ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಜಾಮೀನು ರಹಿತ ವಾರೆಂಟ್
ಚೆನ್ನೈ, ಜನವರಿ 31: ಇಲ್ಲಿನ ಎಗ್ಮೋರ್ ಮೆಟ್ರೋಪಾಲಿಟನ್ ಕೋರ್ಟ್ II ನಿಂದ ಖ್ಯಾತ ನಿರ್ದೇಶಕ ಶಂಕರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಶಂಕರ್ ಅವರ ಮೇಲೆ ಕೃತಿಚೌರ್ಯ ಆರೋಪ ಹೊರೆಸಲಾಗಿದೆ.
2010 ರಲ್ಲಿ ಶಂಕರ್ ನಿರ್ದೇಶನದಲ್ಲಿ ತೆರೆಕಂಡ ಎಂದಿರನ್ ಅಲಿಯಾಸ್ ರೋಬೋ ಚಿತ್ರ ಸೂಪರ್ ಹಿಟ್ ಆಗಿತ್ತು. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮಾಜಿ ವಿಶ್ವಸುಂದರಿ ಐಶ್ವರ್ಯ ರೈ ನಟನೆಯ ಈ ಚಿತ್ರಕ್ಕೆ ಸಂಬಂಧಿಸಿದಂತೆ ಕಥೆ ಕದ್ದ ಆರೋಪದ ಕೇಸ್ 11ನೇ ವರ್ಷಕ್ಕೆ ಕಾಲಿಟ್ಟಿದೆ.
ಏನಿದು ಪ್ರಕರಣ?:
ಆರೂರು ತಮಿಳ್ನಾದನ್ ಎಂಬ ವ್ಯಕ್ತಿ ನಿರ್ದೇಶಕ ಶಂಕರ್ ಮೇಲೆ ಕತೆ ಕದ್ದ ಆರೋಪ ಮಾಡಿದ್ದಾರೆ. ಜಿಗುಬಾ ಎಂಬ ಹೆಸರಿನಲ್ಲಿ ತಾವು ಬರೆದ ಕತೆಯನ್ನು ಶಂಕರ್ ಹಾಗೆ ಭಟ್ಟಿ ಇಳಿಸಿದ್ದಾರೆ. ಈ ಬಗ್ಗೆ ದೂರಿದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದರು. 1996 ಹಾಗೂ 2007 ರಲ್ಲಿ ಬೇರೆ ಹೆಸರಿನಲ್ಲಿ ಜಿಗುಬಾ ಕಥೆ ತಮಿಳು ಮ್ಯಾಗಜಿನ್ಗಳಲ್ಲಿ ಪ್ರಕಟವಾಗಿದೆ, 1957ರ ಕೃತಿಹಕ್ಕು ಕಾಯ್ದೆ ಅನ್ವಯ ಕ್ರಮ ಜರುಗಿಸುವಂತೆ ಎಂದು ಅರೂರು ಪರ ವಕೀಲರು ಕೋರ್ಟಿಗೆ ಸಾಕ್ಷ್ಯ ಒದಗಿಸಿದ್ದರು.

ಈ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಶಂಕರ್ ಅವರಿಗೆ ಅನೇಕ ಬಾರಿ ಸಮನ್ಸ್ ಕಳಿಸಿದ್ದರೂ ಹಾಜರಾಗದ ಕಾರಣ, ಮೆಟ್ರೋಪಾಲಿಟನ್ ನ್ಯಾಯಾಲಯವು ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದ್ದು, ವಿಚಾರಣೆಯನ್ನು ಫೆಬ್ರವರಿ 19ಕ್ಕೆ ಮುಂದೂಡಲಾಗಿದೆ. ತಮಿಳ್ನಾದನ್ ಆರೋಪನ್ನು ಅಲ್ಲಗಳೆದಿದ್ದ ಶಂಕರ್ ಅವರು ತಮ್ಮ ವಿರುದ್ಧದ ಪ್ರಕರಣವನ್ನು ವಜಾಗೊಳಿಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕೃತಗೊಂಡಿತ್ತು.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications