ಮೋದಿ, ಅಮಿತ್ ಶಾ ಕಾಲಿಗೆರಗುವ ಮುಖ್ಯಮಂತ್ರಿ ತಮಿಳುನಾಡಿಗೆ ಬೇಕಿಲ್ಲ: ರಾಹುಲ್ ಗಾಂಧಿ
ಚೆನ್ನೈ, ಮಾರ್ಚ್ 28: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಕಾಲಿಗೆರಗುವ ಮುಖ್ಯಮಂತ್ರಿ ತಮಿಳುನಾಡಿಗೆ ಬೇಕಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಭ್ರಷ್ಟಾಚಾರ ಪ್ರಕರಣಗಳಿಂದ ಹೆದರಿರುವ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಕಾಲಿಗೆ ಬೀಳುತ್ತಿದ್ದಾರೆ. ತಮಿಳುನಾಡಿನ ಜನತೆಗೆ ತಲೆಬಾಗುವ ಬದಲು ಬಿಜೆಪಿಯ ನಾಯಕರಿಗೆ ತಲೆ ಬಾಗುತ್ತಿದ್ದಾರೆ.
ತಮಿಳುನಾಡಿಗೆ ಇಂತಹ ಮುಖ್ಯಮಂತ್ರಿ ಅಗತ್ಯವಿಲ್ಲ ಎಂದು ಚೆನ್ನೈನಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ತಮಿಳುನಾಡಿನ ಜನಪ್ರತಿಯಾಗಿ ಮುಖ್ಯಮಂತ್ರಿಯಾಗಿರುವ ಪಳನಿಸ್ವಾಮಿ ಅಮಿ್ತ ಶಾ ಕಾಲಿಗೆ ಬೀಳುತ್ತಿರುವ ಚಿತ್ರವನ್ನು ನಾನು ನೋಡಿದೆ, ಇದು ಬಿಜೆಪಿಯ ಸಂಸ್ಕೃತಿಯಾಗಿದೆ.

ಬಿಜೆಪಿಯಲ್ಲಿ ಕಾಲಿಗೆ ಎರಗುವುದು ಅನಿವಾರ್ಯ, ಇಂಥಹ ವ್ಯವಸ್ಥೆಯ ವಿರುದ್ಧ ಹೋರಾಡಲೆಂದೇ ನಾನು ತಮಿಳುನಾಡಿಗೆ ಬಂದಿದ್ದೇನೆ. ತಮಿಳುನಾಡು ಮುಖ್ಯಮಂತ್ರಿ ಕಾರ್ಯವನ್ನು ಒಪ್ಪಲಾಗುವುದಿಲ್ಲ. ಇದು ನನಗೆ ಕೋಪ ತರಿಸಿದೆ ಎಂದು ಹೇಳಿದ್ದಾರೆ.
ತಮಿಳರೊಂದಿಗೆ ಸಮಾನತೆಯ ಸಂಬಂಧವನ್ನು ನಾನು ಬಯಸುತ್ತೇನೆ, ನಾನು ತಮಿಳುನಾಡು ಭಾರತವೆಂದರೆ ಭಾರತವೂ ತಮಿಳುನಾಡು ಎಂದು ಒಪ್ಪಬೇಕಾಗುತ್ತದೆ. ನನಗೆ ಭಾರತದಲ್ಲಿ ತಮಿಳುನಾಡು ತಲೆಬಾಗುವುದು ಒಪ್ಪಲಾಗದು ಇದು ಬೇರೆಯ ಸಂಕೇತವನ್ನು ನೀಡುತ್ತದೆ ಎಂದು ಹೇಳಿದರು.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರದ ಮೇಲೆ 17/18 ಪೈಸೆ ಕಡಿಮೆ ಮಾಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಚುನಾವಣೆ ಕಾರಣದಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಪ್ರತೀ ಲೀಟರ್ ದರದಲ್ಲಿ 17/18 ಪೈಸೆ ಕಡಿಮೆ ಮಾಡಿದೆ. ಈ ಪ್ರಮಾಣದ ಉಳಿತಾಯದೊಂದಿಗೆ ನೀವು ಏನು ಮಾಡುತ್ತೀರಿ? ಎಂದು ವ್ಯಂಗ್ಯವಾಡಿದ್ದಾರೆ.
ಈ ಹಿಂದೆ ಮೋದಿ ಸರ್ಕಾರದ ವಿರುದ್ಧ ಕಿಡಿಕಾರಿದ್ದ ರಾಹುಲ್ ಗಾಂಧಿ, ಕೇಂದ್ರದ ಎನ್ಡಿಎ ನೇತೃತ್ವದ ಬಿಜೆಪಿ ಸರ್ಕಾರದ ಆರ್ಥಿಕ ನೀತಿಯಿಂದಾಗಿ ದೇಶದಲ್ಲಿ ನಿರುದ್ಯೋಗ, ಬಡತನ ಹೆಚ್ಚಾಗಿದೆ ಎಂದು ಹೇಳಿದ್ದರು.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications