'ಯುಪಿಎಯ ರಾಮಸೇತು ಯೋಜನೆ ಅಬಾಧಿತ'
ನವದೆಹಲಿ, ನ.4: ಯುಪಿಎ ಸರ್ಕಾರದ ಸೇತುಸಮುದ್ರಂ ಹಡಗು ನಾಲೆ ಯೋಜನೆ(ಎಸ್ಎಸ್ ಸಿಪಿ) ಅನುಷ್ಠಾನಗೊಳ್ಳಲಿದೆ ಇದರಲ್ಲಿ ಯಾವುದೇ ಸಂಶಯ ಬೇಡ ಜೊತೆಗೆ ರಾಮಸೇತುವೆಗೆ ಯಾವುದೇ ಧಕ್ಕೆಯಾಗುವುದಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹಡಗುಯಾನ ಸಚಿವ ನಿತಿನ್ ಗಡ್ಕರಿ ಸ್ಪಷ್ಟಪಡಿಸಿದ್ದಾರೆ.
ಎಸ್ಎಸ್ಸಿಪಿ ಯೋಜನೆ ಅನುಷ್ಠಾನಗೊಳ್ಳುವಾಗ 'ರಾಮ ಸೇತು' ಹಾಳಾಗಲಿದೆ, ಪರಿಸರಕ್ಕೆ ಧಕ್ಕೆ ಉಂಟಾಗಲಿದೆ. ತಮಿಳುನಾಡಿನ ಮೀನುಗಾರರ ದೈನಂದಿನ ಬದುಕಿಗೆ ಬರೆ ಎಳೆದಂತಾಗಲಿದೆ ಎಂಬ ಸುದ್ದಿಯನ್ನು ಸಚಿವ ನಿತಿನ್ ಗಡ್ಕರಿ ಅಲ್ಲಗೆಳೆದಿದ್ದಾರೆ.
ಈಗಾಗಲೇ ಪೂರ್ಣಗೊಂಡಿರುವ ಯೋಜನೆಯ ಭಾಗವನ್ನು ಬಳಸಿಕೊಳ್ಳುತ್ತೇವೆ. ಇನ್ನುಳಿದ ಭಾಗಕ್ಕೆ ಹೊಸ ಮಾರ್ಗವನ್ನು ಹುಡುಕುತ್ತಿದ್ದೇವೆ. ಈ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದರು. ಪಾಕ್ ಜಲಸಂಧಿ(Palk Straits)ಯ ವೀಕ್ಷಣೆ ಮಾಡಿದ ನಿತಿನ್ ಗಡ್ಕರಿ ಅವರು 'ಪೂರ್ವ ಮತ್ತು ಪಶ್ಚಿಮ ಕಡಲ ತೀರಗಳ ನಡುವೆ ಹಡಗುಗಳು ಶ್ರೀಲಂಕಾವನ್ನು ಸುತ್ತಿ ಬಳಸಿ ಬರುವುದರ ಬದಲಿಗೆ ಕಡಿಮೆ ಅಂತರದ ಮಾರ್ಗವನ್ನು ಸೂಚಿಸಲು ಯೋಜನೆ ಸಿದ್ದವಾಗುತ್ತಿದೆ ಎಂದಿದ್ದಾರೆ.

ರಾಮ ಸೇತುವೆ ಧ್ವಂಸಗೊಳಿಸಿ ಸೇತು ಸಮುದ್ರಂ ಯೋಜನೆ ಜಾರಿಗೆ ತರುವುದು ಆರ್ಥಿಕವಾಗಿ ಹಾಗೂ ಪರಿಸರ ದೃಷ್ಟಿಯಿಂದ ಕಾರ್ಯಸಾಧುವಲ್ಲ' ಎಂದು ಆರ್.ಕೆ. ಪಚೌರಿ ವರದಿ ನೀಡಿದ್ದರು, ಸೇತುಸಮುದ್ರ ನೌಕಾಯಾನ ಕಡಲ್ಗಾಲುವೆ ಯೋಜನೆ ಆರ್ಥಿಕ ಮತ್ತು ಭೌಗೋಳಿಕ ಕಾರಣಗಳಿಗಾಗಿ ಕಾರ್ಯಸಾಧ್ಯವಲ್ಲ ಎಂದು ಪಚೌರಿ ಸಮಿತಿ ಹೇಳಿತ್ತು
ಆದರೆ, ಅಂದಿನ ಯುಪಿಎ ಸರ್ಕಾರ ವರದಿಯನ್ನು ತಿರಸ್ಕರಿಸಿ ಸೇತು ಸಮುದ್ರಂ ಯೋಜನೆಗೆ ಈಗಾಗಲೇ 800 ಕೋಟಿ ರೂ. ವೆಚ್ಚ ಮಾಡಿರುವುದರಿಂದ ಯೋಜನೆಯನ್ನು ಮುಂದುವರಿಸುವುದಾಗಿ ಸುಪ್ರೀಂಕೋರ್ಟಿಗೆ ಹೇಳಿತ್ತು.
ಆಡಂನ ಸೇತುವೆ ಎಂದು ಇದಕ್ಕೆ ಹೆಸರಿಟ್ಟಿದ್ದರೂ, ರಾಮ ಸೇತುವೆಂದೇ ಇದು ಜನಪ್ರಿಯವಾಗಿದೆ. ಸುಮಾರು 167 ಕಿ.ಮೀ ದೂರದ 12 ಮೀಟರ್ ಆಳದ 30 ಮೀ ವಿಸ್ತೀರ್ಣದ ಈ ಸೇತುಸಮುದ್ರ ನೌಕಾಯಾನ ಕಡಲ್ಗಾಲುವೆ ಯೋಜನೆ ಪಾಕ್ ಜಲಸಂಧಿ ದಾಟಿ ಭಾರತ ಹಾಗೂ ಶ್ರೀಲಂಕಾಕ್ಕೆ ಸಂರ್ಪಕ ಕಲ್ಪಿಸಲಿದೆ.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications