ರಾಮೇಶ್ವರಂನಲ್ಲಿ ಇಂದು ಅಬ್ದುಲ್ ಕಲಾಂ ಸ್ಮಾರಕ ಲೋಕಾರ್ಪಣೆ
ಚೆನ್ನೈ, ಜುಲೈ 27 : ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಅವರ 2ನೇ ಪುಣ್ಯ ಸ್ಮರಣೆ ದಿನದ ಅಂಗವಾಗಿ ಇಂದು (ಗುರುವಾರ) ತಮಿಳುನಾಡಿನ ರಾಮೇಶ್ವರದ ಪೈಕರಂಬುವಿನಲ್ಲಿ ನಿರ್ಮಿಸಿರುವ ಸ್ಮಾರಕ ಲೋಕಾರ್ಪಣೆಗೊಳ್ಳಲಿದೆ.
15 ಕೋಟಿ ವೆಚ್ಚದಲ್ಲಿ 4 ಟನ್ ಭಾರ ಮತ್ತು 45 ಅಡಿ ಎತ್ತರದ ಅಗ್ನಿ-2 ಕ್ಷಿಪಣಿಯ ಮಾದರಿ ಮತ್ತು ಕಲಾಂ ಅವರ ಏಳು ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ನಿರ್ಮಿಸಿದ್ದು, ಪ್ರಧಾನಿ ನರೇಂದ್ರ ಮೋದಿ ಸ್ಮಾರಕವನ್ನು ಉದ್ಘಾಟಿಸುವರು.

ಇದೇ ವೇಳೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅಂತಾರಾಷ್ಟ್ರೀಯ ಪ್ರತಿಷ್ಠಾನ ಸಿದ್ಧಪಡಿಸಿರುವ ಡಿಜಿಟಲ್ ಸಂಚಾರಿ ವಸ್ತುಸಂಗ್ರಹಾಲಯಕ್ಕೆ ಮೋದಿ ಚಾಲನೆ ನೀಡಲಿದ್ದಾರೆ.
ಕಲಾಂ ಅವರ ಸಾಧನೆ, ಅಗ್ನಿ ಕ್ಷಿಪಣಿ, ಪೋಖ್ರಾನ್-2 ಪರಮಾಣು ಪರೀಕ್ಷೆ ಕುರಿತ ಅಪರೂಪದ ಛಾಯಾಚಿತ್ರಗಳು ಸಂಚಾರಿ ವಸ್ತುಸಂಗ್ರಹಾಲಯ ವಾಹನದಲ್ಲಿ ಪ್ರದರ್ಶನಗೊಳ್ಳಲಿವೆ.
'ದೇಶದಾದ್ಯಂತ ಸಂಚಾರ ನಡೆಸಿದ ಬಳಿಕ ವಾಹನವು ಕಲಾಂ ಜನ್ಮದಿನವಾದ ಅಕ್ಟೋಬರ್ 15ರಂದು ದೆಹಲಿಯ ರಾಷ್ಟ್ರಪತಿ ಭವನಕ್ಕೆ ತಲುಪಲಿದೆ' ಎಂದು ಪ್ರತಿಷ್ಠಾನ ಹೇಳಿದೆ.
ಭಾರತರತ್ನ, ವಿಜ್ಞಾನಿ, ಮಾಜಿ ರಾಷ್ಟ್ರಪತಿ ದಿವಂಗತ ಡಾ. ಅಬ್ದುಲ್ ಕಲಾಂ ಅವರ ಪ್ರಥಮ ಪುಣ್ಯ ಸ್ಮರಣೆ ದಿನದಂದು ಇದೇ ರಾಮೇಶ್ವರಂನಲ್ಲಿ ಆಳೆತ್ತರ ಪ್ರತಿಮೆಯನ್ನು ಅನಾವರಣಗೊಳಿಸಲಾಗಿತ್ತು.
-
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ












Click it and Unblock the Notifications