ಜಯಲಲಿತಾ ಸಾವಿನ ತನಿಖೆಗೆ ಸಿದ್ಧ: ಅಪೊಲೊ ಆಸ್ಪತ್ರೆ
ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಯಲಿತಾ ಅವರ ಚಿಕಿತ್ಸೆಯಲ್ಲಿ ಯಾರ ಹಸ್ತಕ್ಷೇಪವೂ ಆಗಿಲ್ಲ. ಚೆನ್ನೈನಲ್ಲಿನ ಅಪೊಲೊ ಆಸ್ಪತ್ರೆಯ ಮುಖ್ಯಸ್ಥರ ಸ್ಪಷ್ಟನೆ. ಇದೇ ಆಸ್ಪತ್ರೆಯಲ್ಲಿ ತಮ್ಮ ಕೊನೆಯ ದಿನಗಳಲ್ಲಿ ಚಿಕಿತ್ಸೆ ಪಡೆದಿದ್ದ ಜಯಲಲಿತಾ.
ಚೆನ್ನೈ, ಜುಲೈ 19: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಗೆ ನೀಡಲಾಗಿರುವ ಚಿಕಿತ್ಸೆಯಲ್ಲಿ ಯಾರ ಹಸ್ತಕ್ಷೇಪವೂ ಆಗಿಲ್ಲ. ಎಂದು ಅಪೊಲೊ ಆಸ್ಪತ್ರೆಯ ಸಂಸ್ಥಾಪಕ ಅಧ್ಯಕ್ಷರು ತಿಳಿಸಿದ್ದಾರೆ.
ಬುಧವಾರ, ಸುದ್ದಿಗಾರರೊಂದಿಗೆ ಮಾತನಾಡಿದ ಪ್ರತಾಪ್ ಸಿ. ರೆಡ್ಡಿ, ''ಜಯಲಲಿತಾ ಅವರಿಗೆ ಆಸ್ಪತ್ರೆಯಲ್ಲಿ ನೀಡಲಾದ ಎಲ್ಲಾ ರೀತಿಯ ಚಿಕಿತ್ಸೆಗಳ ಬಗ್ಗೆ ಸೂಕ್ತ ದಾಖಲಾತಿಯನ್ನು ನಾವು ಹೊಂದಿದ್ದೇವೆ. ಅಲ್ಲದೆ, ಅವರಿಗೆ ನೀಡಲಾಗಿರುವ ಚಿಕಿತ್ಸೆಯಲ್ಲಿ ಯಾರ ಹಸ್ತಕ್ಷೇಪವೂ ಆಗಿಲ್ಲ. ಇದನ್ನು ದಾಖಲೆಗಳೇ ಹೇಳುತ್ತವೆ. ಈ ಹಿನ್ನೆಲೆಯಲ್ಲಿ, ನಾವು ಯಾವುದೇ ತನಿಖೆಗೆ ಸಿದ್ಧವಿದ್ದೇವೆ'' ಎಂದು ತಿಳಿಸಿದರು.

ಡಿಸೆಂಬರ್ ವೇಳೆಗೆ ಜಯಲಲಿತಾ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದರು. ಆದರೆ, ಇದ್ದಕ್ಕಿದ್ದಂತೆ ಸಂಭವಿಸಿದ ಹೃದಯಾಘಾತಕ್ಕೆ ಅವರು ಸಾವನ್ನಪ್ಪಿದರು ಎಂದು ಅವರು ವಿವರಿಸಿದರು.
ಕಳೆದ ವರ್ಷಾಂತ್ಯದ ಹೊತ್ತಿಗೆ ಜಯಲಲಿತಾ ಅವರ ಸಾವು ಸಂಭವಿಸಿದ್ದರೂ, ಅವರ ಸಾವಿನ ವಿಚಾರ ಮಾತ್ರ ಬೂದಿ ಮುಚ್ಚಿದ ಕೆಂಡದಂತಿದೆ. ಜಯಲಲಿತಾ ಅವರ ಕಟ್ಟಾ ಅಭಿಮಾನಿಗಳು ಪ್ರಕರಣದ ತನಿಖೆ ನಡೆಸಬೇಕೆಂದು ಆಗಾಗ ಆಗ್ರಹಿಸುತ್ತಲೇ ಬಂದಿದ್ದಾರೆ.
ಕಳೆದ ವರ್ಷ ಸೆಪ್ಟಂಬರ್ 22ರಂದು ನಿರ್ಜಲೀಕರಣ (ಡಿ ಹೈಡ್ರೇಷನ್) ಎಂಬ ಕಾರಣಕ್ಕಾಗಿ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಡಿ. 5ರಂದು ನಿಧನ ಹೊಂದಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications