ಜಯಾ ಸಾವು ನ್ಯಾಯಾಂಗ ತನಿಖೆಗೆ: ಓ ಪನ್ನೀರ್ ಸೆಲ್ವಂ
ತಮಿಳರ ಪಾಲಿನ 'ಅಮ್ಮ' ಪುರಚ್ಚಿ ತಲೈವಿ ಜೆ ಜಯಲಲಿತಾ ಅವರ ಸಾವಿನ ನಿಗೂಢತೆ ಬಹಿರಂಗವಾಗಲಿ, ಜನತೆಗೆ ಸತ್ಯಾಂಶ ತಿಳಿಯಲಿ ಎಂಬ ದೃಷ್ಟಿಯಿಂದ ನಾನು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದೇನೆ-ಓಪಿಎಸ್
ಚೆನ್ನೈ, ಫೆಬ್ರವರಿ 08: ತಮಿಳರ ಪಾಲಿನ 'ಅಮ್ಮ' ಪುರಚ್ಚಿ ತಲೈವಿ ಜೆ ಜಯಲಲಿತಾ ಅವರ ಸಾವಿನ ನಿಗೂಢತೆ ಬಹಿರಂಗವಾಗಲಿ, ಜನತೆಗೆ ಸತ್ಯಾಂಶ ತಿಳಿಯಲಿ ಎಂಬ ದೃಷ್ಟಿಯಿಂದ ನಾನು ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದೇನೆ ಎಂದು ತಮಿಳನಾಡಿನ ಹಂಗಾಮಿ ಮುಖ್ಯಮಂತ್ರಿ ಓ ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ.[ಸ್ವಾಮಿನಿಷ್ಠೆಯ ಪ್ರತೀಕ ಪನ್ನೀರ್ ಸೆಲ್ವಂ ವ್ಯಕ್ತಿಚಿತ್ರ]
ಚೆನ್ನೈನಲ್ಲಿ ಬುಧವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿದ ಪನ್ನೀರ್ ಅವರು, ' ನನ್ನ ಮೇಲೆ ಒತ್ತಡ ಹೇರಿ ರಾಜೀನಾಮೆ ಪಡೆದುಕೊಂಡರು. ಜನತೆಯ ಬಯಸಿದರೆ ನಾನು ರಾಜೀನಾಮೆ ಹಿಂಪಡೆಯುತ್ತೇನೆ ಎಂದು ಎಐಎಡಿಎಂಕೆ ಅಧಿನಾಯಕಿ, ನಿಯೋಜಿತ ಸಿಎಂ ಶಶಿಕಲಾ ನಟರಾಜನ್ ವಿರುದ್ಧ ತಿರುಗಿ ಬಿದ್ದಿದ್ದಾರೆ.[ರಾತ್ರೋರಾತ್ರಿ ಪನ್ನೀರ್ ಮಾಡಿದ್ದು ಧ್ಯಾನವೋ, ಬಂಡಾಯದ ತೀರ್ಮಾನವೋ?]

ದೀಪಾ ಬಗ್ಗೆ: ದೀಪಾ ಜಯಕುಮಾರ್ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ನಿರ್ಧಾರಕ್ಕೆ ಅವರು ಬೆಂಬಲ ನೀಡುತ್ತಾರೆ ಎಂಬ ಭರವಸೆ ಇದೆ ಎಂದರು.[ಪನ್ನೀರ್ ಗೆ ಇದ್ದಕ್ಕಿದ್ದಂತೆ ಏನಾಯಿತು? ಯಾಕೆ ಹೀಗೆ ಆಡ್ತಿದ್ದಾರೆ?]
* ಪಕ್ಷದ ಶಾಸಕರಿಗೆ ನಾನು ಕರೆ ನೀಡುವುದೇನೆಂದರೆ, ನಿಮ್ಮ ನಿಮ್ಮ ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಆಶಯಕ್ಕೆ ಬದ್ಧರಾಗಿರಿ
* ಬಹುಮತ ಸಾಬೀತು ಪಡಿಸುವುದು ದೊಡ್ಡ ವಿಷಯವಲ್ಲ. ಜನರ ವಿಶ್ವಾಸ ಮುಖ್ಯ
* ಅಪೊಲೋ ಆಸ್ಪತ್ರೆಯಲ್ಲಿ ಜಯಲಲಿತಾ ಅವರು ಚಿಕಿತ್ಸೆ ಪಡೆಯುತ್ತಿದ್ದಾಗ, ನನಗೆ ಅವರನ್ನು ಭೇಟಿ ಮಾಡಲು ಅವಕಾಶ ನೀಡದಿರುವುದು ಇನ್ನೂ ಕಾಡುತ್ತಿದೆ.
ಈ ನಡುವೆ ಕಳೆದ ರಾತ್ರಿ ದಿಢೀರ್ ಆಗಿ ಶಾಸಕಾಂಗ ಸಭೆ ಕರೆದ ನಿಯೋಜಿತ ಸಿಎಂ ಶಶಿಕಲಾ ಅವರು ಓ ಪನ್ನೀರ್ ಸೆಲ್ವಂರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತೆಗೆದು ಹಾಕಲಾಯಿತು. ಅವರ ಸ್ಥಾನಕ್ಕೆ ದಿಂಡಿಗಲ್ ಶ್ರೀನಿವಾಸನ್ ಅವರನ್ನು ನೇಮಿಸಲಾಗಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications