ನಿನ್ನೆ ಮೋದಿ ಹೊಗಳಿ, ಇಂದು ತೆಗಳಿದ ಡಿಎಂಕೆ ನಾಯಕರು
ಚೆನ್ನೈ, ನವೆಂಬರ್ 08: ಅಪನಗದೀಕರಣದ ವಿರುದ್ಧ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಇಂದು ಕರಾಳ ದಿನವನ್ನಾಗಿ ಆಚರಿಸುತ್ತಿವೆ. ಕಪ್ಪು ಬಟ್ಟೆ, ದಿರಿಸು ಧರಿಸಿದ್ದ ಜೆ ಸ್ಟಾಲಿನ್ ಅವರು ಮೋದಿ ಸರ್ಕಾರದ ವಿರುದ್ಧ ದನಿಯೆತ್ತಿದ್ದಾರೆ. ನೋಟ್ ನಿಷೇಧದಿಂದಾಗಿ ಜನ ಸಾಮಾನ್ಯರಿಗೆ ಭಾರಿ ತೊಂದರೆಯಾಗಿದೆ ಎಂದು ಪ್ರತಿಭಟನೆ ನಡೆಸಿದ್ದಾರೆ.
ನಿನ್ನೆ ದಿನ ಮೋದಿ ಅವರು ಡಿಎಂಕೆ ಅಧಿನಾಯಕ ಎಂ ಕರುಣಾನಿಧಿ ಅವರನ್ನು ಕಾಣಲು ಬಂದಿದ್ದರು. ನಂತರ ದೆಹಲಿಗೆ ಬರುವಂತೆ ಆಹ್ವಾನಿಸಿದ್ದರು. ಮುಂದಿನ ಚುನಾವಣೆಯಲ್ಲಿ ಡಿಎಂಕೆಗೆ ಜತೆ ಬಿಜೆಪಿ ಕೈಜೋಡಿಸುವ ಸಂಭವವಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು. ಅಲ್ಲದೆ, ನವೆಂಬರ್ 08ರಂದು ಮೋದಿ ಸರ್ಕಾರದ ವಿರುದ್ಧ ಕಪ್ಪು ದಿನಾಚರಣೆ ಮಾಡುವುದಿಲ್ಲ ಎಂದು ಜೆ ಸ್ಟಾಲಿನ್ ಹೇಳಿದ್ದರು.

ಆದರೆ, ಎನ್ ಡಿಎ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುವ ಮೂಲಕ ಡಿಎಂಕೆ ನಿಷ್ಠೆ ಎಂದಿದ್ದರೂ ಕಾಂಗ್ರೆಸ್ ಪರ ಎಂದು ಸ್ಟಾಲಿನ್ ಸಾರಿದ್ದಾರೆ.
500 ರು ಹಾಗೂ 1000 ರು ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸುವ ಮೂಲಕ ಜನ ಸಾಮಾನ್ಯರ ದೈನಂದಿನ ಆದಾಯಕ್ಕೆ ಮೋದಿ ಸರ್ಕಾರ ಕೊಡಲಿ ಪೆಟ್ಟು ಕೊಟ್ಟಿತು. ಸಣ್ಣ ವ್ಯಾಪಾರಿಗಳಿಗೆ ಭಾರಿ ನಷ್ಟ ಉಂಟಾಯಿತು. ಎಟಿಎಂ ಕ್ಯೂನಲ್ಲಿ ನಿಂತು ಅನೇಕ ಮಂದಿ ಮೃತಪಟ್ಟ ಘಟನೆಗಳು ವರದಿಯಾಗಿವೆ.
Led the multi-party Black Day demonstration at Madurai today. We condemned the BJP-led central govt for the disastrous demonetisation program which was an assault on both the economy and on democratic traditions. #BjpMoneyLaunderingDay pic.twitter.com/hE1XdL3yB7
— M.K.Stalin (@mkstalin) November 8, 2017
ಬಿಜೆಪಿಯ ಹುಚ್ಚಾಟದಿಂದ 125 ಕೋಟಿ ಜನ ಕಷ್ಟಪಡುವಂತಾಯಿತು. ಕಪ್ಪುಹಣ ನಿರ್ಮೂಲನೆ ಮಾಡುವ ಭರವಸೆ ನೀಡಿದವರು ನವೆಂಬರ್ 08ರ ಮಧ್ಯರಾತ್ರಿಯಿಂದ ನಮ್ಮ ಸ್ವಾತಂತ್ರ್ಯ ಕಿತ್ತು ಕೊಂಡರು ಎಂದು ಹೇಳಿದರು.
ಡಿಎಂಕೆ ಮುಖಂಡರಾದ ದೊರೈ ಮುರುಗನ್, ಕನಿಮೋಳಿ ನೇತೃತ್ವದಲ್ಲಿ ತಿರುಚನಾಪಳ್ಳಿ, ಕೊಯಮತ್ತೂರಿನಲ್ಲೂ ಪ್ರತಿಭಟನೆಗಳು ನಡೆಸಲಾಗಿದೆ.
Demonetisation turned life upside down, says Kanimozhi - “When people standing in queues complained, the ruling BJP cited the example ...
— manish kumar (@manishkumarbuzy) November 8, 2017
2016ರ ನ.8 ರಂದು 500, 1000 ರೂ. ಮುಖಬೆಲೆಯ ನೋಟುಗಳನ್ನು ರದ್ದು ಮಾಡುತ್ತಿರುವುದಾಗಿ ಪ್ರಧಾನಿ ಮೋದಿ ಘೋಷಿಸಿದ್ದರು. ಬಳಿಕ ನೋಟ್ ಬ್ಯಾನ್ ನಿರ್ಧಾರಕ್ಕೆ ದೇಶಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications