ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರುಣಾನಿಧಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

By Manjunatha
|
Google Oneindia Kannada News

ಚೆನ್ನೈ, ಜುಲೈ 31: ಚೆನ್ನೈನ ಕಾವೇರಿ ಆಸ್ಪತ್ರೆಗೆ ಭೇಟಿ ನೀಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಿದರು.

ಮೂತ್ರನಾಳ ಸಮಸ್ಯೆ ಮತ್ತು ಇತರೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ಡಿಎಂಕೆ ನಾಯಕ ಕರುಣಾನಿಧಿ ಅವರು ಶನಿವಾರ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜೀವನ್ಮರಣ ಹೋರಾಟ ನಡೆಸುತ್ತಿರುವ ಕರುಣಾನಿಧಿ ಆಸೆ ಕೊನೆಗೂ ಕೈಗೂಡಿತು!ಜೀವನ್ಮರಣ ಹೋರಾಟ ನಡೆಸುತ್ತಿರುವ ಕರುಣಾನಿಧಿ ಆಸೆ ಕೊನೆಗೂ ಕೈಗೂಡಿತು!

ಇಂದು ಆಸ್ಪತ್ರೆಗೆ ಭೇಟಿ ನೀಡಿದ ರಾಹುಲ್ ಗಾಂಧಿ ಕರುಣಾನಿಧಿ ಅವರ ಪುತ್ರ ಸ್ಟಾಲಿನ್ ಹಾಗೂ ಪುತ್ರಿ ಕನಿಮೋಳಿ ಅವರ ಜತೆ ಮಾತನಾಡಿ ಕರುಣಾನಿಧಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.

Rahul Gandhi visited Karunanidhi who is in hospital

ಕರುಣಾನಿಧಿ ಅವರನ್ನು ಕಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ತಮಿಳುನಾಡಿನ ಜನರಂತೆ ಕರುಣಾನಿಧಿ ಸಹ ಗಟ್ಟಿ ಮನಸ್ಥಿತಿ ಉಳ್ಳವರು, ನಮ್ಮ ಕುಟುಂಬದೊಂದಿಗೆ ಬಹಳ ಕಾಲದಿಂದಲೂ ಅವರು ಉತ್ತಮ ಅನುಬಂಧ ಹೊಂದಿದ್ದಾರೆ ಎಂದು ಅವರು ಹೇಳಿದರು.

Rahul Gandhi visited Karunanidhi who is in hospital

ಕರುಣಾನಿಧಿ ಅವರು ತಮಿಳುನಾಡಿನ ಸ್ಪೂರ್ತಿ ಆಗಿದ್ದು, ಸೋನಿಯಾ ಗಾಂಧಿ ಅವರು ಸಹ ಕರುಣಾನಿಧಿ ಅವರಿಗೆ ಶುಭ ಹಾರೈಕೆಗಳನ್ನು ತಿಳಿಸಿದ್ದು, ಅವರ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ್ದಾರೆ ಎಂದು ಅವರು ಹೇಳಿದರು.

English summary
AICC president Rahul Gandhi visited Chennai kauvery hospital where Tamilnadu former CM Karunanidhi has been admitted. He talked to Karunanidhi's son Stalin and daughter Kanimozhi and took information about his health.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X