ಜಯಲಲಿತಾ ಆಪ್ತ ಪನ್ನೀರ್ ಸೆಲ್ವಂಗೆ ಸಿಎಂ ಪಟ್ಟ
ಚೆನ್ನೈ, ಸೆ.28: 'ಇತಿಹಾಸ ಮರುಕಳಿಸುತ್ತದೆ' ಎಂಬ ಮಾತಿದೆ ಅದು ತಮಿಳುನಾಡಿನ ಹಾಲಿ ವಿತ್ತ ಸಚಿವ ಓ ಪನ್ನೀರ್ ಸೆಲ್ವಂ ಪಾಲಿಗೆ ನಿಜವಾಗುತ್ತಿದೆ. ಪುರುಚ್ಚಿ ತಲೈವಿ, ತಮಿಳುನಾಡಿನ 'ಅಮ್ಮ' ಜಯಲಲಿತಾ ಅವರು ಜೈಲುಪಾಲಾದ ಹಿನ್ನೆಲೆಯಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಅವಕಾಶ ಮತ್ತೆ ಸೆಲ್ವಂಗೆ ಸಿಗುತ್ತಿದೆ.
ತಮಿಳುನಾಡಿನ ಮುಖ್ಯಮಂತ್ರಿ ಜೆ. ಜಯಲಲಿತಾ ಅವರ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ನೂತನ ಶಾಸಕಾಂಗ ನಾಯಕನನ್ನು ಆಯ್ಕೆ ಮಾಡಲು ಎಐಎಡಿಎಂಕೆ ಶಾಸಕಾಂಗ ಸಭೆ ನಡೆಸಲಾಯಿತು. ದೀರ್ಘಕಾಲ ನಡೆದ ಸಭೆಯಲ್ಲಿ ವಿತ್ತ ಸಚಿವ, ಪೆರಿಯಕುಲಂ ಕ್ಷೇತ್ರದ ಶಾಸಕ ಪನ್ನೀರ್ ಸೆಲ್ವಂ ಅವರನ್ನು ಶಾಸಕಾಂಗ ಪಕ್ಷದ ನಾಯಕ ಹಾಗೂ ಮುಂದಿನ ಸಿಎಂ ಎಂದು ಆಯ್ಕೆ ಮಾಡಲಾಗಿದೆ. ರಾಜ್ಯಪಾಲ ಕೆ. ರೋಸಯ್ಯ ಅವರನ್ನು ಭೇಟಿ ಮಾಡಲಿರುವ ಶಾಸಕರು ನಂತರ ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಘೋಷಿಸಲಿದ್ದಾರೆ.

ಹಿಸ್ಟರಿ ರಿಪೀಟ್ಸ್: 2001ರಲ್ಲಿ ತಾನ್ಸಿ ಭೂ ಹಗರಣ ಪ್ರಕರಣದಲ್ಲಿ ಸೆ.21, 20೦1ರಂದು ಅಂದಿನ ಮುಖ್ಯಮಂತ್ರಿ ಜಯಲಲಿತಾ ಅವರು ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆ ಆನ್ವಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. 2003ರಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಜಯಲಲಿತಾ ಆರೋಪ ಮುಕ್ತಗೊಂಡು ಖುಲಾಸೆ ಹೊಂದಿದ್ದರು.
ಅಂದು ತಮ್ಮ ಅಧಿಕಾರ ಉಳಿಸಿಕೊಳ್ಳಲು ಹಿರಿತನದ ಆಧಾರವನ್ನು ಲೆಕ್ಕಿಸದೆ ಥೇವರ್ ಸಮುದಾಯಕ್ಕೆ ಸೇರಿದ ತನ್ನ ನಿಷ್ಠಾವಂತ ಸೇವಕ ಪನ್ನೀರ್ ಸೆಲ್ವಂರನ್ನು ಸಿಎಂ ಸ್ಥಾನದಲ್ಲಿ ಜಯಾ ಕೂರಿಸಿ ರಿಮೋಟ್ ಕಂಟ್ರೋಲ್ ಸಿಎಂ ಆಗಿ ವರ್ತಿಸಿದ್ದರು.
ಓಪಿಎಸ್ ಎಂದು ಕರೆಯಲ್ಪಡುವ ಸೆಲ್ವಂ ಅವರು ಮುಖ್ಯಮಂತ್ರಿ ಅಲ್ಲದೆ ಲೋಕೋಪಯೋಗಿ ಸಚಿವ, ವಿತ್ತ ಸಚಿವ, ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕರಾಗಿ ಕೂಡಾ ಕಾರ್ಯ ನಿರ್ವಹಿಸಿದ್ದಾರೆ.ಇಂದಿಗೂ ಊರಿಗೆ ತೆರಳಿದಾಗ ರಾಜಕೀಯ ಮರೆಯುವ ಸೆಲ್ವಂ ಕೃಷಿಕರಾಗಿ, ಚಹಾ ಅಂಗಡಿ ಮಾಲೀಕರಾಗಿ ನಿಮಗೆ ಕಾಣ ಸಿಗುತ್ತಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications