ಕಣ್ಣೂರಿನ ನಂತರ ಐಐಟಿ, ಮದ್ರಾಸಿನಲ್ಲಿ ಬೀಫ್ ಫೆಸ್ಟಿವಲ್
ಕೇರಳದ ಕಣ್ಣೂರಿನಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಎತ್ತು ಕೊಂದು ತಿಂದ ಬಳಿಕ ಮದ್ರಾಸಿನ ಐಐಟಿ ಕ್ಯಾಂಪಿನಲ್ಲಿ ಬೀಫ್ ಫೆಸ್ಟಿವಲ್ ನಡೆಸಲಾಗಿದೆ.
ಚೆನ್ನೈ, ಮೇ 29: ಕೇರಳದ ಕಣ್ಣೂರಿನಲ್ಲಿ ಯೂಥ್ ಕಾಂಗ್ರೆಸ್ ಕಾರ್ಯಕರ್ತರು ಎತ್ತು ಕೊಂದು ತಿಂದ ಬಳಿಕ ಮದ್ರಾಸಿನ ಐಐಟಿ ಕ್ಯಾಂಪಿನಲ್ಲಿ ಬೀಫ್ ಫೆಸ್ಟಿವಲ್ ನಡೆಸಲಾಗಿದೆ. ಈ ನಡುವೆ ಬೆಂಗಳೂರಿನಲ್ಲಿ ಬೀಫ್ ಫೆಸ್ಟಿವಲ್ ಕಾರ್ಯಕ್ರಮ ಸೋಮವಾರ ಸಂಜೆ ಆಯೋಜಿಸಲಾಗಿದೆ.
ಅಕ್ರಮವಾಗಿ ಪಶುಗಳ(ಹಸು,ಎಮ್ಮೆ, ಒಂಟೆ, ಎತ್ತು, ಇತ್ಯಾದಿ)ಮಾರಾಟವನ್ನು ತಪ್ಪಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ನಿಯಮಾವಳಿಗಳ ವಿರುದ್ಧ ಕೇರಳದಲ್ಲಿ ಭಾರಿ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.

ಕಸಾಯಿಖಾನೆಗಳಿಗೆ ಗೋವುಗಳನ್ನು ಮಾರಾಟ ಮಾಡುವುದಕ್ಕೆ ಕೇಂದ್ರ ಸರ್ಕಾರ ನಿಷೇಧ ಹೇರಿರುವುದನ್ನು ಖಂಡಿಸಿ ಐಐಟಿ, ಮದ್ರಾಸ್ ನ ಆವರಣದಲ್ಲಿ 50ಕ್ಕೂ ಅಧಿಕ ವಿದ್ಯಾರ್ಥಿಗಳು ದನದ ಮಾಂಸ ತಿಂದು ಪ್ರತಿಭಟನೆ ನಡೆಸಿದ್ದಾರೆ.
ಕಳೆದ ರಾತ್ರಿ ಐಐಟಿ ಮದ್ರಾಸ್ ನ ಕ್ಯಾಂಪಿನ ಹುಲ್ಲುಹಾಸಿನಲ್ಲಿ ಕುಳಿತು ದನದ ಮಾಂಸ ಸೇವಿಸಿದ ವಿದ್ಯಾರ್ಥಿಗಳು, ಸಿಪಿಐಎಂ ಕಾರ್ಯಕರ್ತರ ಬೀಫ್ ಫೆಸ್ಟಿವಲ್ ಸಮರ್ಥಿಸಿಕೊಂಡಿದ್ದಾರೆ.
'ನಾವು ಏನು ತಿನ್ನಬೇಕು ಎಂಬುದನ್ನುದೆಹಲಿ, ನಾಗಪುರ್ ನಿಂದ ಕಲಿಯಬೇಕಾಗಿಲ್ಲ' ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಕೇರಳದಲ್ಲಿನ ಪ್ರತಿಭಟನೆ ರೀತಿ ಸರಿಯಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಪರ -ವಿರೋಧ ಚರ್ಚೆ ಪ್ರತಿಭಟನೆಗಳು ಸದ್ಯಕ್ಕೆ ಜಾರಿಯಲ್ಲಿವೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications