ಜನರ ಬಗ್ಗೆ ಚಿಂತಿಸದ ಪ್ರಧಾನಿ ಒಬ್ಬ ಸ್ಯಾಡಿಸ್ಟ್: ಎಂಕೆ ಸ್ಟಾಲಿನ್
Recommended Video

ವಿಲ್ಲುಪುರಂ (ತಮಿಳುನಾಡು) ಡಿಸೆಂಬರ್ 24: ತಮಿಳುನಾಡಿನ ಜನರನ್ನು ಕಡೆಗಣಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ಸ್ಯಾಡಿಸ್ಟ್ ಎಂದು ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಹೇಳಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಪ್ರಧಾನಿಯಾದರೆ ಸ್ಥಿರ ಸರ್ಕಾರವನ್ನು ನೀಡಬಲ್ಲರು ಎಂದು ಸ್ಟಾಲಿನ್ ಪುನರುಚ್ಚರಿಸಿದ್ದಾರೆ.
ಪ್ರಧಾನಿ ಅಭ್ಯರ್ಥಿ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ಹೆಸರನ್ನು ಸೂಚಿಸುತ್ತೇನೆ ಎಂದು ಕಳೆದ ವಾರ ಹೇಳಿಕೆ ನೀಡಿದ್ದ ಎಂಕೆ ಸ್ಟಾಲಿನ್, ಮಹಾಮೈತ್ರಿಕೂಟದ ಇತರೆ ನಾಯಕರ ಅಸಮಾಧಾನಕ್ಕೆ ಕಾರಣರಾಗಿದ್ದರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೇರಿದಂತೆ ಮಹಾಮೈತ್ರಿಕೂಟದ ಭಾಗವಾಗುತ್ತಿರುವ ಪ್ರಮುಖ ವಿರೋಧ ಪಕ್ಷಗಳ ವಿವಿಧ ನಾಯಕರು ಪ್ರಧಾನಿ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.
ದೆಹಲಿಯಲ್ಲಿ ಮುಂದಿನ ವರ್ಷದಿಂದ ನೂತನ ಪ್ರಧಾನಿಯನ್ನು ನೋಡಲು ಬಯಸುತ್ತೇನೆ. ಹೀಗಾಗಿ ತಮಿಳುನಾಡಿನಿಂದ ರಾಹುಲ್ ಗಾಂಧಿ ಅವರ ಹೆಸರನ್ನು ಸೂಚಿಸುತ್ತೇನೆ ಎಂದು ಸ್ಟಾಲಿನ್ ಹೇಳಿಕೆ ನೀಡಿದ್ದರು.
ಇದು ಉಳಿದ ಪ್ರಧಾನಿ ಆಕಾಂಕ್ಷಿಗಳ ಕೋಪಕ್ಕೆ ಕಾರಣವಾದರೂ, ಯಾವ ನಾಯಕರೂ ಅದರ ವಿರುದ್ಧ ಬಹಿರಂಗವಾಗಿ ಹೇಳಿಕೊಂಡಿರಲಿಲ್ಲ. ಆದರೆ, ಪರೋಕ್ಷವಾಗಿ ರಾಹುಲ್ ಗಾಂಧಿ ಅವರ ಹೆಸರನ್ನು ತಾವು ಸೂಚಿಸುವುದಿಲ್ಲ ಎನ್ನುವ ಮೂಲಕ ಪ್ರಧಾನಿ ಹುದ್ದೆಯ ಮೇಲೆ ತಾವು ಕಣ್ಣಿಟ್ಟಿರುವುದನ್ನು ಸಾಬೀತುಪಡಿಸಿದ್ದರು.

ಸ್ಥಿರ ಸರ್ಕಾರ ನೀಡಬಲ್ಲರು
ರಾಹುಲ್ ಗಾಂಧಿ ಸ್ಥಿರ ಸರ್ಕಾರ ನೀಡಬಲ್ಲರು ಎಂದು ನಾನು ಹೇಳಿಕೆ ನೀಡಿದ್ದೇನೆ. ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದ್ದಕ್ಕೆ ಕೆಲವರು ಪ್ರಶ್ನಿಸಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಸ್ಟಾಲಿನ್ ಅವರು ಭಾನುವಾರ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ. ಈ ಮೂಲಕ ಒಂದು ವಾರದ ಹಿಂದೆ ತಾವು ನೀಡಿದ್ದ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
|
ಪ್ರಧಾನಿ ಒಬ್ಬ ಸ್ಯಾಡಿಸ್ಟ್
ಪ್ರಧಾನಿ ನರೇಂದ್ರ ಮೋದಿ ಅವರೊಬ್ಬ ಸ್ಯಾಡಿಸ್ಟ್ ಎಂದು ಹೇಳಿಕೆ ನೀಡಿದ್ದ ಸ್ಟಾಲಿನ್, ತಮ್ಮ ಹೇಳಿಕೆಯನ್ನು ಪುನರುಚ್ಚರಿಸಿದ್ದಾರೆ.
ತಮಿಳುನಾಡಿನ ಜನರ ಬಗ್ಗೆ ಸ್ವಲ್ಪವೂ ಚಿಂತಿಸದೆ ಇದ್ದರೆ ಪ್ರಧಾನಿಯನ್ನು ಸ್ಯಾಡಿಸ್ಟ್ ಎಂದೇ ಕರೆಯುತ್ತೇನೆ. ಮತ್ತು ಇದು ವೈಯಕ್ತಿಕ ಹೇಳಿಕೆಯಲ್ಲ. ಪ್ರಧಾನಿಯಾಗಿ ಅವರು ಒಬ್ಬ ಸ್ಯಾಡಿಸ್ಟ್. ಇದನ್ನು ಮತ್ತೆ ಮತ್ತೆ ಹೇಳುತ್ತಿದ್ದೇನೆ. ಹೀಗಾಗಿ ನಮಗೆ ಬದಲಾವಣೆ ಬೇಕು.

ಹೊಸ ಭಾರತದ ನಿರ್ಮಾಣ
2018ರಲ್ಲಿ ತಲೈವರ್ ಕರುಣಾನಿಧಿ ಅವರ ಪ್ರತಿಮೆಯ ಸಂದರ್ಭದಲ್ಲಿ ನಾವು ದೆಹಲಿಯಲ್ಲಿ ಹೊಸ ಪ್ರಧಾನಿಯನ್ನು ಸ್ಥಾಪಿಸುತ್ತೇವೆ. ನಾವು ಹೊಸ ಭಾರತವನ್ನು ನಿರ್ಮಿಸುತ್ತೇನೆ. ತಲೈವರ್ ಕಲೈನಾರ್ ಅವರ ಮಗನಾಗಿ ತಮಿಳುನಾಡಿನಿಂದ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ನಾನು ಪ್ರಸ್ತಾಪಿಸುತ್ತೇನೆ ಎಂದು ಸ್ಟಾಲಿನ್ ಹೇಳಿದ್ದರು.

ಒಂದಾದರೂ ಸಂದೇಶ ನೀಡಿದ್ದಾರೆಯೇ?
ಗಜ ಚಂಡಮಾರುತದಿಂದ ಭಾರಿ ನಷ್ಟವಾಗಿದೆ. 65 ಮಂದಿ ಮೃತಪಟ್ಟಿದ್ದಾರೆ. ಈ ವಿಕೋಪದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಂದಾದರೂ ಸಂತಾಪ ಸಂದೇಶ ಬಂದಿದೆಯೇ? ಸಂಕಷ್ಟಕ್ಕೆ ಒಳಗಾದ ಜನರನ್ನು ಭೇಟಿ ಮಾಡಲು ಅವರಿಗೆ ಸಮಯವಿಲ್ಲ. ಅವರಿಗೆ ವಿದೇಶ ಪ್ರವಾಸ ಮಾಡುವುದಕ್ಕೇ ಸಮಯ ಸಿಗುತ್ತಿಲ್ಲ ಎಂದು ಸ್ಟಾಲಿನ್ ಲೇವಡಿ ಮಾಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications