ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

2021ರ ಚುನಾವಣೆಯಲ್ಲಿ ಜನರಿಂದ ಪವಾಡ ಸೃಷ್ಟಿ: ರಜನಿಕಾಂತ್

|
Google Oneindia Kannada News

ಚೆನ್ನೈ, ನವೆಂಬರ್ 21: ತಮಿಳುನಾಡಿನ 2021ರ ವಿಧಾನಸಭೆಯಲ್ಲಿ ಜನತೆ ಪವಾಡವನ್ನು ಸೃಷ್ಟಿಸಲಿದ್ದಾರೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದಾರೆ.

ಯೂನಿವರ್ಸಲ್ ಸ್ಟಾರ್ ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮೈಯಂ ಜೊತೆ ಕೈಜೋಡಿಸುವುದರ ಬಗ್ಗೆ ರಜನಿಕಾಂತ್ ಸ್ಪಷ್ಟನೆ ನೀಡಿದರು.

"ಈ ಬಗ್ಗೆ ನಾನೊಬ್ಬನೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ, ಪಕ್ಷದ ಕಾರ್ಯಕರ್ತರ ಅಭಿಪ್ರಾಯವನ್ನು ಆಲಿಸಿ, ಚುನಾವಣೆ ಹೊತ್ತಿಗೆ ತೀರ್ಮಾನ ಕೈಗೊಳ್ಳಲಾಗುವುದು, ಅಲ್ಲಿ ತನಕ ನಾನು ಏನು ಹೇಳಲಾರೆ" ಎಂದು ರಜನಿ ಹೇಳಿದರು.

People of Tamil Nadu will ensure a miracle in 2021 assembly elections: Rajinikanth

ತಮಿಳು ಚಿತ್ರರಂಗದ ಇಬ್ಬರು ದೊಡ್ಡ ಸ್ಟಾರ್ ಗಳು ಈಗ ರಾಜಕೀಯ ರಂಗದಲ್ಲೂ ಒಟ್ಟಿಗೆ ಕೈಜೋಡಿಸಿ ತಮಿಳುನಾಡಿನ ಏಳಿಗೆಗಾಗಿ ಶ್ರಮಿಸಲಿದ್ದಾರೆ ಎಂಬ ಸುದ್ದಿಯಿದೆ.

ಇತ್ತೀಚೆಗಷ್ಟೆ, "ತಮಿಳುನಾಡು ರಾಜಕೀಯದಲ್ಲಿ ನಿರ್ವಾತ ಸೃಷ್ಟಿಯಾಗಿದೆ" ಎಂಬ ಸೂಪರ್ ಸ್ಟಾರ್ ರಜನೀಕಾಂತ್ ಅವರ ಹೇಳಿಕೆಗೆ ಬೆಂಬಲ ನೀಡಿದ್ದ ಬಹುಭಾಷಾ ನಟ ಕಮಲ್ ಹಾಸನ್, "ತಮಿಳುನಾಡು ಸಮರ್ಥ ನಾಯಕರ ಕೊರತೆ ಎದುರಿಸುತ್ತಿದೆ" ಎಂದಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.

"ತಮಿಳುನಾಡು ಅಭಿವೃದ್ಧಿಗೆ ಅಗತ್ಯವಿದೆ ಎಂದಾದರೆ ನಾನು ಮತ್ತು ರಜನಿಕಾಂತ್ ಇಬ್ಬರೂ ಒಟ್ಟಾಗಿ ಪ್ರಯಾಣ ಮಾಡುತ್ತೇವೆ. ಮೊದಲು ಕೆಲಸ ಮುಖ್ಯ, ನಂತರ ಸಿದ್ಧಾಂತದ ಬಗ್ಗೆ ಮಾತು. ನಾವು ಕಳೆದ 43 ವರ್ಷಗಳಿಂದಲೂ ಒಂದಾಗಿಯೇ ಇದ್ದೇವೆ. ಈಗ ಇಬ್ಬರೂ ಒಟ್ಟಿಗೇ ಪ್ರಯಾಣ ಮಾಡುವುದರಲ್ಲಿ ಪವಾಡವೇನಿಲ್ಲ" ಎಂದು ಕಮಲ್ ಹಾಸನ್ ಹೇಳಿದ್ದರು.

ಈಗ ರಜನಿ 2021ರಲ್ಲಿ ಜನರು ಪವಾಡ ಸೃಷ್ಟಿಸಲಿದ್ದಾರೆ ಎಂದಿದ್ದಾರೆ. ಮುಂದೇನಾಗುವುದೋ ಕಾದು ನೋಡಬೇಕಿದೆ.

English summary
Superstar Rajinikanth on Thursday said the people of Tamil Nadu will create a "miracle" in the 2021 Assembly polls in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X