ಕುಡಿತ ಬಿಡು ಎಂದ ಇಬ್ಬರು ಹೆಣ್ಣು ಮಕ್ಕಳನ್ನು ಹೊಡೆದು ಕೊಂದ ಕುಡುಕ ತಂದೆ
ಚೆನ್ನೈ, ಮೇ 23: ಕುಡಿತಕ್ಕೆ ದಾಸನಾಗಿದ್ದ ತಂದೆಯೊಬ್ಬ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು ಹೊಡೆದು ಕೊಂದಿರುವ ದಾರುಣ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ರಾಜು ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಹೇಳಿಕೆಯ ಪ್ರಕಾರ ಗೋವಿಂದ ರಾಜು ನಿರುದ್ಯೋಗಿಯಾಗಿದ್ದ, ಈತನ ಪತ್ನಿ ಕಸ ವಿಂಗಡಣೆ ಘಟಕದಲ್ಲಿ ಉದ್ಯೋಗಿಯಾಗಿದ್ದಾರೆ. ಈ ದಂಪತಿಗೆ ನಾಲ್ಕು ಹೆಣ್ಣು ಮಕ್ಕಳಿದ್ದವು. ದಿನ ನಿತ್ಯ ಕುಡಿದು ಬರುತ್ತಿದ್ದ ಈತ ಹೆಂಡತಿ ಮಕ್ಕಳೊಂದಿಗೆ ಜಗಳ ಮಾಡುತ್ತಿದ್ದ, ಈ ಜಗಳದಲ್ಲಿ ಅವರ ಮೂರು ಮಕ್ಕಳು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ.

ವಿವಾಹದ ಆರಂಭದಲ್ಲಿ ಸುಖ ಸಂಸಾರ
ತಮಿಳುನಾಡಿನ ಕಾಂಚೀಪುರಂ ಬಳಿಯ ಓರಗಡಂ ಪ್ರದೇಶದಲ್ಲಿ ಗೋವಿಂದರಾಜ್ ಮತ್ತು ಕುಟುಂಬ ವಾಸವಾಗಿತ್ತು. ಕೆಲವು ವರ್ಷಗಳ ಹಿಂದೆ ಗೋವಿಂದರಾಜು ಸೆಲ್ವಿ ಎಂಬ ಮಹಿಳೆಯನ್ನು ವಿವಾಹವಾಗಿದ್ದ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಂತರ ಗೋವಿಂದರಾಜು ಮತ್ತು ಸೆಲ್ವಿ ಕೆಲ ವರ್ಷಗಳ ಕಾಲ ಸಂತೋಷದಿಂದ ಸಂಸಾರ ನಡೆಸಿದ್ದರು.

ಕುಡಿತಕ್ಕೆ ದಾಸನಾದ ಗೋವಿಂದರಾಜು
ಗೋವಿಂದರಾಜು ಮತ್ತು ಸೆಲ್ವಿ ದಂಪತಿಗೆ ನಂದಿನಿ(16), ನದಿಯಾ(14), ದೀನಾ(11) ಮತ್ತು ದೀಪಾ(9) ಎಂಬ ನಾಲ್ಕು ಹೆಣ್ಣುಮಕ್ಕಳಿದ್ದರು. ಗೋವಿಂದರಾಜು ಕುಡಿತಕ್ಕೆ ದಾಸಗಾಗಿದ್ದರಿಂದ ಪತ್ನಿ ಉತುಂಕಾಡು ಎಂಬಲ್ಲಿ ಕಸ ವಿಂಗಡನೆ ಘಟಕದಲ್ಲಿ ಕೆಲಸ ಮಾಡುತ್ತಾ ಸಂಸಾರ ನೌಕೆ ಸಾಗಿಸುತ್ತಿದ್ದರು. ಪ್ರತಿದಿನ ಕುಡಿದು ಬಂದು ತನ್ನ ಹೆಂಡತಿ ಮಕ್ಕಳೊಂದಿಗೆ ಕುಡಿದು ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ.

ತಂದೆಯ ಹೊಡೆತ ತಾಳಲಾರದೆ ಆತ್ಮಹತ್ಯೆ
ದಿನನಿತ್ಯ ಕುಡಿಯುತ್ತಿದ್ದ ಗೋವಿಂದರಾಜು ಹೆಂಡತಿ ಮಕ್ಕಳಿಗೆ ದಿನನಿತ್ಯ ಹೊಡೆಯುತ್ತಿದ್ದ. ಮೇ 4ರಂದು ನಡೆದ ಜಗಳದಲ್ಲಿ 3ನೇ ಮಗಳು 14 ವರ್ಷದ ನದಿಯಾ ತನ್ನ ತಂದೆಯ ಚಿತ್ರಹಿಂಸೆ ತಾಳಲಾರದೆ ತಾನಾಗಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಳು. ಆ ಘಟನೆ ನಂತರ ಗೋವಿಂದರಾಜು ಕುಡಿಯುವುದನ್ನು ಹೆಚ್ಚು ಮಾಡಿದ್ದ. ಕುಡಿದ ಮತ್ತಿನಲ್ಲಿ ಮಕ್ಕಳು ಮತ್ತು ಪತ್ನಿಗೆ ನರಕ ತೋರಿಸುತ್ತಿದ್ದ ಎಂದು ತಿಳಿದಬಂದಿದೆ.

ಕುಡಿದ ಮತ್ತಿನಲ್ಲಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ
ಶುಕ್ರವಾರದಂದು ಗೋವಿಂದ ರಾಜು ಮನೆಯಲ್ಲಿ ಕುಡಿತ ಆರಂಭಿಸಿದ್ದ. ಈ ವೇಳೆ ಶಾಲೆಯಿಂದ ಬಂದ ದೀಪ ಮತ್ತು ನಂದಿನಿ ಗೋವಿಂದರಾಜು ಮನೆಯಲ್ಲಿ ಕುಡಿಯುತ್ತಿದ್ದದ್ದನ್ನು ನೋಡಿ ಹತಾಶರಾಗಿದ್ದಾರೆ. ನಂತರ ತಂದೆ ಕುಡಿದು ಆರೋಗ್ಯ ಹಾಳು ಮಾಡಿಕೊಳ್ಳಬೇಡ ಎಂದು ಹೇಳಿದ್ದಾರೆ. ಇದರಿಂದ ಕೋಪಗೊಂಡ ಗೋವಿಂದ ರಾಜು ದೊಣ್ಣೆಯಿಂದ ರಕ್ತಬರುವವರೆಗೆ ತಲೆ ಮತ್ತು ಎದೆ ಭಾಗಕ್ಕೆ ಹೊಡೆದಿದ್ದಾನೆ. ಗಂಭೀರ ಗಾಯಗೊಂಡ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಂತರ ಬಾಗಿಲು ಹಾಕಿ ತನ್ನ ಉಳಿದಿದ್ದ ಮದ್ಯವನ್ನು ಕುಡಿಯಲು ಆರಂಭಿಸಿದ್ದಾನೆ. ನಂದಿನಿ 11 ಮತ್ತು ದೀಪ 4 ತರಗತಿ ಓದುತ್ತಿದ್ದರೆಂದು ತಿಳಿದುಬಂದಿದೆ.
3ನೇ ಮಗಳಾದ ಧೀನಾ ಶಾಲೆ ಮುಗಿಸಿ 4 ಗಂಟೆಗೆ ಮನೆಗೆ ಬಂದಾಗ ಒಳಗಿನಿಂದ ಬಾಗಿಲು ಹಾಕಿರುವುದು ತಿಳಿದುಬಂದಿದೆ. ಸತತವಾಗಿ ಬಾಗಿಲು ಬಡಿದರೂ ಯಾರೂ ಪ್ರತಿಕ್ರಿಯಿಸದಿದ್ದಾಗ, ಆಕೆ ತನ್ನ ಅಜ್ಜಿ ಮತ್ತು ಪಕ್ಕದ ಮನೆಯವರನ್ನು ಕರೆದಿದ್ದಾಳೆ. ಬಾಗಿಲನ್ನು ಹೊಡೆದು ಒಳಗೆ ಪ್ರವೇಶಿಸಿದಾಗ ಇಬ್ಬರು ಮಕ್ಕಳು ಸತ್ತು ಬಿದ್ದಿರುವುದು ಕಂಡು ಬಂದಿದೆ. ತಕ್ಷಣ ಗೋವಿಂದರಾಜು ಮನೆಯಿಂದ ಓಡಿಹೋಗಿದ್ದಾನೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಕ್ಕಳ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗದುಕೊಂಡು ಹೋಗಿದ್ದಾರೆ ಮತ್ತು ಗೋವಿಂದರಾಜುನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications