ಪಕ್ಕದ ತಮಿಳುನಾಡಿಗೂ ಹಬ್ಬಿದ ಟಿಪ್ಪು ಜಯಂತಿ 'ಜ್ವರ'!
ಚೆನ್ನೈ, ನ.23: ಮೈಸೂರು ಹುಲಿ ಟಿಪ್ಪು ಸುಲ್ತಾನ್ ಅವರ ಜನ್ಮ ವಾರ್ಷಿಕೋತ್ಸವವನ್ನು ನಾಡಿನೆಲ್ಲೆಡೆ ಆಚರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಇದರಿಂದ ಉಂಟಾದ ಗೊಂದಲ, ಗಲಭೆ, ಸಾವು ಎಲ್ಲವೂ ಈಗ ತಮಿಳುನಾಡಿಗೂ ತಟ್ಟುತ್ತಿದೆ. ಈ ಬಗ್ಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಪಡೆದಿರುವ ಜಯಲಲಿತಾ ಸರ್ಕಾರ, ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡಲು ನಿರಾಕರಿಸಿದೆ.
ಕರ್ನಾಟಕ ಮಾದರಿಯಲ್ಲೇ ತಮಿಳುನಾಡಿನಲ್ಲೂ ಟಿಪ್ಪು ಸುಲ್ತಾನ್ ಜಯಂತಿ ಆಚರಿಸಬೇಕು ಎಂದು ಒತ್ತಾಯಿಸಿ ವೆಲ್ಲೂರಿನ ತಮಿಳಗ ಮಕ್ಕಲ್ ಜನನಾಯಕ ಕಚ್ಚಿ ಕಡೆಯಿಂದ ಮನವಿ ಸಲ್ಲಿಸಲಾಗಿತ್ತು.ಅದರೆ, ರಾಜ್ಯ ಸರ್ಕಾರ ಈ ಬಗ್ಗೆ ಖಡಾಖಂಡಿತವಾಗಿ ಒಪ್ಪಿಗೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ. [ಟಿಪ್ಪು ಜಯಂತಿ ವಿವಾದದ ಒಳ-ಹೊರಗು, ನಿಮ್ಮ ಮುಂದೆ]

ಗುಪ್ತಚರ ವರದಿ ಪ್ರಕಾರ ರಾಜ್ಯದಲ್ಲಿರುವ ಶಾಂತಿ ಸುವ್ಯವಸ್ಥೆ ಕದಡಲು ಇಂಥ ಜಯಂತಿಗಳನ್ನು ಬಳಸಿಕೊಳ್ಳಲಾಗುತ್ತಿದೆ. ಟಿಪ್ಪು ಜಯಂತಿಗೆ ಅನುಮತಿ ನೀಡಿದರೆ, ಕರ್ನಾಟಕದಂತೆ ಇಲ್ಲೂ ಕೂಡಾ ಗಲಭೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. [ಕೊಡವರು ಟಿಪ್ಪುವನ್ನು ವಿರೋಧಿಸುವುದೇಕೆ?]
ಕೋರ್ಟ್ ಮೆಟ್ಟಿಲೇರಿದ ಪ್ರಕರಣ: ಈಗ ಪ್ರಕರಣ ಮದ್ರಾಸ್ ಹೈಕೋರ್ಟ್ ತಲುಪಿದ್ದು, ವೆಲ್ಲೂರಿನ ಸಂಘಟನೆ ಕಾನೂನು ಹೋರಾಟಕ್ಕೆ ಮುಂದಾಗಿದೆ. ಈ ಹಿಂದೆ ಹೈದರಾಲಿ ಆವರ ಸ್ಮಾರಕ ನಿರ್ಮಾಣಕ್ಕೆ ಮನವಿ ಸಲ್ಲಿಸಿದಾಗ ಸರ್ಕಾರ ಒಪ್ಪಿಕೊಂಡಿತ್ತು. ಅದರೆ, ಈಗ ಟಿಪ್ಪು ಜಯಂತಿ ಆಚರಣೆಗೆ ಅಡ್ಡಿಪಡಿಸುತ್ತಿರುವುದೇಕೆ ಎಂದು ಪ್ರಶ್ನಿಸಿದೆ. [ಕೊಡಗಿನ ಕುಟ್ಟಪ್ಪ ಸಾವು: ಆಕಸ್ಮಿಕವೋ, ಪೂರ್ವ ನಿಯೋಜಿತವೋ?]
ತಮಿಳುನಾಡಿನಲ್ಲಿ ಟಿಪ್ಪು ಜಯಂತಿ ಆಚರಣೆ ಬಗ್ಗೆ ಪರ-ವಿರೋಧದ ಅಲೆ ಇನ್ನೂ ಇದೆ. ಕೆಲವರು ಹಿಂದೂ ದೇಗುಲ ಶೃಂಗೇರಿ ಮಠಕ್ಕೆ ನೀಡಿದ ದಾನ ದತ್ತಿಯನ್ನು ಪ್ರಸ್ತಾಪಿಸಿ, ಮರಾಠರು ಮಾಡಿದ ತಪ್ಪು ಟಿಪ್ಪು ಮೇಲೆ ಬಂದಿದೆ ಎಂದಿದ್ದಾರೆ.
ಇನ್ನೊಂದೆಡೆ ಟಿಪ್ಪು ಸುಲ್ತಾನ್ ಜೀವನ ಚರಿತ್ರೆ ಆಧಾರಿಸಿದ ಚಿತ್ರ ಮಾಡಲು ಹೊರಟ ಅಶೋಕ್ ಖೇಣಿ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಹಿಂದೂ ಮುನ್ನನಿ ಸೇರಿದಂತೆ ಅನೇಕ ಹಿಂದೂಪರ ಸಂಘಟನೆಗಳು ಎಚ್ಚರಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. (ಒನ್ ಇಂಡಿಯಾ ಸುದ್ದಿ)
-
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications