ನೈ ಜೂನ್ 7: ತನ್ನ ಹೇಳಿಕೆ ಮೂಲಕ ಸದಾ ಸುದ್ದಿಯಲ್ಲಿರುವ ಸ್ವಯಂ ಘೋಷಿತ ದೇವ ಮಾನವ ನಿತ್ಯಾನಂದ ಸ್ವಾಮಿಗಳು ಸದ್ಯ ಮತ್ತೊಂದು ಸಂದೇಶ ಕಳುಹಿಸುವ ಮೂಲಕ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾರೆ. ಈ ಬಾರಿ ನಿತ್ಯಾನಂದ ಹೇಳಿಕೆ ನೀಡಿದ್ದು ತನ್ನ ಬಗ್ಗೆ ಅಲ್ಲ ಅಥವ ತನ್ನ ಭಕ್ತರ ಬಗ್ಗೆ ಕೂಡ ಅಲ್ಲ. ಬದಲಿಗೆ ಅವರು ಇತ್ತೀಚೆಗೆ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಬಗ್ಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ. ಅದು ರಾಜಕೀಯಕ್ಕೆ ಸಂಬಂಧಿಸಿದ ಕೈಲಾಸದಿಂದ ಬಂದ ಸಂದೇಶ. ಆಶ್ಚರ್ಯ ಅನಿಸಿದರೂ ಇದು ನಿಜ.
ಮುಸ್ಲಿಂ ಸಮುದಾಯದ ವಿರುದ್ಧ ನೀಡಲಾಗುತ್ತಿರುವ ಹೇಳಿಕೆಗಳನ್ನು ಕೈಲಾಸದಲ್ಲಿರುವ ನಿತ್ಯಾನಂದ ವಿರೋಧಿಸಿದ್ದಾರೆ. ಸಮುದಾಯದ ವಿರುದ್ಧ ನೀಡಲಾಗುತ್ತಿರುವ ಹೇಳಿಕೆಗಳನ್ನು ಕೊನೆಗೊಳಿಸಲು ಹಾಗೂ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಭಾರತ ಒಟ್ಟಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದ್ದಾರೆ. 'ಇದು ಬದನೆಕಾಯಿ ತಿಂದು ಶಾಸ್ತ್ರ ಹೇಳಿದಂತೆ'. ಅತ್ಯಾಚಾರದ ಪ್ರಕರಣದಲ್ಲಿ ಸಿಲುಕಿರುವ ಹಾಗೂ ಖಾಕಿ ಕೈಯಿಂದ ತಪ್ಪಿಸಿಕೊಂಡು ಕೈಲಾಸದಲ್ಲಿ ನೆಲೆಯೂರಿರುವ ನಿತ್ಯಾನಂದ ಈ ಮಾತನ್ನು ಹೇಳಿದ್ದಾರೆ.
remarks that has generated rage among Muslim Ummah. Kailasa calls upon India to work together in ending the Islamophobia and cease any provocative acts in the interest of peace and stability.(3/3)
— Ministry of Foreign Affairs - Kailasa (@MoFA_Kailasa) June 7, 2022
ಇತ್ತೀಚೆಗೆ ಬಿಜೆಪಿ ವಕ್ತಾರೆ ಆಗಿದ್ದ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದಕ್ಕೆ ನಿತ್ಯಾನಂದನಿಂದ ಈ ಸಂದೇಶ ಬಂದಿದೆ. ಜೊತೆಗೆ ಶರ್ಮಾ ಅವರನ್ನು ಪಕ್ಷದಿಂದ ಅಮಾನತುಗೊಳಿಸಿದ ಆಡಳಿತ ಪಕ್ಷದ ನಿರ್ಧಾರವನ್ನು ನಿತ್ಯಾನಂದ ಕೈಲಾಸದಿಂದ ಸ್ವಾಗತಿಸಿದ್ದಾರೆ. 'ಭಾರತೀಯ ರಾಜಕಾರಣಿಗಳ ಮಾನಹಾನಿಕರ ಹೇಳಿಕೆಗಳನ್ನು ಕೈಲಾಸ ಬಲವಾಗಿ ಖಂಡಿಸುತ್ತದೆ. ಪ್ರವಾದಿ ಮುಹಮ್ಮದ್ ವಿರುದ್ಧ ಭಾರತೀಯ ರಾಜಕಾರಣಿಗಳ ಅವಹೇಳನಕಾರಿ ಹೇಳಿಕೆಗಳನ್ನು ಕೈಲಾಸ ನಿರ್ದಾಕ್ಷಿಣ್ಯವಾಗಿ ಖಂಡಿಸುತ್ತದೆ' ಎಂದು ಹೇಳಿದ್ದಾರೆ.

ಈ ಪೋಸ್ಟ್ನಿಂದಾಗಿ ತಮ್ಮದೇ ಕೈಲಾಸ ದೇಶ ಸೃಷ್ಟಿಸಿ, ಅಲ್ಲಿ ತಮ್ಮದೇ ರಿಸರ್ವ್ ಬ್ಯಾಂಕ್, ಕರೆನ್ಸಿ ಹೊಂದಿರೋ ಬಿಡದಿ ಧ್ಯಾನಪೀಠದ ವಿವಾದಿತ ಸ್ವಾಮೀಜಿ ಮತ್ತೆ ಸುದ್ದಿಯಾಗಿದ್ದಾರೆ. ಮೊನ್ನೆಯಷ್ಟೇ 'ನಾನು ಮತ್ತೆ ಬರುತ್ತೇನೆ' ಎಂದು ನಿತ್ಯಾನಂದ ಘೋಷಣೆ ಮಾಡಿದ್ದರು. ಇದರಿಂದ ನಿತ್ಯಾನಂದ ಭಕ್ತರು ಸಂತಸಗೊಂಡಿದ್ದರು.

ನಿತ್ಯಾನಂದ ಬೆಂಗಳೂರು ಸಮೀಪದ ಬಿಡದಿಯಲ್ಲಿ ಆಶ್ರಮ ಸ್ಥಾಪಿಸಿ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದರು. ಆಶ್ರಮದಲ್ಲಿ ಮಹಿಳಾ ಶಿಷ್ಯೆಯರನ್ನು ಬಲವಂತವಾಗಿ ಬಂಧಿಸಿ ಅತ್ಯಾಚಾರ ಎಸಗಿರುವುದು ಸೇರಿದಂತೆ ಹಲವಾರು ಆರೋಪಗಳು, ದೂರುಗಳು ಅವರ ಮೇಲಿದ್ದವು. ಪೊಲೀಸರಿಗೆ ಬೇಕಾಗಿದ್ದ ನಿತ್ಯಾನಂದ ಕೈಲಾಸ ವೆಬ್ ಸೈಟ್ನಲ್ಲಿ ಕಾಣಿಸಿಕೊಂಡು ಪ್ರತ್ಯೇಕ ದ್ವೀಪ ದೇಶ ಖರೀದಿಸಿ ನೆಲೆಸಿರುವುದಾಗಿ ಪ್ರಕಟಿಸಿದ್ದಾನೆ.
(ಒನ್ಇಂಡಿಯಾ ಸುದ್ದಿ)
Recommended Video
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications