ಸರ್ಕಾರ ರಚನೆ ಕಸರತ್ತು ಆರಂಭಿಸಿದ ಎ ಪಳನಿಸ್ವಾಮಿ
ಓ ಪನ್ನೀರ್ ಸೆಲ್ವಂ ಉಚ್ಚಾಟಿಸಿ ಎಡಪ್ಪಡಿ ಪಳನಿಸ್ವಾಮಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಶಶಿಕಲಾ ನಟರಾಜನ್ ಅವರು ಆಯ್ಕೆ ಮಾಡಿದ್ದಾರೆ. ಸರ್ಕಾರ ರಚನೆ ಕಸರತ್ತು ಆರಂಭಿಸಿದ್ದಾರೆ.
ಚೆನ್ನೈ, ಫೆಬ್ರವರಿ 14: ಅಕ್ರಮ ಆಸ್ತಿ ಪ್ರಕರಣದಲ್ಲಿ ಅಪರಾಧಿ ಎನಿಸಿದ್ದರಿಂದ ಶಶಿಕಲಾ ನಟರಾಜನ್ ಅವರಿಗೆ ತಮಿಳುನಾಡಿನ ಮುಖ್ಯಮಂತ್ರಿಯಾಗುವ ಕನಸು ನುಚ್ಚು ನೂರಾಗಿದೆ. ಆದರೂ ಅವರು ಶಾಸಕರ ಬೆಂಬಲ ಹಾಗೂ ಪಕ್ಷದ ಮೇಲೆ ಹಿಡಿತ ಸಾಧಿಸಿದ್ದಾರೆ. ಓ ಪನ್ನೀರ್ ಸೆಲ್ವಂ ಉಚ್ಚಾಟಿಸಿ ಎಡಪ್ಪಡಿ ಪಳನಿಸ್ವಾಮಿ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ್ದಾರೆ.
ಎಡಪ್ಪಾಡಿ ಪಳನಿಸ್ವಾಮಿ ಅವರಿಗೆ ಶಾಸಕರ ಬೆಂಬಲವಿರುವುದರಿಂದ ಸರ್ಕಾರ ರಚಿಸಲು ಅನುಮತಿ ಕೋರಲು ರಾಜ್ಯಪಾಲರನ್ನು ಭೇಟಿಯಾಗಲು ಕಾಲಾವಕಾಶ ಕೇಳಿದ್ದಾರೆ. [ಶಶಿಕಲಾ ಮುಂದಿರುವ ಅಂತಿಮ 4 ಆಯ್ಕೆ]
ಬಹುಮತ ಸಾಬೀತು ಪಡಿಸಲು ಬೇಕಾದ ಶಾಸಕರ ಬಲ(119) ಇರುವುದರಿಂದ ಸರ್ಕಾರ ರಚನೆಗೆ ಆಹ್ವಾನ ನೀಡುವಂತೆ ರಾಜ್ಯಪಾಲ(ಹಂಗಾಮಿ) ವಿದ್ಯಾಸಾಗರ್ ರಾವ್ ಅವರನ್ನು ಪಳನಿ ಸ್ವಾಮಿ ಕೋರಲಿದ್ದಾರೆ.[ಅಕ್ರಮ ಆಸ್ತಿ ಪ್ರಕರಣ : ತೀರ್ಪಿನ ಸಂಪೂರ್ಣ ಅಪ್ಡೇಟ್]
ಸುಪ್ರೀಂಕೋರ್ಟಿನಲ್ಲಿ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಹೊರಬೀಳುತ್ತಿದ್ದಂತೆ ಕೆಲ ಕಾಲ ದುಃಖಿತರಾಗಿದ್ದ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾ ನಟರಾಜನ್ ಅವರು ನಂತರ ಗೋಲ್ಡನ್ ಬೇ ರೆಸಾರ್ಟ್ ನಲ್ಲಿ ಶಾಸಕಾಂಗ ಸಭೆ ನಡೆಸಿದರು.

ಈ ಸಭೆಯಲ್ಲಿ ಎಐಎಡಿಎಂಕೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಓ ಪನ್ನೀರ್ ಸೆಲ್ವಂತನ್ನು ವಜಾಗೊಳಿಸಲಾಯಿತು. ನಂತರ ಸೇಲಂ ಮೂಲದ ಹಿರಿಯ ನಾಯಕ, ಸಚಿವ ಎಡಪ್ಪಡಿ ಪಳನಿಸ್ವಾಮಿ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕ ಹಾಗೂ ನಿಯೋಜಿತ ಸಿಎಂ ಎಂದು ಘೋಷಿಸಲಾಯಿತು.
ರಮೇಶ್ ಮುತ್ತುಸ್ವಾಮಿ ಅವರ ಅಣ್ಣಾ ಡಿಎಂಕೆ ಪಕ್ಷದ ನಾಯಕ ಪಳನಿಸ್ವಾಮಿ ಅವರು ಹೆದ್ದಾರಿ ಹಾಗೂ ಬಂದರು ಖಾತೆ ಸಚಿವರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ತಮಿಳುನಾಡಿನ ಅಸೆಂಬ್ಲಿ ಬಲಾಬಲ: 234
ಎಐಎಡಿಎಂಕೆ : 135
ಡಿಎಂಕೆ: 89
ಕಾಂಗ್ರೆಸ್ : 8
ಇತರೆ : 1
ಜಯಲಲಿತಾ ನಿಧನದಿಂದ 1 ಸ್ಥಾನ ತೆರವು
(ಒನ್ಇಂಡಿಯಾ ಸುದ್ದಿ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications