ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪನ್ನೀರ್ ಸೆಲ್ವಂ ಪ್ರಮಾಣ ವಚನ
ಚೆನ್ನೈ, ಡಿಸೆಂಬರ್ 06: ತಮಿಳುನಾಡಿನ 'ಅಮ್ಮ' ಜಯಲಲಿತಾ ಅವರ ನಿಧನದ ಬಳಿಕ ರಾಜ್ಯದ ಅಧಿಕಾರ ಚುಕ್ಕಾಣಿ ಹಿಡಿಯುವ ಅವಕಾಶ ಮತ್ತೆ ಓ ಪನ್ನೀರ್ ಸೆಲ್ವಂ ಅವರಿಗೆ ಸಿಕ್ಕಿದೆ. ಸೆಲ್ವಂ ಅವರು ಸೋಮವಾರ ಮಧ್ಯರಾತ್ರಿ ನಂತರ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
[ಗ್ಯಾಲರಿ: ಶೋಕಸಾಗರದಲ್ಲಿ 'ಅಮ್ಮ'ನ ಮಕ್ಕಳು]
ಇದಕ್ಕೂ ಮುನ್ನ ನಡೆದ ಎಐಎಡಿಎಂಕೆ ಶಾಸಕಾಂಗ ಸಭೆಯಲ್ಲಿ ಪನ್ನೀರ್ ಸೆಲ್ವಂ ಅವರನ್ನು ನೂತನ ಶಾಸಕಾಂಗ ನಾಯಕ ಹಾಗೂ ಸಿಎಂಯಾಗಿ ಆಯ್ಕೆಮಾಡಲಾಯಿತು.[ತಮಿಳುನಾಡಿನ 'ಅಮ್ಮ' ಜೆ ಜಯಲಲಿತಾ ವಿಧಿವಶ]
ಅಪೋಲೋ ಆಸ್ಪತ್ರೆಯಲ್ಲಿ ಸೋಮವಾರ 11.30ಕ್ಕೆ ಹೃದಯಾಘಾತದಿಂದ ಜಯಲಲಿತಾ ಅವರು ಮೃತಪಟ್ಟ ಬಳಿಕ ರಾಜ್ಯದ ಆಡಳಿತ ವ್ಯವಸ್ಥೆಯನ್ನು ತಕ್ಷಣವೇ ವಹಿಸಿಕೊಂಡಿದ್ದಾರೆ. ರಾಜ್ಯಪಾಲ ವಿದ್ಯಾಸಾಗರ್ ಅವರು ನೂತನ ಸಿಎಂ ಪನ್ನೀರ್ ಸೆಲ್ವಂ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಸೆಲ್ವಂ ಅವರ ಜತೆಗೆ 15 ಸಚಿವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. [2014: ಕಣ್ಣೀರಿಟ್ಟು ಸಿಎಂ ಆದ ಪನ್ನೀರ್ ಸೆಲ್ವಂ]

ಓಪಿಎಸ್ ಎಂದು ಕರೆಯಲ್ಪಡುವ ಸೆಲ್ವಂ ಅವರು ಮುಖ್ಯಮಂತ್ರಿ ಅಲ್ಲದೆ ಲೋಕೋಪಯೋಗಿ ಸಚಿವ, ವಿತ್ತ ಸಚಿವ, ಶಾಸಕಾಂಗ ಪಕ್ಷದ ನಾಯಕ, ವಿರೋಧ ಪಕ್ಷದ ನಾಯಕರಾಗಿ ಕೂಡಾ ಕಾರ್ಯ ನಿರ್ವಹಿಸಿದ್ದಾರೆ.ಇಂದಿಗೂ ಊರಿಗೆ ತೆರಳಿದಾಗ ರಾಜಕೀಯ ಮರೆಯುವ ಸೆಲ್ವಂ ಕೃಷಿಕರಾಗಿ, ಚಹಾ ಅಂಗಡಿ ಮಾಲೀಕರಾಗಿ ನಿಮಗೆ ಕಾಣ ಸಿಗುತ್ತಾರೆ.[ಸ್ವಾಮಿನಿಷ್ಠೆಯ ಪ್ರತೀಕ ಪನ್ನೀರ್ ಸೆಲ್ವಂ ವ್ಯಕ್ತಿಚಿತ್ರ]
2001ರಲ್ಲಿ ತಾನ್ಸಿ ಭೂ ಹಗರಣ ಪ್ರಕರಣದಲ್ಲಿ ಸೆ.21, 2001ರಂದು ಅಂದಿನ ಮುಖ್ಯಮಂತ್ರಿ ಜಯಲಲಿತಾ ಅವರು ಅಪರಾಧಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿ ಕಾಯ್ದೆ ಆನ್ವಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
2003ರಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪಿನಿಂದ ಜಯಲಲಿತಾ ಆರೋಪ ಮುಕ್ತಗೊಂಡು ಖುಲಾಸೆ ಹೊಂದಿದ್ದರು. ಅಂದು ತಮ್ಮ ಅಧಿಕಾರ ಉಳಿಸಿಕೊಳ್ಳಲು ಹಿರಿತನದ ಆಧಾರವನ್ನು ಲೆಕ್ಕಿಸದೆ ಥೇವರ್ ಸಮುದಾಯಕ್ಕೆ ಸೇರಿದ ತನ್ನ ನಿಷ್ಠಾವಂತ ಸೇವಕ ಪನ್ನೀರ್ ಸೆಲ್ವಂರನ್ನು ಸಿಎಂ ಸ್ಥಾನದಲ್ಲಿ ಜಯಾ ಕೂರಿಸಿ ರಿಮೋಟ್ ಕಂಟ್ರೋಲ್ ಸಿಎಂ ಆಗಿ ವರ್ತಿಸಿದ್ದರು.
2014ರಲ್ಲಿ ಜೈಲುಪಾಲಾದ ಸಂದರ್ಭದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯುವ ಅವಕಾಶ ಮತ್ತೆ ಓ ಪನ್ನೀರ್ ಸೆಲ್ವಂ ಅವರಿಗೆ ಸಿಕ್ಕಿತ್ತು. ಈಗ ಮೂರನೆ ಬಾರಿಗೆ ಜಯಾ ವಿಧಿವಶರಾದ ಮೇಲೆ ಸೆಲ್ವಂಗೆ ಅಧಿಕಾರ ಸಿಕ್ಕಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications