ರಾಜಕೀಯದಲ್ಲಿ ಹೊರಗಿನವರೆಂಬುದೇ ಇಲ್ಲ; ಕಮಲ್ ಹಾಸನ್
ಚೆನ್ನೈ, ಮಾರ್ಚ್ 22: ರಾಜಕೀಯದಲ್ಲಿ ಹೊರಗಿನವರು ಎಂಬುದಿಲ್ಲ. ಇಲ್ಲಿ ಇರುವುದು ಭಾರತೀಯ ಎಂಬುದಷ್ಟೆ ಎಂದು ನಟ ಹಾಗೂ ಮಕ್ಕಳನೀದಿ ಮಯ್ಯಂ ಪಕ್ಷದ ಮುಖಂಡ ಕಮಲ್ ಹಾಸನ್ ಪ್ರತಿಕ್ರಿಯಿಸಿದ್ದಾರೆ.
ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕೊಯಮತ್ತೂರು ದಕ್ಷಿಣ ಕ್ಷೇತ್ರದಿಂದ ಕಮಲ್ ಹಾಸನ್ ಸ್ಪರ್ಧಿಸಲಿದ್ದು, ತಮ್ಮ ಪ್ರತಿಸ್ಪರ್ಧಿ, ಬಿಜೆಪಿಯ ವನತಿ ಶ್ರೀನಿವಾಸನ್ ಅವರಿಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಈಚೆಗೆ ಚುನಾವಣಾ ಪ್ರಚಾರದ ವೇಳೆ ಕಮಲ್ ಹಾಸನ್ ಅವರಿಗೆ ಸಣ್ಣ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೇಗ ಗುಣಮುಖರಾಗುವಂತೆ ಹಾರೈಸಿ ಶನಿವಾರ ವನತಿ ಶ್ರೀನಿವಾಸನ್ ಅವರು ಹೂಗುಚ್ಛ ಕಳುಹಿಸಿದ್ದರು.

ಪ್ರಿಯ ಸೋದರ ಎಂದು ಉಲ್ಲೇಖಿಸಿ, "ಕಮಲ್ ಹಾಸನ್ ಅವರ ಕಾಲಿಗೆ ಗಾಯವಾಗಿರುವುದು ತಿಳಿದುಬಂತು. ಬೇಗ ಗುಣಮುಖರಾಗಲಿ ಎಂದು ಹಾರೈಸಿ ಹೂಗುಚ್ಛ ಕಳುಹಿಸುತ್ತಿದ್ದೇನೆ. ನಮ್ಮ ಅತಿಥಿಗಳನ್ನು ಸತ್ಕರಿಸುವುದು, ಅವರ ಕಾಳಜಿ ವಹಿಸುವುದು ನಮ್ಮ ಸಂಪ್ರದಾಯ. ಅವರು ನಮ್ಮ ಅತಿಥಿಯಾದ ಕಾರಣ ಅವರ ಆರೋಗ್ಯ ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತಿದ್ದೇನೆ" ಎಂದು ಹೇಳಿದ್ದರು.
You can't make such logic in politics, there's no outsider, an Indian is an Indian. Gandhi Ji isn't a Gujarati, he's my father: Kamal Haasan, MNM on BJP's Coimbatore South candidate Vanathi Srinivasan's 'guest of Coimbatore' remark
— ANI (@ANI) March 22, 2021
Haasan is contesting from the same constituency pic.twitter.com/p3Vbszel2x
"ಅತಿಥಿ ಕಾಳಜಿ ವಹಿಸುವುದು" ಎಂಬ ಹೇಳಿಕೆಗೆ ಕಮಲ್ ಹಾಸನ್ ಪ್ರತಿಕ್ರಿಯೆ ನೀಡಿದ್ದು, "ರಾಜಕೀಯದಲ್ಲಿ ಈ ತರ್ಕ ಸರಿಯಲ್ಲ. ಇಲ್ಲಿ ಹೊರಗಿನವರು ಎಂಬುದು ಇಲ್ಲ. ಭಾರತೀಯ ಭಾರತೀಯ ಅಷ್ಟೆ. ಗಾಂಧಿ ಅವರು ಗುಜರಾತ್ನವರು. ಆದರೆ ಅವರು ನನ್ನ ತಂದೆಯೂ ಹೌದು" ಎಂದರು.
ಎಐಎಡಿಎಂಕೆ ಹಾಗೂ ಡಿಎಂಕೆ ನಂಬಿಕಾರ್ಹವಲ್ಲ ಎಂದು ಹೇಳಿದ್ದ ಕಮಲ್ ಹಾಸನ್ ವಿರುದ್ಧ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ. "ನಾನು ಕಮಲ್ ಹಾಸನ್ ಬಗ್ಗೆ ಮಾತನಾಡುವುದಿಲ್ಲ. ಅವರನ್ನು ನಾವು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ" ಎಂದಿದ್ದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications