ದೇಶ ತಳಮಟ್ಟದ ನಾಯಕನನ್ನು ಕಳೆದುಕೊಂಡಿದೆ : ಮೋದಿ ಸಂತಾಪ
Recommended Video
ಚೆನ್ನೈ, ಆಗಸ್ಟ್ 07 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಡಿಸಿದರು. ಕರುಣಾನಿಧಿ ಅವರು ಇಂದು ಸಂಜೆ ವಿಧಿವಶರಾದರು.
ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಎಂ.ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವಿಟ್ ಮಾಡಿದ್ದಾರೆ. ಕರುಣಾನಿಧಿ ಅವರು ದೇಶದ ಹಿರಿಯ ನಾಯಕರಾಗಿದ್ದರು ಎಂದು ಮೋದಿ ಟ್ವಿಟ್ನಲ್ಲಿ ತಿಳಿಸಿದ್ದಾರೆ.
ಎಂ ಕರುಣಾನಿಧಿ ಐದು ದಶಕಗಳ ರಾಜಕೀಯ ಬದುಕಿನ ಹಿನ್ನೋಟ
ಕರುಣಾನಿಧಿ ಅವರು ತಮ್ಮ ಜೀವನವನ್ನು ಬಡವರ ಅಭಿವೃದ್ಧಿಗಾಗಿ ಜೀವನನ್ನು ಮೀಸಲಾಗಿಟ್ಟಿದ್ದರು. ತಳ ಮಟ್ಟದ ನಾಯಕರನ್ನು ನಾವು ಇಂದು ಕಳೆದುಕೊಂಡಿದ್ದೇವೆ ಎಂದು ಮೋದಿ ಟ್ವಿಟರ್ನಲ್ಲಿ ಹೇಳಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ 'ಕಲೈನಾರ್' ಕರುಣಾನಿಧಿ ಇನ್ನಿಲ್ಲ
Kalaignar Karunanidhi stood for regional aspirations as well as national progress. He was steadfastly committed to the welfare of Tamils and ensured that Tamil Nadu’s voice was effectively heard. pic.twitter.com/l7ypa1HJNC
— Narendra Modi (@narendramodi) August 7, 2018
ಕರುಣಾನಿಧಿ ಅವರ ಜೊತೆ ಹಲವು ಬಾರಿ ಮಾತನಾಡುವ ಅವಕಾಶ ಸಿಕ್ಕಿತ್ತು. ಸಾಮಾಜಿಕ ನ್ಯಾಯದ ವಿಚಾರದಲ್ಲಿ ಅವರಿಗೆ ಅಪಾರವಾದ ಕಾಳಜಿ ಇತ್ತು. ತುರ್ತು ಪರಿಸ್ಥಿತಿಯನ್ನು ಅವರು ವಿರೋಧಿಸಿದ್ದನ್ನು ಇಂದಿಗೂ ನೆನಪಿಸಿಕೊಳ್ಳಬೇಕು ಎಂದು ನರೇಂದ್ರ ಮೋದಿ ನೆನಪು ಮಾಡಿಕೊಂಡರು.
My thoughts are with the family and the countless supporters of Karunanidhi Ji in this hour of grief. India and particularly Tamil Nadu will miss him immensely. May his soul rest in peace. pic.twitter.com/7ZZQi9VEkm
— Narendra Modi (@narendramodi) August 7, 2018
ಎಂ.ಕರುಣಾನಿಧಿ ಅವರ ಕುಟುಂಬ ಮತ್ತು ಡಿಎಂಕೆಯ ಕಾರ್ಯಕರ್ತರ ಜೊತೆ ನಾವಿದ್ದೇವೆ. ಕರುಣಾನಿಧಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೋದಿ ಹೇಳಿದ್ದಾರೆ.