ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶ ತಳಮಟ್ಟದ ನಾಯಕನನ್ನು ಕಳೆದುಕೊಂಡಿದೆ : ಮೋದಿ ಸಂತಾಪ

By Gururaj
|
Google Oneindia Kannada News

Recommended Video

ಕರುಣಾನಿಧಿ ಸಾವಿಗೆ ಸಂತಾಪ ಸೂಚಿಸಿದ ಪ್ರಧಾನಿ ನರೇಂದ್ರ ಮೋದಿ | Oneindia Kannada

ಚೆನ್ನೈ, ಆಗಸ್ಟ್ 07 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಡಿಸಿದರು. ಕರುಣಾನಿಧಿ ಅವರು ಇಂದು ಸಂಜೆ ವಿಧಿವಶರಾದರು.

ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಎಂ.ಕರುಣಾನಿಧಿ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿ ಟ್ವಿಟ್ ಮಾಡಿದ್ದಾರೆ. ಕರುಣಾನಿಧಿ ಅವರು ದೇಶದ ಹಿರಿಯ ನಾಯಕರಾಗಿದ್ದರು ಎಂದು ಮೋದಿ ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

ಎಂ ಕರುಣಾನಿಧಿ ಐದು ದಶಕಗಳ ರಾಜಕೀಯ ಬದುಕಿನ ಹಿನ್ನೋಟಎಂ ಕರುಣಾನಿಧಿ ಐದು ದಶಕಗಳ ರಾಜಕೀಯ ಬದುಕಿನ ಹಿನ್ನೋಟ

PM Narendra Modi condoles death of Karunanidhi

ಕರುಣಾನಿಧಿ ಅವರು ತಮ್ಮ ಜೀವನವನ್ನು ಬಡವರ ಅಭಿವೃದ್ಧಿಗಾಗಿ ಜೀವನನ್ನು ಮೀಸಲಾಗಿಟ್ಟಿದ್ದರು. ತಳ ಮಟ್ಟದ ನಾಯಕರನ್ನು ನಾವು ಇಂದು ಕಳೆದುಕೊಂಡಿದ್ದೇವೆ ಎಂದು ಮೋದಿ ಟ್ವಿಟರ್‌ನಲ್ಲಿ ಹೇಳಿದ್ದಾರೆ.

ತಮಿಳುನಾಡು ಮಾಜಿ ಮುಖ್ಯಮಂತ್ರಿ 'ಕಲೈನಾರ್' ಕರುಣಾನಿಧಿ ಇನ್ನಿಲ್ಲತಮಿಳುನಾಡು ಮಾಜಿ ಮುಖ್ಯಮಂತ್ರಿ 'ಕಲೈನಾರ್' ಕರುಣಾನಿಧಿ ಇನ್ನಿಲ್ಲ

ಕರುಣಾನಿಧಿ ಅವರ ಜೊತೆ ಹಲವು ಬಾರಿ ಮಾತನಾಡುವ ಅವಕಾಶ ಸಿಕ್ಕಿತ್ತು. ಸಾಮಾಜಿಕ ನ್ಯಾಯದ ವಿಚಾರದಲ್ಲಿ ಅವರಿಗೆ ಅಪಾರವಾದ ಕಾಳಜಿ ಇತ್ತು. ತುರ್ತು ಪರಿಸ್ಥಿತಿಯನ್ನು ಅವರು ವಿರೋಧಿಸಿದ್ದನ್ನು ಇಂದಿಗೂ ನೆನಪಿಸಿಕೊಳ್ಳಬೇಕು ಎಂದು ನರೇಂದ್ರ ಮೋದಿ ನೆನಪು ಮಾಡಿಕೊಂಡರು.

ಎಂ.ಕರುಣಾನಿಧಿ ಅವರ ಕುಟುಂಬ ಮತ್ತು ಡಿಎಂಕೆಯ ಕಾರ್ಯಕರ್ತರ ಜೊತೆ ನಾವಿದ್ದೇವೆ. ಕರುಣಾನಿಧಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೋದಿ ಹೇಳಿದ್ದಾರೆ.

English summary
Prime Minister of India Narendra Modi offered his condolences for the death of DMK chief and Former Chief Minister M.Karunanidhi. Karunanidhi passed away at the age of 94.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X