ಎಐಎಡಿಎಂಕೆ ಕೇಂದ್ರ ಕಚೇರಿಯಲ್ಲಿ ಶಶಿಕಲಾ ಫೊಟೋಗೂ ಜಾಗವಿಲ್ಲ!
ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾರನ್ನು ನೇಮಿಸಿದ ನಂತರ ಪಕ್ಷದ ಕಚೇರಿಯಲ್ಲಿ ಅವರ ಚಿತ್ರಗಳನ್ನು ಹಾಕಲಾಗಿತ್ತು. ಆದರೆ ವಿಲೀನ ಮಾತುಕತೆಗಳು ಆರಂಭವಾಗುತ್ತಿದ್ದಂತೆ ಭಾವಚಿತ್ರಗಳನ್ನು ಕಸದಬುಟ್ಟಿಗೆ ಎಸೆಯಲಾಗಿದೆ.
ಚೆನ್ನೈ, ಏಪ್ರಿಲ್ 26: ಎಐಎಡಿಎಂಕೆ ಪಕ್ಷದಿಂದ ಶಶಿಕಲಾ ನಟರಾಜನ್ ಮತ್ತು ಅವರ ಸಂಬಂಧಿಗಳನ್ನು ಹೊರಗಟ್ಟಿಯಾಗಿದೆ. ಇದೀಗ ಕೇಂದ್ರ ಕಚೇರಿಯಿಂದ ಅವರ ಭಾವಚಿತ್ರಗಳನ್ನೂ ಕಿತ್ತೆಸೆಯಲಾಗಿದೆ.
ಕಳೆದೆರಡು ದಿನಗಳಿಂದ ಕಚೇರಿಯಲ್ಲಿರುವ ಶಶಿಕಲಾ ಚಿತ್ರಗಳನ್ನು ತೆಗೆಯುವಲ್ಲಿ ಸಿಬ್ಬಂದಿಗಳು ನಿರತರಾಗಿದ್ದಾರೆ. 2016ರಲ್ಲಿ ಹಂಗಾಮಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಶಶಿಕಲಾರನ್ನು ನೇಮಿಸಿದ ನಂತರ ಪಕ್ಷದ ಕಚೇರಿಯಲ್ಲಿ ಎಂಜಿ ರಾಮಚಂದ್ರನ್ ಹಾಗೂ ಜಯಲಲಿತಾ ಚಿತ್ರಗಳ ಪಕ್ಕದಲ್ಲಿ ಶಶಿಕಲಾ ಚಿತ್ರಗಳನ್ನೂ ತಂದು ಕೂರಿಸಲಾಗಿತ್ತು.[ಶಶಿಕಲಾ ಸಂಬಂಧಿ ಟಿಟಿವಿ ದಿನಕರನ್ ಅರೆಸ್ಟ್]

ಆದರೆ ಯಾವಾಗ ಒ ಪನ್ನೀರ್ ಸೆಲ್ವಂ ಬಣ ವಿಲೀನ ಮಾತುಕತೆಗೆ ಮುಂದಾಯಿತೋ ಇದೀಗ ಈ ಭಾವಚಿತ್ರಗಳನ್ನೂ ಕಸದಬುಟ್ಟಿಗೆ ಎಸೆಯಲಾಗಿದೆ.
ವಿಲೀನ ಮಾತುಕತೆ ಆರಂಭಿಸಬೇಕಾದರೆ ಪಕ್ಷದ ಮುಖವಾಣಿಯಲ್ಲಿ ಶಶಿಕಲಾ ನಟರಾಜನ್ ಸಂಬಂಧಿತ ವರದಿ ಪ್ರಸಾರ ನಿಲ್ಲಿಸಬೇಕು. ಕೇಂದ್ರ ಕಚೇರಿಯಲ್ಲಿರುವ ಶಶಿಕಲಾ ಭಾವಚಿತ್ರಗಳನ್ನು ಕಿತ್ತೆಸೆಯಬೇಕು ಎಂಬ ಷರತ್ತನ್ನು ಒ ಪನ್ನೀರ್ ಸೆಲ್ವಂ ಬಣ ಮುಂದಿಟ್ಟಿತ್ತು. ಅದರಂತೆ ಎಡಪ್ಪಾಡಿ ಪಳನಿಸ್ವಾಮಿ ಬಣ ಈ ಕೆಲಸ ಕೈಗೆತ್ತಿಕೊಂಡಿದೆ.
Posters of #SasikalaNatarjan removed from AIADMK HQ in Chennai pic.twitter.com/RZP9OVlPzU
— ANI (@ANI_news) April 26, 2017
ಹೀಗೆ ಪೋಸ್ಟರ್ ಗಳನ್ನು ಕಿತ್ತೆಸೆದು, ಟಿಟಿವಿ ದಿನಕರನ್ ಮತ್ತು ಶಶಿಕಲಾರನ್ನೂ ಪಕ್ಷದಿಂದ ಹೊರ ಹಾಕಿ ಎರಡೂ ಬಣಗಳು ವಿಲೀನ ಪ್ರಕ್ರಿಯೆಗೆ ಇನ್ನೇನು ಸಿದ್ದವಾಗಿವೆ. ಅಂತಿಮ ಹಂತದ ವಿಲೀನ ಮಾತ್ರ ಬಾಕಿ ಉಳಿದುಕೊಂಡಿದೆ. (ಒನ್ ಇಂಡಿಯಾ ಸುದ್ದಿ)
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications