ಸದ್ಯದ ಮಟ್ಟಿಗೆ ನಾನು ರಾಜಕೀಯಕ್ಕೆ ಬರೋಲ್ಲ: ರಜನಿಕಾಂತ್ ಸ್ಪಷ್ಟನೆ
ಚೆನ್ನೈನಲ್ಲಿ ಸೋಮವಾರ ಬೆಳಗ್ಗೆ ತಮ್ಮ ಅಭಿಮಾನಿಗಳ ಜತೆಗೆ ನಡೆಸಿದ ಸಂವಾದದಲ್ಲಿ ಈ ರೀತಿ ಹೇಳಿರುವ ರಜನಿ ಅಭಿಮಾನಿಗಳಲ್ಲಿ ಕೊಂಚ ನಿರಾಸೆ ಮೂಡಿಸಿದ್ದಾರೆ.
ಚೆನ್ನೈ, ಮೇ 15: ತಮಿಳು ಸೂಪರ್ ಸ್ಟಾರ್ ರಜನೀಕಾಂತ್ ಅವರು ರಾಜಕೀಯಕ್ಕೆ ಬರುತ್ತಾರೆ. ಅವರು ರಾಜಕೀಯಕ್ಕೆ ಬಂದರೆ, ಒಂದಲ್ಲಾ ಒಂದು ದಿನ ತಮಿಳುನಾಡಿನ ಮುಖ್ಯಮಂತ್ರಿಯಾಗುತ್ತಾರೆ ಎಂದೆಲ್ಲಾ ಕನಸು ಕಾಣುತ್ತಿದ್ದ ಅವರ ಅಭಿಮಾನಿಗಳಿಗೆ ತಾತ್ಕಾಲಿಕವಾಗಿ ನಿರಾಸೆಯಾಗಿದೆ.
ಸದ್ಯದ ಮಟ್ಟಿಗೆ ತಾವು ರಾಜಕೀಯ ರಂಗಕ್ಕೆ ಬರುವ ಯಾವುದೇ ಉದ್ದೇಶವನ್ನು ಹೊಂದಿಲ್ಲವೆಂದು ಖುದ್ದು ರಜನೀಕಾಂತ್ ಅವರೇ ಘೋಷಿಸಿದ್ದಾರೆ.

ಚೆನ್ನೈನಲ್ಲಿ ಸೋಮವಾರ ಬೆಳಗ್ಗೆ ತಮ್ಮ ಅಭಿಮಾನಿಗಳ ಜತೆಗೆ ನಡೆಸಿದ ಸಂವಾದದಲ್ಲಿ ಈ ರೀತಿ ಹೇಳಿರುವ ರಜನಿ, ಸದ್ಯಕ್ಕೆ ತಮಗೆ ರಾಜಕೀಯ ಸೇರುವ ಇಚ್ಛೆಯಿಲ್ಲ. ಆದರೆ, ಮುಂದಿನ ಭವಿಷ್ಯದಲ್ಲಿ ಏನಾಗುತ್ತದೆ ಎಂಬುದು ಗೊತ್ತಿಲ್ಲ. ಎಲ್ಲವೂ ದೈವೇಚ್ಛೆ. ಮುಂದಿನ ದಿನಗಳಲ್ಲಿ ನಾನು ರಾಜಕೀಯ ಬರಬಹುದು ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಬಿಜೆಪಿ ಸೇರಲಾರೆ: ''ಕೆಲ ದಿನಗಳಿಂದ ನಾನು ಬಿಜೆಪಿ ಅಥವಾ ಇತರ ರಾಜಕೀಯ ಪಕ್ಷಗಳಿಗೆ ಸೇರುತ್ತೇನೆಂಬ ಸುದ್ದಿಗಳು ಹರಿದಾಡತೊಡಗಿವೆ. ಆದರೆ, ನಾನು ಬಿಜೆಪಿ ಅಥವಾ ಯಾವುದೇ ರಾಜಕೀಯ ಪಕ್ಷವನ್ನು ಸೇರುವುದಿಲ್ಲ'' ಎಂದು ರಜನಿಕಾಂತ್ ತಿಳಿಸಿದರು.
ಹಣ ಮಾಡಲು ಅವಕಾಶ ನೀಡಲ್ಲ: ''ಸದ್ಯಕ್ಕಂತೂ ನಾನು ರಾಜಕೀಯ ಸೇರುವುದಿಲ್ಲ. ಆದರೆ, ಮುಂದೊಂದು ದಿನ ನಾನು ರಾಜಕೀಯ ಸೇರಿದರೆ ಹಣ ಮಾಡುವವರನ್ನು ನನ್ನ ಹತ್ತಿರ ಸುಳಿಯಲು ಬಿಡುವುದಿಲ್ಲ. ಹಣ ಮಾಡಲು ನಾನು ಅವಕಾಶವನ್ನೂ ಕೊಡುವುದಿಲ್ಲ'' ಎಂದು ಅವರು ಹೇಳಿದರು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications